ವಿಕಸಿತ ಭಾರತ ಕನಸು ಸಾಕಾರಕ್ಕೆ ಕೈಜೋಡಿಸಿ

| Published : May 28 2024, 01:21 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿದೇಶದ ಪ್ರತಿಯೊಬ್ಬ ನಾಗರಿಕನ ಆರೋಗ್ಯದ ಮೇಲೆಯೇ ದೇಶದ ಆರೋಗ್ಯ ಅವಲಂಬಿಸಿದೆ. ಪ್ರತಿಯೊಬ್ಬ ಭಾರತೀಯ ಸದೃಢರಾಗುವ ಮೂಲಕ 2047ರ ವೇಳೆಗೆ ವಿಕಸಿತ ಭಾರತ ಕನಸು ಸಾಕಾರಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿದೇಶದ ಪ್ರತಿಯೊಬ್ಬ ನಾಗರಿಕನ ಆರೋಗ್ಯದ ಮೇಲೆಯೇ ದೇಶದ ಆರೋಗ್ಯ ಅವಲಂಬಿಸಿದೆ. ಪ್ರತಿಯೊಬ್ಬ ಭಾರತೀಯ ಸದೃಢರಾಗುವ ಮೂಲಕ 2047ರ ವೇಳೆಗೆ ವಿಕಸಿತ ಭಾರತ ಕನಸು ಸಾಕಾರಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ ಹೇಳಿದರು.ನಗರದಲ್ಲಿ ಸೋಮವಾರ ನಡೆದ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತಿನ ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಧಾನ ಸಂಸ್ಥೆಯ 18ನೇ ಸಂಸ್ಥಾಪನಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಪಾರಂಪರಿಕ ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ. ಡಯಾಬಿಟಿಸ್ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಪಾರಂಪರಿಕ ಔಷಧ ಕಂಡುಹಿಡಿಯುವುದು ಸವಾಲಾಗಿದೆ. ವಿಜ್ಞಾನಿಗಳು ಸಂಶೋಧನಾ ಕ್ಷೇತ್ರವನ್ನು ವಿಸ್ತರಿಸುವ ಮೂಲಕ ಮಾನವ ಸಂಕುಲದ ಹಿತರಕ್ಷಿಸಬೇಕು. ದೇಶದ ಆಯುಷ್ ಇಲಾಖೆಯು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಔಷಧೀಯ ಕ್ಷೇತ್ರದಲ್ಲಿ ಸಂಶೋಧನೆ ಹಾಗೂ ಅಭಿವೃದ್ಧಿಯಲ್ಲಿ ಶ್ರಮಿಸುತ್ತಿದೆ ಎಂದು ಶ್ಲಾಘಿಸಿದರು.ಐಸಿಎಂಆರ್-ಎನ್ಐಟಿಎಂ ಕಾರ್ಯ ಶ್ಲಾಘನೀಯ:

