ಸಾರಾಂಶ
ಕಕ್ಕುಂದಕಾಡು ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಸಮೀಪದ ಕಕ್ಕುಂದಕಾಡು ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಬುಧವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಅದ್ಧೂರಿಯಿಂದ ಸಂಪನ್ನಗೊಂಡಿತು.ಮಂಗಳವಾರ ಮಹಾಪೂಜೆ ಧ್ವಜಾರೋಹಣ ದೀಪಾರಾಧನೆ, ದೇವರ ಪ್ರದಕ್ಷಣೆ ಬಲಿಯೊಂದಿಗೆ ಉತ್ಸವಕ್ಕೆ ಚಾಲನೆ ನೀಡಿ ಬಳಿಕ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಬುಧವಾರ ದೇವಾಲಯದಲ್ಲಿ ಬೆಳಗ್ಗೆ ದೇವರ ದರ್ಶನ ಬಲಿ, ಬಳಿಕ , ಮಹಾಭಿಷೇಕ ಮತ್ತು ಮಧ್ಯಾಹ್ನ ಮಹಾಪೂಜೆ, ವಿಶೇಷ ಸೇವೆಗಳು, ದೇವರ ಪ್ರದಕ್ಷಿಣೆ ನೃತ್ಯ ಜರುಗಿ ಮಹಾಮಂಗಳಾರತಿ ನಂತರ ತೀರ್ಥ, ಪ್ರಸಾದ ವಿತರಣೆ ಮತ್ತು ಉತ್ಸವದಲ್ಲಿ ಪಾಲ್ಗೊಂಡ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಸಂಜೆ ಪಟ್ಟಣದಲ್ಲಿ ದೇವರ ಉತ್ಸವ ಮೂರ್ತಿಯನ್ನು ಚೆಂಡೆ, ವಾದ್ಯಗೋಷ್ಠಿಗಳೊಂದಿಗೆ ಪಟ್ಟಣದಲ್ಲಿ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಕಾವೇರಿ ನದಿಯಲ್ಲಿ ಅವಭೃತ ಸ್ನಾನದ ಬಳಿಕ ಸನ್ನಿಧಿಗೆ ಹಿಂತಿರುಗಿ ದೇವರ ಪ್ರದಕ್ಷಿಣೆ ನೃತ್ಯ ಬಲಿ ಜರುಗಿತು. ಗುರುವಾರ ಶುದ್ಧ ನವಕ ಕಲಶ, ಮಹಾಪೂಜೆ, ಮಂತ್ರಾಕ್ಷತೆಯೊಂದಿಗೆ ಜಾತ್ರಾ ಮಹೋತ್ಸವ ಸಂಪನ್ನಗೊಳ್ಳಲಿದೆ. ದೇವಾಲಯದ ಮುಖ್ಯ ಅರ್ಚಕ ಸುಧೀರ, ತಂತ್ರಿಗಳಾಗಿ ರಮೇಶ್ ಶರ್ಮಾ, ಸುರೇಶ್ ಶರ್ಮ, ಸತ್ಯಮೂರ್ತಿ ಸರಳಾಯ, ಧಾರ್ಮಿಕ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಶ್ರೀನಿವಾಸ ಟಿ. ಆರ್., ಕಾರ್ಯದರ್ಶಿ ಸುಜಿ ಕುಮಾರ್ ಟಿ.ಎ, ಖಜಾಂಚಿ ಗೋಪಾಲ ಎಂ.ಪಿ , ಉಪಾಧ್ಯಕ್ಷ ಟಿ. ಕೆ ಸೂರ್ಯಕುಮಾರ್, ಕಾರ್ಯಾಧ್ಯಕ್ಷ ರಮೇಶ್ ಟಿ.ಎನ್., ಹಿರಿಯರಾದ ಆನಂದ ಸ್ವಾಮಿ, ನಿರ್ದೇಶಕರಾದ ರಾಧಾಕೃಷ್ಣ ರೈ, ತಂಗ, ಮಹೇಶ್, ಸೀನ, ಭವಾನಿ, ಲೀಲಾ ಸೇರಿದಂತೆ ಉತ್ಸವದಲ್ಲಿ ಊರಿನ ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.