ನಿರುದ್ಯೋಗ ಪ್ರಮಾಣ ಕಡಿಮೆ ಮಾಡಲು ಉದ್ಯೋಗಮೇಳ ಸಹಕಾರಿ-ಸಚಿವ ಮಧು

| Published : Nov 16 2025, 02:30 AM IST

ನಿರುದ್ಯೋಗ ಪ್ರಮಾಣ ಕಡಿಮೆ ಮಾಡಲು ಉದ್ಯೋಗಮೇಳ ಸಹಕಾರಿ-ಸಚಿವ ಮಧು
Share this Article
  • FB
  • TW
  • Linkdin
  • Email

ಸಾರಾಂಶ

ಆಧುನಿಕ ಯುಗದಲ್ಲಿ ಉನ್ನತ ಶಿಕ್ಷಣ ಪಡೆದರೂ ಸಹ ಎಲ್ಲ ವಿಭಾಗಗಳಲ್ಲೂ ಉದ್ಯೋಗದ ಕೊರತೆ ಕಾಡುತ್ತಿದೆ. ನಿರುದ್ಯೋಗ ಪ್ರಮಾಣವನ್ನು ಕಡಿಮೆ ಮಾಡಲು ಇಂತಹ ಉದ್ಯೋಗ ಮೇಳವು ಅನುಕೂಲವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ರಾಣಿಬೆನ್ನೂರು: ಆಧುನಿಕ ಯುಗದಲ್ಲಿ ಉನ್ನತ ಶಿಕ್ಷಣ ಪಡೆದರೂ ಸಹ ಎಲ್ಲ ವಿಭಾಗಗಳಲ್ಲೂ ಉದ್ಯೋಗದ ಕೊರತೆ ಕಾಡುತ್ತಿದೆ. ನಿರುದ್ಯೋಗ ಪ್ರಮಾಣವನ್ನು ಕಡಿಮೆ ಮಾಡಲು ಇಂತಹ ಉದ್ಯೋಗ ಮೇಳವು ಅನುಕೂಲವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.ನಗರದ ಆಂಗ್ಲೋ ಉರ್ದು ಹೈಸ್ಕೂಲ್ ಮೈದಾನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಗ್ರಾಮೀಣ ಭಾಗದ ಅಭ್ಯರ್ಥಿಗಳು ಉದ್ಯೋಗವನ್ನರಿಸಿ ಪಟ್ಟಣಕ್ಕೆ ಹೋಗಲು ಭಯಪಡುತ್ತಿದ್ದಾರೆ. ಹೀಗಾಗಿ ಸ್ಥಳೀಯ ಮಟ್ಟದಲ್ಲೇ ಉದ್ಯೋಗಮೇಳ ಆಯೋಜಿಸಿ ಅವರಿಗೆ ಉದ್ಯೋಗ ಕಲ್ಪಿಸಿಕೊಡುವ ವ್ಯವಸ್ಥೆಯಾಗಬೇಕು. ಶಿಕ್ಷಣ ಕ್ಷೇತ್ರದಲ್ಲೂ ಸಾಕಷ್ಟು ಬದಲಾವಣೆ ತರಲಾಗಿದೆ. ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಕಳುಹಿಸಿ ಸರಕಾರಿ ಶಾಲೆಗಳಲ್ಲಿರುವ ಶಿಕ್ಷಕರು ಒಳ್ಳೆಯ ಜ್ಞಾನ ಉಳ್ಳವರಾಗಿರುತ್ತಾರೆ. ಹೀಗಾಗಿ ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳಲು ಸಾಧ್ಯವಾಗಲಿದೆ ಎಂದರು. ರಾಜ್ಯದಲ್ಲಿ ಖಾಲಿ ಹುದ್ದೆಗಳನ್ನು ಭರ್ತಿಮಾಡಲು ಕ್ರಮ ವಹಿಸಲಾಗಿದೆ ಮತ್ತು ಶೀಘ್ರವಾಗಿ ಅಧಿಸೂಚನೆ ಹೊರಡಿಸಲಾಗುವುದು ಎಂದರು. ಈಗಾಗಲೇ ಶಾಲೆಗಳಲ್ಲಿ ಮಕ್ಕಳಿಗೆ ಕೆಲವು ಸೌಲಭ್ಯಗಳನ್ನು ಒದಗಿಸಲಾಗಿದೆ. ಅದರ ಜೊತೆಗೆ ಮುಂದಿನ ವರ್ಷದಿಂದ ಶಾಲಾ ಮಕ್ಕಳಿಗೆ ಉಚಿತವಾಗಿ ನೋಟ್‌ಬುಕ್ ನೀಡಲಾಗುವುದು. ಪಿಯುಸಿ ವಿದ್ಯಾರ್ಥಿಗಳಿಗೂ ಉಚಿತವಾಗಿ ಪಠ್ಯಪುಸ್ತಕ ಹಾಗೂ ನೋಟ್‌ಬುಕ್ ನೀಡಲಾಗುವುದು. ಶಿಕ್ಷಣಕ್ಕೆ ಬಜೆಟ್‌ನಲ್ಲಿ ಹೆಚ್ಚು ಹಣ ನೀಡುವಂತೆಯೂ ಮುಖ್ಯಮಂತ್ರಿಯವರನ್ನು ಕೋರಲಾಗಿದೆ ಎಂದರು.ವಿಧಾನಸಭಾ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮಾತನಾಡಿ, ಇಂದು ಸಾಕಷ್ಟು ಜನ ಯುವಕರು ಉತ್ತಮ ಶಿಕ್ಷಣ ಪಡೆದರೂ ಸಹ ಉದ್ಯೋಗ ಸಿಗದೇ ನಿರುದ್ಯೋಗಿಗಳಾಗಿದ್ದಾರೆ. ಇಂತಹ ಉದ್ಯೋಗ ಮೇಳದಲ್ಲಿ ಅವರಿಗೆ ಸೂಕ್ತವಾದ ಉದ್ಯೋಗ ಪಡೆದುಕೊಳ್ಳಲು ಅನುಕೂಲವಾಗಲಿದೆ ಎಂದರು.ಕರ್ನಾಟಕ ಕೌಶಲ್ಯಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ ಮಾತನಾಡಿ, ಇಂಧನ ಉದ್ಯೋಗ ಮೇಳದಲ್ಲಿ ಸಾಕಷ್ಟು ಕಂಪನಿಗಳು ಉದ್ಯೋಗ ನೀಡಲು ಮುಂದೆ ಬಂದಿವೆ. ಯುವಕರು ಇದರ ಲಾಭ ಪಡೆದುಕೊಳ್ಳಬೇಕು. ನಿಮ್ಮ ಮನೆ ಬಾಗಿಲಿಗೆ ಉದ್ಯೋಗ ನೀಡಲು ಬಂದಿದ್ದಾರೆ. ಅದರ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳುವಂತೆ ಸೂಚಿಸಿದರು. ಅಭ್ಯರ್ಥಿಗಳು ಇಲ್ಲಿ ಸಂದರ್ಶನ ಎದುರಿಸುವುದರಿಂದ ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದೆ ಇದರಿಂದ ಮುಂದೆ ನೀವುಗಳು ಆತ್ಮ ವಿಶ್ವಾಸದಿಂದ ಎಲ್ಲವನ್ನು ಎದುರಿಸಬಹುದು ಎಂದರು ಇದೇ ಸಂದರ್ಭದಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ನಿಧನದ ಹಿನ್ನೆಲೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಶಾಸಕ ಪ್ರಕಾಶ ಕೋಳಿವಾಡ ಅಧ್ಯಕ್ಷತೆ ವಹಿಸಿದ್ದರು.ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್, ಹರಪನಹಳ್ಳಿ ಶಾಸಕಿ ಲತಾ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ಜಿಲ್ಲಾಧಿಕಾರಿ ಡಾ. ವಿಜಮಹಾಂತೇಶ್ ದಾನಮ್ಮನವರ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ. ಪುನೀತ, ಜಿಲ್ಲಾ ಕೌಶಲ್ಯಭಿವೃದ್ಧಿ ಅಧಿಕಾರಿ ಸೋನಾಲಿ ಕ್ಷೀರಸಾಗರ, ಹಾವೇಮುಲ್ ಅಧ್ಯಕ್ಷ ಮಂಜನಗೌಡ ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿರೇಶ ಮೋಟಗಿ, ಆನಂದ ಗಡ್ಡದದೇವರಮಠ, ಪೂರ್ಣಿಮಾ ಕೋಳಿವಾಡ, ಪುಟ್ಟಪ್ಪ ಮರಿಯಮ್ಮನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.759 ಅಭ್ಯರ್ಥಿಗಳಿಗೆ ಉದ್ಯೋಗ: ಉದ್ಯೋಗ ಮೇಳದಲ್ಲಿ 759 ಅಭ್ಯರ್ಥಿಗಳು ವಿವಿಧ ಕಂಪನಿಗಳಿಗೆ ನೇಮಕವಾಗಿದ್ದಾರೆ. ಜಿಲ್ಲಾ ಮಟ್ಟದ ಉದ್ಯೋಗ ಮೇಳಕ್ಕೆ 3,924 ಅಭ್ಯರ್ಥಿಗಳು ನೊಂದಾಯಿಸಿಕೊಂಡಿದ್ದರು. ಇದರಲ್ಲಿ 110 ಉದ್ಯೋಗಾತ ಕಂಪನಿಗಳು ಭಾಗವಹಿಸಿದ್ದವು. ಈ ಪೈಕಿ 2,909 ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಿದ್ದು, 1,427 ಅಭ್ಯರ್ಥಿಗಳು ಎರಡನೇ ಹಂತದ ಸಂದರ್ಶನಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.