ಸಾರಾಂಶ
ಕನ್ನಡಪ್ರಭ ವಾರ್ತೆ ಕೆ.ಆರ್. ನಗರಕರ್ನಾಟಕ ವಿಧಾನ ಪರಿಷತ್ ನ ದಕ್ಷಿಣ ಶಿಕ್ಷಕರ ಕ್ಷೇತ್ರದ ಸದಸ್ಯ ಸ್ಥಾನಕ್ಕೆ ನಡೆದು, ಚುನಾವಣೆಯಲ್ಲಿ ಕೆ.ಆರ್. ನಗರ ತಾಲೂಕಿನಲ್ಲಿ ಶೇ. 91.30 ಮತ್ತು ಸಾಲಿಗ್ರಾಮ ತಾಲೂಕಿನಲ್ಲಿ ಶೇ. 87.40 ಮತದಾನವಾಗಿದೆ.ಸಾಲಿಗ್ರಾಮ ತಾಲೂಕಿನ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ತೆರೆಯಲಾಗಿದ್ದ ಮತಗಟ್ಟೆಯಲ್ಲಿ 191 ಮತದಾರರ ಪೈಕಿ 167 ಮಂದಿ ತಮ್ಮ ಹಕ್ಕು ಚಲಾಯಿಸಿದ್ದು, ಇವರಲ್ಲಿ 127 ಪುರುಷರು ಮತ್ತು 40 ಮಂದಿ ಮಹಿಳಾ ಮತದಾರರು ಮತದಾನ ಮಾಡಿದ್ದಾರೆ.ಕೆ.ಆರ್. ನಗರ ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ತೆರೆಯಲಾಗಿದ್ದ ಮತ ಕೇಂದ್ರದಲ್ಲಿ 430 ಶಿಕ್ಷಕ ಮತದಾರರು ಮತದಾನ ಮಾಡಿದ್ದು, ಈ ಪೈಕಿ 290 ಪುರುಷರು ಮತ್ತು 140 ಮಹಿಳಾ ಮತದಾರರಾಗಿದ್ದಾರೆ.ಬೆಳಗ್ಗೆ 8 ರಿಂದ ಸಂಜೆ 4ರವರೆಗೆ ಸಾಲಿಗ್ರಾಮ ಮತ್ತು ಕೆ.ಆರ್. ನಗರ ಮತಗಟ್ಟೆಗಳಲ್ಲಿ ನಡೆದ ಮತದಾನ ಅತ್ಯಂತ ಶಾಂತಿಯುತವಾಗಿ ನಡೆಯಿತಲ್ಲದೆ, ಶಿಕ್ಷಕ ಮತದಾರರು ಅತ್ಯಂತ ಹುರುಪಿನಿಂದ ಬಂದು ತಮ್ಮ ಹಕ್ಕು ಚಲಾಯಿಸಿದರು. ಮತದಾನಕ್ಕೆ ಅಡ್ಡಿಯಾದ ಮಳೆರಾಯಕೆ.ಆರ್. ನಗರ ಪಟ್ಟಣದಲ್ಲಿ ಮಧ್ಯಾಹ್ನ 2.30 ರಿಂದ 3.30ರವರೆಗೆ ಭಾರೀ ಮಳೆ ಸುರಿದ ಪರಿಣಾಮ ಮತದಾನಕ್ಕೆ ಸ್ವಲ್ಪ ಅಡಚಣೆಯಾಯಿತು. ಇದರಿಂದ ತೊಂದರೆಗೊಳಗಾದ ಮತದಾರರು ಮತಗಟ್ಟೆಗೆ ಬರಲು ಕಾರು ಮತ್ತು ಆಟೋಗಳನ್ನು ಬಳಸಬೇಕಾಯಿತು. ಕೆ.ಆರ್. ನಗರ ಮತಗಟ್ಟೆಯಲ್ಲಿ ತಹಸೀಲ್ದಾರ್ ಸಿ.ಎಸ್. ಪೂರ್ಣಿಮಾ ಮತ್ತು ಸಾಲಿಗ್ರಾಮ ಮತ ಕೇಂದ್ರದಲ್ಲಿ ತಹಸೀಲ್ದಾರ್ ಎಸ್.ಎನ್. ನರಗುಂದ್ ಅವರ ನೇತೃತ್ವ ಮತ್ತು ಪೊಲೀಸ್ ಬಂದೋಬಸ್ತಿನಲ್ಲಿ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಸದಸ್ಯ ಸ್ಥಾನದ ಚುನಾವಣೆ ಮತದಾನ ಅತ್ಯಂತ ಯಶಸ್ವಿಯಾಗಿ ನಡೆಯಿತು.ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರ ಪರವಾಗಿ ಶಾಸಕ ಡಿ. ರವಿಶಂಕರ್, ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್, ಪ್ರಧಾನ ಕಾರ್ಯದರ್ಶಿ ಎಸ್.ಎಸ್. ಸಂದೇಶ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್. ಮಹೇಶ್, ನಿರ್ದೇಶಕ ಕೆ.ಎನ್. ಪ್ರಸನ್ನಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್. ಮಹದೇವ್, ಉದಯಶಂಕರ್, ನಗರಾಧ್ಯಕ್ಷ ಎಂ.ಜೆ. ರಮೇಶ್, ತಾಲೂಕು ವಕ್ತಾರ ಸೈಯದ್ಜಾಬೀರ್, ಪುರಸಭೆ ಮಾಜಿ ಅಧ್ಯಕ್ಷೆ ಎಚ್.ಎಂ. ಗೀತಾಮಹೇಶ್, ಸದಸ್ಯರಾದ ನಟರಾಜು, ಶಿವಕುಮಾರ್, ಕೆ.ಎಸ್. ಶಂಕರ್ ಮತ ಕೇಂದ್ರದ ಬಳಿ ಅಂತಿಮ ಕ್ಷಣದಲ್ಲಿ ಮತ ಯಾಚಿಸಿದರು.ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೆ. ವಿವೇಕಾನಂದ ಅವರ ಪರವಾಗಿ ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹೊಸಹಳ್ಳಿ ವೆಂಕಟೇಶ್, ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ತಾಲೂಕು ಜೆಡಿಎಸ್ ಅಧ್ಯಕ್ಷ ಎಚ್.ಸಿ. ಕುಮಾರ್, ತಾಲೂಕು ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ರಾಜಲಕ್ಷ್ಮೀ, ನಗರ ಜೆಡಿಎಸ್ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಭಾಗ್ಯಮ್ಮ, ತಾಲೂಕು ವಕ್ತಾರ ಕೆ.ಎಲ್. ರಮೇಶ್, ಪುರಸಭೆ ಸದಸ್ಯರಾದ ಕೆ.ಪಿ. ಪ್ರಭುಶಂಕರ್, ಸಂತೋಷ್ ಗೌಡ, ಉಮೇಶ್, ಕೆ.ಎಲ್. ಜಗದೀಶ್, ಮಾಜಿ ಸದಸ್ಯ ಉಮಾಶಂಕರ್ ಬಿರುಸಿನಿಂದ ಮತಯಾಚಿಸಿ ಬೆಂಬಲ ಕೋರಿದರು.