ಬದುಕಿನುದ್ದಕ್ಕೂ ಸರ್ವ ಜೀವಿಗೂ ಲೇಸನ್ನೆ ಬಯಸಿದ್ದ ಬಸವಣ್ಣ: ಡಾ.ಶರಣಪ್ರಕಾಶ ಪಾಟೀಲಹನ್ನೆರಡನೇ ಶತಮಾನದಲ್ಲಿ ಜಾತಿ ರಹಿತ ಸಮ-ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಬದುಕಿನುದ್ದಕ್ಕೂ ಸರ್ವ ಜೀವಿಗೂ ಲೇಸನ್ನೆ ಬಯಸಿದ್ದ ಬಸವಣ್ಣ ಮತ್ತು ಬಸವಾದಿ ಶರಣರ ವಚನಗಳು ಇಡೀ ವಿಶ್ವಕ್ಕೆ ಪರಿಚಯಿಸುವ ನಿಟ್ಟಿನಲ್ಲಿ ಕಲಬುರಗಿಯಲ್ಲಿ ವಚನ ಮಂಟಪ ನಿರ್ಮಾಣ ಮಾಡಲಾಗುವುದು ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೋವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.