• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಕೆಆರ್‌ಟಿಸಿ ಸಿಬ್ಬಂದಿಗೆ ₹1.20 ಕೋಟಿ ವಿಮಾ ಯೋಜನೆಗೆ ಒಪ್ಪಂದ
ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ದೇಶದ ಸಾರಿಗೆ ನಿಗಮಗಳ ಇತಿಹಾಸದಲ್ಲಿಯೇ ಪ್ರಥಮವಾಗಿ ತನ್ನ ನೌಕರರಿಗೆ ಪ್ರೀಮಿಯಂ ರಹಿತ ರು. 1.20 ಕೋಟಿ ವಿಮಾ ಯೋಜನೆಗೆ ಗುರುವಾರ ಬೆಂಗಳೂರಿನಲ್ಲಿ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಉಪಸ್ಥಿತಿಯಲ್ಲಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಜೊತೆಗೆ ಒಡಂಬಡಿಕೆ ಮಾಡಿಕೊಂಡಿದೆ.
7 ಜನ ಬಾಲ ಕಾರ್ಮಿಕರ ರಕ್ಷಣೆ
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ಹೋಬಳಿಯ ಲಾಡ್ಲಾಪೂರ, ನಾಲವಾರ ಮತ್ತು ಸನ್ನತಿ ರೋಡ್‍ನ ಹತ್ತಿ ಹೊಲದಲ್ಲಿ ಹಠಾತ್‌ ದಾಳಿ ನಡೆಸಿ 7 ಜನ ಬಾಲಕಿಯರನ್ನು ರಕ್ಷಿಸಿ, ಸರ್ಕಾರಿ ಬಾಲಕಿರ ಮಂದಿರದಲ್ಲಿ ತಾತ್ಕಾಲಿಕವಾಗಿ ದಾಖಲಿಸಲಾಗಿದೆ ಎಂದು ಸಹಾಯಕ ಕಾರ್ಮಿಕ ಆಯುಕ್ತರಾದ ಡಾ.ಅವಿನಾಶ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೈಕುಂಠ ಏಕಾದಶಿಗೆ 70 ಸಾವಿರಕ್ಕೂ ಹೆಚ್ಚು ಭಕ್ತರ ನಿರೀಕ್ಷೆ
ಎರಡನೇ ತಿರುಪತಿಯಂದೇ ಪ್ರಖ್ಯಾತಿ ಪಡೆದಿರುವ ಸುಗೂರ (ಕೆ) ಗ್ರಾಮದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿನ ವೈಕುಂಠ ಏಕದಶಿ ಕಾರ್ಯಕ್ರಮಕ್ಕೆ 70 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ದ್ವಾದಶಿ ಉತ್ಸವ ಹಾಗೂ ಉತ್ತರ ದ್ವಾರ ದರ್ಶನವು ಅದ್ಧೂರಿಯಾಗಿ ನಡೆಯುತ್ತದೆ.
ತಹಸೀಲ್ ಕಚೇರಿಗೆ ಕುರಿ ನುಗ್ಗಿಸಿ ಎಸ್.ಟಿ ಮೀಸಲಾತಿಗೆ ಆಗ್ರಹ
ಕುರುಬ ಸಮುದಾಯಕ್ಕೆ ಎಸ್.ಟಿ. ಮೀಸಲಾತಿ ಸಿಗಬೇಕೆಂದು ಅಫಜಲ್ಪುರ ಪಟ್ಟಣದ ತಹಸೀಲ್ದಾರ್‌ ಕಚೇರಿಗೆ ಕುರಿ ಹಿಂಡು ನುಗ್ಗಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಅಫಜಲ್ಪುರ ಪಟ್ಟಣದ ಅಮೋಘಸಿದ್ದೇಶ್ವರ ದೇವಸ್ಥಾನದಲ್ಲಿ ಪ್ರತಿಭಟನಾ ಪೂರ್ವ ಸಭೆ ನಡೆಸಿ ತಹಸೀಲ್ದಾರ್‌ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಗ್ರೆಡ್-2 ತಹಸೀಲ್ದಾರ ಮುಖಾಂತರ ರಾಜ್ಯಪಾಲರು ಹಾಗೂ ಕೇಂದ್ರ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಸಿಡಿಪಿಓ ಕಚೇರಿ ಎದುರು ಕಾರ್ಯಕರ್ತೆಯರ ಪ್ರತಿಭಟನೆ
ಅಂಗನವಾಡಿ ಕೇಂದ್ರಗಳಿಗೆ ೧೮ ತಿಂಗಳಿಂದ ಬಾಕಿ ಇರುವ ಬಾಡಿಗೆ ಬಿಲ್ ಮತ್ತು ೨೨ ತಿಂಗಳ ತರಕಾರಿ ಬಿಲ್ ಬಿಡುಗಡೆಗೆ ಆಗ್ರಹಿಸಿ ಹಾಗೂ ಕೇಂದ್ರಗಳಿಗೆ ೬ ವರ್ಷಗಳಿಂದ ಸಿಲಿಂಡರ್ ವಿತರಣೆ ಮಾಡದ ಸರ್ಕಾರದ ಕ್ರಮವನ್ನು ವಿರೋಧಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿ ಎದುರು ಕರ್ನಾಟಕ ಅಂಗನವಾಡಿ ನೌಕರರ ಸಂಘ ತಾಲೂಕು ಸಮಿತಿಯಿಂದ ಧರಣಿ ಸತ್ಯಗ್ರಹ ನಡೆಸಿ ಸರ್ಕಾರದ ವಿರುದ್ಧ ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದರು.