ಆಯುರ್ವೇದ, ಯುನಾನಿ, ಸಿದ್ಧ, ಹೋಮಿಯೋಪಥಿ, ಯೋಗ ಒಳಗೊಂಡ ಆಯುಷ್ ಪದ್ಧತಿ ಭಾರತದ ಹೆಗ್ಗಳಿಕೆಯಾಗಿದೆ. ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ಪಾರಂಪರಿಕ‌ ಔಷಧ ಚಿಕಿತ್ಸಾ ವಿಧಾನದ ಪಾತ್ರ ಪ್ರಮುಖವಾಗಿದೆ. ಈ ನಿಟ್ಟಿನಲ್ಲಿ ಐಸಿಎಂಆರ್-ಎನ್ಐಟಿಎಂ ಕಾರ್ಯ ಶ್ಲಾಘನೀಯವಾಗಿದೆ ಎಂದರು.ಸಂಶೋಧನೆ ಹಾಗೂ ಅಭಿವೃದ್ಧಿ ಕೆಲಸಕ್ಕೆ ಪ್ರತಿಯೊಬ್ಬರು ಸಹಕರಿಸಬೇಕು. ವೈದ್ಯಕೀಯ ಕ್ಷೇತ್ರದಲ್ಲಿನ ಸಂಶೋಧನೆಯು ದೇಶದ ಆರ್ಥಿಕ ಅಭಿವೃದ್ಧಿಗೂ ಅನುಕೂಲವಾಗಲಿದೆ. ಹೊಸ ಬಗೆಯ ಕಾಯಿಲೆಗಳು ಕಂಡುಬರುತ್ತಿವೆ. ಈ ಬಗ್ಗೆ ಜಾಗೃತಿ ವಹಿಸಬೇಕಿದೆ. ಸಂವಹನವು ಸಮಾಜವನ್ನು ಆರೋಗ್ಯಯುತವಾಗಿರಿಸಲು ಉತ್ತಮ ಸಾಧನವಾಗಿದ್ದು, ಇದನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಕೋವಿಡ್ ಸಂದರ್ಭದಲ್ಲಿ ಪ್ರತಿಯೊಬ್ಬರು ಪರಸ್ಪರ ಸಹಕರಿಸುವ ಮೂಲಕ ಸಂದಿಗ್ಧ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಇದು ಭಾರತೀಯ ಸಂಸ್ಕೃತಿಯಾಗಿದೆ. ಕೋವಿಡ್ ಚಿಕಿತ್ಸೆ ಹಾಗೂ ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಐಸಿಎಂಆರ್ ಕಾರ್ಯ ಅತ್ಯಂತ ಅಭಿನಂದನೀಯವಾಗಿದೆ. ಭಾರತದ ಆರ್ಥಿಕತೆಯು ಒಂದು ಕಾಲದಲ್ಲಿ ಲಂಡನ್ ಹಾಗೂ ಪ್ಯಾರಿಸ್‌ಗಿಂತ ಕಡಿಮೆ ಇತ್ತು. ಈಗ ಜಗತ್ತಿನ 5ನೇ ಅತ್ಯಂತ ದೊಡ್ಡ ಆರ್ಥಿಕ ಶಕ್ತಿಯಾಗಿ ದೇಶವು ರೂಪುಗೊಂಡಿದೆ ಎಂದು ಬಣ್ಣಿಸಿದರು.ಕೇಂದ್ರ ಸರ್ಕಾರದ ವೈದ್ಯಕೀಯ ಸಂಶೋಧನಾ ಇಲಾಖೆಯ ಕಾರ್ಯದರ್ಶಿ ಡಾ.ರಾಜೀವ್ ಬಹಲ್ ಮಾತನಾಡಿ, ಐಸಿಎಂಆರ್ ನ 27 ಸಂಶೋಧನಾ ಸಂಸ್ಥೆಗಳಲ್ಲಿ ಭಾರತೀಯ ಪಾರಂಪರಿಕ ಚಿಕಿತ್ಸಾ ವಿಧಾನ ಸಂಸ್ಥೆಯು ಒಂದಾಗಿದೆ. ಕೋವಿಡ್ ಲಸಿಕೆ ಅಭಿವೃದ್ಧಿಪಡಿಸುವಲ್ಲಿ ಐಸಿಎಂಆರ್ ಪಾತ್ರ ಪ್ರಮುಖವಾಗಿದೆ ಎಂದರು.ಪಾರಂಪರಿಕ ಔಷಧ ವಿಜ್ಞಾನ ಸಂಸ್ಥೆಯು ಆಧುನಿಕ ತಂತ್ರಜ್ಞಾನಗಳ ಮೂಲಕ ಪಾರಂಪರಿಕ ಔಷಧೀಯ ಕ್ಷೇತ್ರದಲ್ಲಿ ಸಂಶೋಧನೆ ಕೈಗೊಳ್ಳುತ್ತಿದೆ. ಪಶ್ಚಿಮ ಘಟ್ಟದಲ್ಲಿರುವ ಔಷಧೀಯ ಸಸ್ಯಸಂಕುಲಗಳ ಅಧ್ಯಯನ ನಡೆಸುವ ಮೂಲಕ ಗಿಡಮೂಲಿಕೆ ಔಷಧಿ ತಯಾರಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ ಎಂದು ತಿಳಿಸಿದರು.ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಬೆಳಗಾವಿಯ ಐಸಿಎಂಆರ್-ಎನ್‌ಐಟಿಎಂ ನಿರ್ದೇಶಕ ಡಾ.ಸುಬರ್ಣ ರಾಯ್, ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯ ಜಂಟಿ‌ ಕಾರ್ಯದರ್ಶಿ ಅನು ನಾಗರ, ಡಾ.ಆರ್‌.ಲಕ್ಷ್ಮೀನಾರಾಯಣ ಉಪಸ್ಥಿತರಿದ್ದರು. ಇದೇ ವೇಳೆ ಐಸಿಎಂಆರ್‌-ಎನ್ಐಟಿಎಂ ಪ್ರಯೋಗಾಲಯಕ್ಕೆ ಉಪರಾಷ್ಟ್ರಪತಿ ಜಗದೀಪ ಧನಕರ ಭೇಟಿ ನೀಡಿ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿದರು. ಅಲ್ಲದೇ, ಐಸಿಎಂಆರ್‌ ಆವರಣದಲ್ಲಿ ಸಸಿ ನೆಟ್ಟರು.

ಕೋಟ್‌...

ವೈದ್ಯಕೀಯ ಕ್ಷೇತ್ರದಲ್ಲಿ ದೇಶವನ್ನು ಮುಂಚೂಣಿಗೆ ಕರೆದೊಯ್ಯುವ ಹೊಣೆಗಾರಿಕೆ ವಿಜ್ಞಾನಿಗಳು, ಸಂಶೋಧಕರ‌ ಮೇಲಿದೆ. ಜೀವವೈವಿದ್ಯವನ್ನು ಕಾಪಾಡುವ ಮೂಲಕ ಪಾರಂಪರಿಕ‌ ಔಷಧೀಯ ಪದ್ಧತಿಯನ್ನು ಮುಂದಿನ ಪೀಳಿಗೆಗೆ ಉಳಿಸಿ, ಬೆಳೆಸಬೇಕು.

-ಜಗದೀಪ್ ಧನಕರ, ಉಪರಾಷ್ಟ್ರಪತಿ.