ನಿರುದ್ಯೋಗ ಸಮಸ್ಯೆ ಪರಿಹರಿಸಲು ಉದ್ಯೋಗ ಮೇಳ

| Published : Jun 22 2025, 11:47 PM IST

ನಿರುದ್ಯೋಗ ಸಮಸ್ಯೆ ಪರಿಹರಿಸಲು ಉದ್ಯೋಗ ಮೇಳ
Share this Article
  • FB
  • TW
  • Linkdin
  • Email

ಸಾರಾಂಶ

ನಿರುದ್ಯೋಗ ಸಮಸ್ಯೆ ಪರಿಹರಿಸಲು ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ. ಮಕ್ಕಳು ಸದ್ಬಳಕೆ ಮಾಡಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ಶಾಸಕ ಎಂ.ಆರ್. ಮಂಜುನಾಥ್ ಹೇಳಿದರು.

ಕನ್ನಡಪ್ರಭ ವಾರ್ತೆ ಹನೂರು

ನಿರುದ್ಯೋಗ ಸಮಸ್ಯೆ ಪರಿಹರಿಸಲು ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ. ಮಕ್ಕಳು ಸದ್ಬಳಕೆ ಮಾಡಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ಶಾಸಕ ಎಂ.ಆರ್. ಮಂಜುನಾಥ್ ಹೇಳಿದರು.ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಹಾಗೂ ಅಭಿಮಾನಿಗಳ ಮತ್ತು ಪ್ರತಿಷ್ಠಿತ ಕಂಪನಿಯಾದ ನರಸಾಪುರ ಕೋಲಾರದ ಪ್ರೊಡ್ಯುಟ್ ಸೂಲ್ಯೂಷನ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಉದ್ಯೋಗ ಮೇಳದಲ್ಲಿ ವಿದ್ಯಾರ್ಥಿಗಳ ಜೊತೆ ಮಾತನಾಡಿದರು.

ರಾಜ್ಯದ ಪ್ರತಿಷ್ಠಿತ ಕಂಪನಿಯಿಂದ ಉದ್ಯೋಗ ಮೇಳವನ್ನು ಪಟ್ಟಣದಲ್ಲಿ ತಾಲೂಕಿನ ವಿದ್ಯಾರ್ಥಿಗಳಿಗೆ ನಿರುದ್ಯೋಗವನ್ನು ನಿವಾರಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಸೂಕ್ತ ದಾಖಲಾತಿಗಳನ್ನು ನೀಡಿ ಕಂಪನಿಯವರ ಜೊತೆ ಉದ್ಯೋಗ ಮೇಳದಲ್ಲಿ ಮಾಹಿತಿಯನ್ನು ಪಡೆದುಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಉತ್ತಮ ಕಾರ್ಯಕ್ರಮ ಹೀಗಾಗಿದೆ. ಕಡು ಬಡತನದಿಂದ ತಂದೆ ತಾಯಿಗಳು ಮಕ್ಕಳಿಗೆ ವಿದ್ಯಾಭ್ಯಾಸ ನೀಡಿರುವುದರಿಂದ ಅಂತಹ ವಿದ್ಯಾರ್ಥಿಗಳು ಉದ್ಯೋಗ ಪಡೆದುಕೊಳ್ಳಲು ಇದೊಂದು ಸುವರ್ಣ ಅವಕಾಶ ಸದ್ಬಳಕೆ ಮಾಡಿಕೊಂಡು ಮಕ್ಕಳು ಸಿಕ್ಕಿರುವ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಹೆಚ್ಚಾಗಿ ತಾಲೂಕಿನಿಂದ 18 ವರ್ಷಕ್ಕಿಂತ ಹೆಚ್ಚು ಮೇಲ್ಪಟ್ಟ ಅರ್ಹತೆ ಹೊಂದಿದ್ದ ವಿದ್ಯಾರ್ಥಿಗಳು ಈ ಉದ್ಯೋಗ ಮೇಳದಲ್ಲಿ ತಮ್ಮ ಯುವ ಪ್ರತಿಭೆಯನ್ನು ಗುರುತಿಸಿಕೊಂಡು ತಮ್ಮ ಆರ್ಥಿಕ ಭವಿಷ್ಯಕ್ಕಾಗಿ ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ವಿವಿಧ ಕಡೆಯಿಂದ ಆಗಮಿಸಿದ್ದ ವಿದ್ಯಾರ್ಥಿಗಳು:

ಪಟ್ಟಣದ ಸರ್ಕಾರಿ ಶಾಲಾ ಕೊಠಡಿಗಳಲ್ಲಿ ಆಯೋಜಿಸಲಾಗಿದ್ದ ಉದ್ಯೋಗ ಮೇಳದಲ್ಲಿ ಹೆಚ್ಚಾಗಿ ಹೆಣ್ಣು ಮಕ್ಕಳು ಸಹ ಹೆಚ್ಚಾಗಿ ಕಂಡುಬಂದಿರುವುದರಿಂದ ಉದ್ಯೋಗ ಮೇಳದಲ್ಲಿ ಕಾಣಿಸಿಕೊಂಡಿದ್ದು ಗಮನ ಸೆಳೆಯಿತು ಜೊತೆಗೆ ಇಲ್ಲಿನ ಪ್ರತಿಷ್ಠಿತ ಕಂಪನಿಯ ವ್ಯವಸ್ಥಾಪಕರು ಸಹ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳದ ಬಗ್ಗೆ ಸವಿಸ್ತಾರವಾಗಿ ಮಾಹಿತಿಯನ್ನು ನೀಡುವುದರ ಜೊತೆಗೆ ಗ್ರಾಮಾಂತರದ ಪ್ರದೇಶದ ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳುವಂತೆ ಕಂಪನಿ ಕಡೆಯಿಂದ ವಿದ್ಯಾರ್ಥಿಗಳಿಗೆ ಉತ್ತಮವಾಗಿ ತರಬೇತಿ ನೀಡಿ ನೀಡಲಾಗುವುದು ಎಂದರು.

ಉದ್ಯೋಗ ಮೇಳದಲ್ಲಿ ನೂರಾರು ವಿದ್ಯಾರ್ಥಿಗಳು ವಿವಿಧಡೆಯಿಂದ ತಮ್ಮ ಪೋಷಕರ ಜೊತೆ ಭಾಗವಹಿಸುವ ಮೂಲಕ ಪ್ರತಿಷ್ಠಿತ ಕಂಪನಿಯ ವ್ಯವಸ್ಥಾಪಕರಿಂದ ಮಾಹಿತಿ ಪಡೆದು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಲು ಮಕ್ಕಳು ಉತ್ಸಾಹದಿಂದ ಉದ್ಯೋಗ ಮೇಳದಲ್ಲಿ 110 ವಿದ್ಯಾರ್ಥಿಗಳು ಭಾಗವಹಿಸಿದ್ದು ಅದರಲ್ಲಿ 60 ವಿದ್ಯಾರ್ಥಿಗಳು ಕಂಪನಿಯ ನೀತಿ ನಿಯಮಗಳಿಗೆ ಉದ್ಯೋಗ ಅವಕಾಶಕ್ಕಾಗಿ ಅರ್ಜಿ ಸಲ್ಲಿಸಿದ್ದು ತಂದೆ ತಾಯಿಗಳ ಮತ್ತು ಪೋಷಕರ ಒಪ್ಪಿಗೆ ಪಡೆದು ತಿಳಿಸುವುದಾಗಿ ಸಹ ಇದೆ ವೇಳೆಯಲ್ಲಿ ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ತಿಳಿಸಿದ್ದಾರೆ.ಉದ್ಯೋಗ ಮೇಳ ವ್ಯವಸ್ಥಾಪಕರಾದ ಮಹಮದ್ ಸಾಹಿನ್ ಮತ್ತು ಮಾರ್ಕೆಟಿಂಗ್ ವ್ಯವಸ್ಥಾಪಕ ಜರಿ ಉಪಸಿತರಿದ್ದರು.