ಶಹಾಪುರ ಪೌರಾಯುಕ್ತರ ವಿರುದ್ಧ ಕ್ರಮಕ್ಕೆ ಆಗ್ರಹ
ಶಹಾಪುರ ನಗರಸಭೆಯ ಪೌರ ಕಾರ್ಮಿಕರ ಮೇಲೆ ಮೇಲಧಿಕಾರಿಗಳು ದೌರ್ಜನ್ಯವೆಸಗಿ, ಇಬ್ಬರು ಕಾರ್ಮಿಕ ಮುಖಂಡರನ್ನು ಬೇರಡೆ ನಿಯೋಜನೆ ಮಾಡಿದ್ದಾರೆಂದು ಆರೋಪಿಸಿದ ಕಟ್ಟಡ ಕಾರ್ಮಿಕರ ಸಂಘವು, ಪೌರಾಯುಕ್ತರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ನಗರದಲ್ಲಿ ತಹಸೀಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಬುಧವಾರ ಮನವಿ ಪತ್ರ ಸಲ್ಲಿಸಿತು.
ಆ್ಯಂಬುಲೆನ್ಸ್‌ಗೆ ಜಿಪಿಎಸ್ ಅಳವಡಿಸಿ: ವೈದ್ಯಕೀಯ ಸಚಿವ ಡಾ.ಶರಣಪ್ರಕಾಶ ಪಾಟೀಲ್‌
ಕಲಬುರಗಿ ಜಿಲ್ಲೆಯಲ್ಲಿ ರಸ್ತೆ ಅಪಘಾತ, ಹೆರಿಗೆ ಸೇರಿದಂತೆ ತುರ್ತು ಸಂದರ್ಭದಲ್ಲಿ ಜಿಮ್ಸ್ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆ ಬಗ್ಗೆ ಇಲ್ಲದ ಮಾಹಿತಿ ನೀಡಿ ರೋಗಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸುವ 108 ಆ್ಯಂಬುಲೆನ್ಸ್‌ ವಾಹನ ಚಾಲಕರ ದಂಧೆಗೆ ಕಡಿವಾಣ ಹಾಕಬೇಕು. ರಸ್ತೆ ಅಪಘಾತ ಪ್ರಕರಣದಲ್ಲಿ ತುರ್ತು ಚಿಕಿತ್ಸೆ ಅವಶ್ಯಕತೆ ಇರುತ್ತದೆ. ಇಂತಹ ಸಂದರ್ಭದಲ್ಲಿ 108 ಆ್ಯಂಬುಲೆನ್ಸ್‌ ವಾಹನ ಚಾಲಕರು ಜಿಮ್ಸ್ ಆಸ್ಪತ್ರೆಗೆ ಹೋದರೆ ಅಲ್ಲಿ ವೈದ್ಯರಿರಿಲ್ಲ. ಸರಿಯಾಗಿ ಚಿಕಿತ್ಸೆ ಸಿಗಲ್ಲ ಎಂಬಿತ್ಯಾದಿ ಸುಳ್ಳು ಹೇಳಿ ಪ್ರತಿಷ್ಠಿತ ಖಾಸಗಿ ಅಸ್ಪತ್ರೆಗೆ ಸೇರಿಸುತ್ತಿದ್ದಾರೆ.
