ಕವಿ ಲಕ್ಕೂರು ಆನಂದ ಅಪ್ರತಿಮ ಸಾಹಿತ್ಯ ಪ್ರತಿಭೆ: ಪ್ರೊ. ದಯಾನಂದ ಅಗಸರನನ್ನ ಅಣ್ಣ ಓದು ಮತ್ತು ಬರವಣಿಗೆಯ ತುಡಿತವನ್ನು ಬಹಳ ಬೆಳೆಸಿಕೊಂಡಿದ್ದರು. ರಾತ್ರಿ ಮೂರು ಗಂಟೆವರೆಗೂ ಬರೆದು ಮತ್ತೆ ಬೆಳಗಿನ ಐದು ಗಂಟೆಗೆದ್ದು ಮತ್ತೆ ಸಾಹಿತ್ಯ ಬರೆಯುತ್ತಿದ್ದರು. ಏಕೆ ಇಷ್ಟು ನಿದ್ದೆಗೆಡುತ್ತಿ ಅಂತ ನಾ ಕೇಳಿದರೆ, ನೋಡು ನನ್ನ ಜೀವನದಲ್ಲಿ ಏನು ಬೇಕಾದರೂ ತಗೊ ಆದರೆ, ನನ್ನಿಂದ ಅಕ್ಷರ ಕಿತ್ತುಕೊಳ್ಳಬೇಡ ಎನ್ನುತ್ತಿದ್ದರು ಎಂದು ಅಣ್ಣನ ಅಗಲಿಕೆ ನೆನೆದು ನಾಗರಾಜ ಲಕ್ಕೂರು ಭಾವುಕರಾದರು.