ಸಾರಾಂಶ
ಬೇತು ಗ್ರಾಮದ ಚೆರಿಯಪರಂಬುವಿನ ಕಕ್ಕುಂದಕಾಡು ವೆಂಕಟೇಶ್ವರ ದೇವಾಲಯ ಸಂಪರ್ಕ ಕಾಂಕ್ರಿಟ್ ರಸ್ತೆ ಉದ್ಘಾಟಿಸಲಾಯಿತು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಸಮೀಪದ ಬೇತು ಗ್ರಾಮದ ಚೆರಿಯಪರಂಬುವಿನಿಂದ ಕಕ್ಕುಂದ ಕಾಡು ಶ್ರೀ ವೆಂಕಟೇಶ್ವರ ದೇವಾಲಯ ಸಂಪರ್ಕ ಕಾಂಕ್ರೀಟ್ ರಸ್ತೆಯನ್ನು ಗುರುವಾರ ಉದ್ಘಾಟಿಸಲಾಯಿತು.ನೂತನ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಗ್ರಾಮಸ್ಥರ
ಬೇಡಿಕೆಯಂತೆ ಶಾಸಕರ ಅನುದಾನ 15 ಲಕ್ಷ ರು. ದಲ್ಲಿ ಬಾಳೆಯಡ ಕುಟುಂಬಸ್ಥರ ಮನೆಯಾಗಿ ಶ್ರೀ ವೆಂಕಟೇಶ್ವರ ದೇವಾಲಯ ರಸ್ತೆಗೆ ಸಂಪರ್ಕಿಸುವ ಕಾಂಕ್ರೀಟ್ ರಸ್ತೆಯನ್ನು ನಿರ್ಮಿಸಲಾಗಿದೆ. ಇದರಿಂದ ಗ್ರಾಮಸ್ಥರ ಬಹುದಿನದ ಬೇಡಿಕೆ ಈಡೇರಿದಂತಾಗಿದೆ ಎಂದು ಗ್ರಾಮಸ್ಥರ ಪರವಾಗಿ ಶಾಸಕರಿಗೆ ಧನ್ಯವಾದ ಸಮರ್ಪಿಸಿದರು.ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕಂಗoಡ ಶಶಿ ಮಂದಣ್ಣ, ಕೆಡಿಪಿ ಸದಸ್ಯ ಕಲಿಯಂಡ ಕೌಶಿ ಕುಶಾಲಪ್ಪ, ಕಾಂಗ್ರೆಸ್ ವಲಯ ಅಧ್ಯಕ್ಷ ಮಾಚೇಟಿರ ಕುಸು ಕುಶಾಲಪ್ಪ, ಗ್ರಾಮಸ್ಥರಾದ ಅಪ್ಪಸ್ವಾಮಿ, ಅಬ್ದುಲ್ಲ, ಶಾಫಿ, ಅಣ್ಣಯ್ಯ, ಬಾಲೆಯಡ ಪ್ರಿಯ, ಇನ್ನಿತರರು ಉಪಸ್ಥಿತರಿದ್ದರು.