ಸಾರಾಂಶ
ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕನ್ನಡಪ್ರಭ ವಾರ್ತೆ ನಾಪೋಕ್ಲುಮೂರ್ನಾಡು ವಿದ್ಯಾ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ವಿದ್ಯಾ ಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ನೆರವಂಡ ಸೋಮಣ್ಣ ಬೊಳ್ಯವ್ವ ಜ್ಞಾಪಕಾರ್ಥ ಆಯೋಜಿಸಿದ ಜಿಲ್ಲಾಮಟ್ಟದ ರಸಪ್ರಶ್ನೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಚೌರಿರ ಡಾ. ಜಗತ್ ತ್ತಿಮ್ಮಯ್ಯನವರು ವಹಿಸಿದ್ದರು.ಈ ರಸಪ್ರಶ್ನೆ ಕಾರ್ಯಕ್ರಮಕ್ಕೆ ಜಿಲ್ಲೆಯ ಒಟ್ಟು 14 ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು ಅದರಲ್ಲಿ ಆರು ತಂಡಗಳು ಅಂತಿಮವಾಗಿ ಆಯ್ಕೆಯಾದರು. ಇದರಲ್ಲಿ ಪ್ರಥಮ ಬಹುಮಾನವನ್ನು ಕಳತ್ ಮಾಡು ಲೈನ್ಸ್ ಪ್ರೌಢಶಾಲೆ ಯ ವಿದ್ಯಾರ್ಥಿಗಳು , ದ್ವಿತೀಯ ಬಹುಮಾನವನ್ನು ನಾಪೋಕ್ಲುವಿನ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು , ತೃತೀಯ ಬಹುಮಾನವನ್ನು ನಾಪೋಕ್ಲುವಿನ ಎಕ್ಸೆಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಪಡೆದುಕೊಂಡರು.ಮುಖ್ಯ ಅತಿಥಿಗಳಾಗಿ ಬಹುಮಾನ ಪ್ರಾಯೋಜಕರು ಕುಂಬಳದಾಳು ಗ್ರಾಮಸ್ಥರಾದ ನೇರವಂಡ ಮುತ್ತಪ್ಪ, ಮೂರ್ನಾಡು ವಿದ್ಯಾ ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ವೇಣು ಅಪ್ಪಣ್ಣ, ಹಾಗೂ ಮೂರ್ನಾಡು ವಿದ್ಯಾ ಸಂಸ್ಥೆಯ ಖಜಾಂಚಿಗಳಾದ ಯತೀಶ್ ವಿ ಎ, ನಿರ್ದೇಶಕರಾದ ಪುದಿಯೋಕ್ಕಡ ಹರೀಶ್ ದೇವಯ್ಯ ಉಪಸ್ಥಿತರಿದ್ದರು.ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕರಾದ ಪಿ.ಕೆ ರವಿಶಂಕರ್ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಈ ಸಂದರ್ಭ ಕಾರ್ಯಕ್ರಮದಲ್ಲಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))