ಸೋಮವಾರಪೇಟೆ: ಮಕ್ಕಳ ಗುಡಿ ಬೆಟ್ಟ ಸಂರಕ್ಷಣಾ ಮತ್ತು ಅಭಿವೃದ್ಧಿ ಸಮಿತಿ ಸಭೆಯು ತಾಲೂಕಿನ ಪ್ರಮುಖ ಪ್ರವಾಸಿ ತಾಣ ಮಕ್ಕಳ ಗುಡಿ ಬೆಟ್ಟದಲ್ಲಿ ಸಮಿತಿಯ ಅಧ್ಯಕ್ಷ ಸುರೇಶ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಡಾ. ಮಂತರ್ ಗೌಡ ಮಾತನಾಡಿ, ಪ್ರವಾಸಿ ತಾಣ ಮಕ್ಕಳ ಗುಡಿ ಬೆಟ್ಟದಲ್ಲಿ ಕೆಲವೊಂದು ಅಭಿವೃದ್ಧಿ ಕೆಲಸಗಳಾಗಿವೆ. ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಣಬೇಕು. ಮುಂದಿನ ದಿನಗಳಲ್ಲಿ ಮಕ್ಕಳಿಗೆ ಉದ್ಯಾನ ಸೇರಿದಂತೆ ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಲಾಗುವುದು. ಸಮಿತಿ ಸದಸ್ಯರು ಸಭೆ ಸೇರಿ ಅಭಿವೃದ್ಧಿ ಬಗ್ಗೆ ಸೂಕ್ತ ಯೋಜನೆಗಳನ್ನು ರೂಪಿಸಬೇಕಿದೆ. ಎಲ್ಲಿಯೇ ಅಭಿವೃದ್ಧಿ ಕೆಲಸಗಳಾಗುವ ಸಂದರ್ಭ ಎಲ್ಲರೂ ಆ ಕೆಲಸಗಳಿಗೆ ಕೈ ಜೋಡಿಸಬೇಕು ಎಂದರು. ಸಾಕಷ್ಟು ಪ್ರವಾಸಿ ಸ್ಥಳಗಳು ಸ್ಥಳೀಯ ಗ್ರಾಪಂ ಹೆಸರಿನಲ್ಲಿ ದಾಖಲೆಗಳನ್ನು ಮಾಡಿಸಿಕೊಂಡಿವೆ. ಅದರಂತೆ ಮಕ್ಕಳ ಗುಡಿ ಬೆಟ್ಟದ ಪ್ರದೇಶವನ್ನು ಸರ್ವೆ ಮಾಡಿಸಿಕೊಡಬೇಕೆಂಬ ಮನವಿಗೆ ಸ್ಥಳದಲ್ಲೇ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ, ಮುಂದಿನ ಒಂದು ವಾರದಲ್ಲಿ ಮಕ್ಕಳ ಗುಡಿ ಬೆಟ್ಟದ ಗಡಿ ಗುರುತಿಸುವ ಕೆಲಸ ಮಾಡಿಸಿಕೊಡಬೇಕೆಂದು ಸೂಚಿಸಿದರು.ಮಕ್ಕಳ ಗುಡಿ ಬೆಟ್ಟದ ಸುತ್ತಲೂ ಸಾಕಷ್ಟು ತ್ಯಾಜ್ಯ ಕಂಡುಬರುತ್ತಿದ್ದು, ಒಂದು ವಾರದಲ್ಲಿ ಸ್ವಚ್ಛ ಮಾಡಿಸುವಂತೆ ಕಿರಗಂದೂರು ಗ್ರಾಪಂ ಅಭಿವೃದ್ಧಿ ಅಧಿಕಾರಿ ವೇಣುಗೋಪಾಲ್ ಅವರಿಗೆ ಸೂಚಿಸಿದರು. ತ್ಯಾಜ್ಯ ಸಂಗ್ರಹಿಸಲು ಅಲ್ಲಲ್ಲಿ ತೊಟ್ಟಿಗಳು, ಆಯ್ದ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವ ಮೂಲಕ ಈ ಆವರಣವನ್ನು ಅಶುದ್ಧಗೊಳಿಸಲು ಮುಂದಾಗುವವರ ಮೇಲೆ ಸೂಕ್ತ ಕ್ರಮ ಮತ್ತು ದಂಡ ವಿಧಿಸುವ ಕೆಲಸ ಮಾಡಬೇಕು. ಆ ಮೂಲಕ ಸಾರ್ವಜನಿಕರು ಇಲ್ಲಿನ ಪರಿಸರವನ್ನು ಆಹ್ಲಾದಿಸುವಂತಾಗಬೇಕು ಎಂದರು.
ಐಗೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಬಿ. ಶಿವಕುಮಾರ್ ಮಾತನಾಡಿ, ಮಕ್ಕಳ ಗುಡಿ ಬೆಟ್ಟ ಸಮುದ್ರ ಮಟ್ಟದಿಂದ ೪ ಸಾವಿರ ಅಡಿ ಎತ್ತರದಲ್ಲಿದ್ದು, ಕಣ್ಣು ಹಾಯಿಸಿದಷ್ಟು ದೂರ ಸುಂದರ ಪರಿಸರವನ್ನು ಕಾಣಬಹುದು. ದಾನಿಗಳ ನೆರವಿನಿಂದ ಆಸನಗಳು, ತ್ಯಾಜ್ಯ ಸಂಗ್ರಹ ತೊಟ್ಟಿಗಳನ್ನು ಅಳವಡಿಸಲಾಗಿದೆ. ಕಳೆದ ಕೆಲವು ವರ್ಷಗಳಿಂದ ಮಕ್ಕಳ ಗುಡಿ ಬೆಟ್ಟದ ಭೂಮಿ ಒತ್ತುವರಿಯಾಗದಂತೆ ಗ್ರಾಮಸ್ಥರು ಒಂದು ಸಮಿತಿಯನ್ನು ಮಾಡಿಕೊಂಡು ಜಾಗವನ್ನು ಉಳಿಸಿಕೊಂಡು ಬರುವ ಕೆಲಸ ಮಾಡಿದ್ದಾರೆ. ಇಲ್ಲಿ ಇನ್ನೂ ಸಾಕಷ್ಟು ಅಭಿವೃದ್ಧಿ ಕೆಲಸವಾಗಬೇಕಿದ್ದು, ಶಾಸಕರು ಮಾಡಿಕೊಡಬೇಕೆಂದು ಮನವಿ ಮಾಡಿದರು. ವೇದಿಕೆಯಲ್ಲಿ ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ. ಚಂಗಪ್ಪ, ತಾಲೂಕು ಘಟಕದ ಅಧ್ಯಕ್ಷ ಎ.ಆರ್. ಮುತ್ತಣ್ಣ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಸತೀಶ್, ಸೆಸ್ಕ್ ಎಇಇ ವಿನಯ್ ಇದ್ದರು.ಅಭಿವೃದ್ಧಿ ಕಾರ್ಯಗಳಿಗೆ ಕೈಜೋಡಿಸಿ: ಮಂತರ್ ಗೌಡ
ಮಕ್ಕಳ ಗುಡಿ ಬೆಟ್ಟ ಸಂರಕ್ಷಣಾ ಮತ್ತು ಅಭಿವೃದ್ಧಿ ಸಮಿತಿ ಸಭೆಯು ತಾಲೂಕಿನ ಪ್ರಮುಖ ಪ್ರವಾಸಿ ತಾಣ ಮಕ್ಕಳ ಗುಡಿ ಬೆಟ್ಟದಲ್ಲಿ ಸಮಿತಿಯ ಅಧ್ಯಕ್ಷ ಸುರೇಶ್ ಅಧ್ಯಕ್ಷತೆಯಲ್ಲಿ ನಡೆಯಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.