ಕಲಬುರಗಿ ಕೌಶಲ್ಯ ಕೇಂದ್ರಕ್ಕೆ ಒತ್ತು
ಕಲಬುರಗಿಯನ್ನು ಕೌಶಲ್ಯ ಕೇಂದ್ರವಾಗಿಸುತ್ತೇವೆಂದ ಪ್ರಿಯಾಂಕ್‌ ಖರ್ಗೆ ಬೆಂಗಳೂರು ಹೊರತುಪಡಿಸಿ ಅದ್ಹೇಗೆ ಕೌಶಲ್ಯವನ್ನ ರಾಜ್ಯದ ಇತರೆ ನಗರಗಳಿಗೆ ಕೊಂಡೊಯ್ಯುವ ಸಾಧ್ಯಾಸಾಧ್ಯತೆಗಳನ್ನೆಲ್ಲ ಪರಿಶೀಲಿಸಿ ಸಲಹೆ. ಸೂಚನೆ ನೀಡುವುದಕ್ಕೇ ಕೌಶಲ್ಯ ಸಲಹಾ ಪರಿಷತ್ತನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ವಿಕಾಟ ಕಲಬುರಗಿ ಸಿಮೆಂಟ್‌ ಕಂಪನಿ ಮುಂದೆ ಬಿಜೆಪಿ ಮಾಜಿ ಶಾಸಕ ರಾಜಕುಮಾರ ಪಾಟೀಲ ಮತ್ತು ಬೆಂಬಲಿಗರ ಪ್ರತಿಭಟನೆ
ಛತ್ರಸಾಲ ಗ್ರಾಮದಲ್ಲಿ ಕಳೆದ ೧೪ ವರ್ಷಗಳಿಂದ ಸ್ಥಾಪಿತವಾಗಿರುವ ವಿಕಾಟ ಕಲಬುರಗಿ ಸಿಮೆಂಟ್‌ ಕಂಪನಿಯಲ್ಲಿ ಜಮೀನು ಕಳೆದುಕೊಂಡವರಿಗೆ ಉದ್ಯೋಗ, ಮಕ್ಕಳಿಗೆ ಶಿಕ್ಷಣ ಹಾಗೂ ಮೂಲ ಸೌಕರ್ಯಗಳನ್ನು ನೀಡದೇ ಗಡಿಪ್ರದೇಶ ಜನರಿಗೆ ಕಂಪನಿ ವಂಚಿತಗೊಳಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಬಿಜೆಪಿ ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಿಕಾಟ ಕಲಬುರಗಿ ಸಿಮೆಂಟ ಕಂಪನಿ ಮುಂದೆ ಪ್ರತಿಭಟನೆ ನಡೆಸಿದರು.
ಕೆಂಬಾಳೆ, ತೊಗರಿ, ಸಿರಿಧಾನ್ಯಗಳಿಗೆ ಮಾರುಕಟ್ಟೆ ಕಲ್ಪಿಸಿ: ಪ್ರಿಯಾಂಕ್‌ ಖರ್ಗೆ
ಕಲಬುರಗಿಯ ಕಮಲಾಪೂರದಲ್ಲಿ ಬೆಳೆಯುವ ಕೆಂಬಾಳೆ, ಏಶಿಯಾದಲ್ಲಿಯೆ ಗುಣಮಟ್ಟದಿಂದ ಕೂಡಿರುವ ಇಲ್ಲಿ ಬೆಳೆಯುವ ತೊಗರಿ, ಸಿರಿಧಾನ್ಯ ಸೇರಿದಂತೆ ಕೃಷಿ, ತೋಟಗಾರಿಕೆ ಉತ್ಪನ್ನಗಳ ಮಾರುಕಟ್ಟೆಗೆ ಸೂಕ್ತ ವೇದಿಕೆ ಮತ್ತು ಬ್ಯಾಂಡಿಂಗ್ ಗೆ ಎಕ್ಸಿಲೆನ್ಸ್ ಸೆಂಟರ್ ಸ್ಥಾಪನೆಗೆ ಮುಂದಾಗಿ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
  • < previous
  • 1
  • ...
  • 196
  • 197
  • 198
  • 199
  • 200
  • 201
  • 202
  • 203
  • 204
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved