ಕಲ್ಯಾಣ ಕರ್ನಾಟಕ ಉತ್ಸವ, ಕೊಪ್ಪಳದಲ್ಲಿ ಸಿಎಂ ಧ್ವಜಾರೋಹಣ ನೆರವೇರಿಸಲಿ

| Published : Sep 13 2025, 02:05 AM IST

ಕಲ್ಯಾಣ ಕರ್ನಾಟಕ ಉತ್ಸವ, ಕೊಪ್ಪಳದಲ್ಲಿ ಸಿಎಂ ಧ್ವಜಾರೋಹಣ ನೆರವೇರಿಸಲಿ
Share this Article
  • FB
  • TW
  • Linkdin
  • Email

ಸಾರಾಂಶ

೧೯೯೮ರಿಂದಲೂ ಸಿಎಂ ಈ ಉತ್ಸವದಲ್ಲಿ ಭಾಗವಹಿಸಿದ್ದಾರೆ. ಹೀಗಾಗಿ ಒಂದೇ ಜಿಲ್ಲೆಯಲ್ಲಿ ಸಿಎಂ ಧ್ವಜಾರೋಹಣ ಮಾಡದೆ, ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಒಂದೊಂದು ಜಿಲ್ಲೆಯಲ್ಲಿ ಧ್ವಜಾರೋಹಣ ಮಾಡಬೇಕು. ಇದರ ಭಾಗವಾಗಿ ಈ ವರ್ಷ ಕೊಪ್ಪಳದಲ್ಲಿ ನೆರವೇರಿಸಬೇಕು.

ಕೊಪ್ಪಳ:

ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಹಾಗೂ ಈ ಭಾಗದ ಸ್ವಾತಂತ್ರ್ಯಕ್ಕಾಗಿ ಎಲ್ಲ ಜಿಲ್ಲೆಗಳು ಹೋರಾಟ ಮಾಡಿವೆ. ಹೀಗಾಗಿ ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣವನ್ನು ಸಿಎಂ ಸಿದ್ದರಾಮಯ್ಯ ಪ್ರತಿ ಬಾರಿ ಕಲಬುರಗಿಯಲ್ಲಿ ನೆರವೇರಿಸುವ ಬದಲು ಈ ವರ್ಷ ಕೊಪ್ಪಳ, ಮುಂದಿನ ವರ್ಷದಿಂದ ಒಂದೊಂದು ಜಿಲ್ಲೆಯಲ್ಲಿ ನೆರವೇರಿಸುವಂತೆ ಕಲ್ಯಾಣ ಕರ್ನಾಟಕ ಹೋರಾಟ ಜಿಲ್ಲಾ ಸಮಿತಿ ಆಗ್ರಹಿಸಿದೆ.

ಈ ಕುರಿತು ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಶುಕ್ರವಾರ ಮನವಿ ಸಲ್ಲಿಸಿದ ಸಮಿತಿ, ದೇಶಕ್ಕೆ ಸ್ವಾತಂತ್ರ್ಯ ೧೯೪೭ರ ಆ. ೧೫ರಂದು ಸಿಕ್ಕರೆ ಹೈದರಾಬಾದ್‌ ಸಂಸ್ಥಾನವು ಸೆ. ೧೭, ೧೯೪೮ರಂದು ಭಾರತ ಒಕ್ಕೂಟದಲ್ಲಿ ವಿಲೀನವಾಯಿತು. ಈ ದಿನವನ್ನು ೧೯೯೮ರಿಂದ ಪ್ರತಿ ವರ್ಷ ಹೈದರಾಬಾದ್‌ ಕರ್ನಾಟಕ ವಿಮೋಚನಾ ದಿನವನ್ನಾಗಿ ಆಚರಿಸಲಾಗುತ್ತಿತ್ತು, ಕಳೆದ ಅವಧಿಯ ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕ ಉತ್ಸವವೆಂದು ಘೋಷಿಸಿದೆ. ೧೯೯೮ರಿಂದಲೂ ಸಿಎಂ ಈ ಉತ್ಸವದಲ್ಲಿ ಭಾಗವಹಿಸಿದ್ದಾರೆ. ಹೀಗಾಗಿ ಒಂದೇ ಜಿಲ್ಲೆಯಲ್ಲಿ ಸಿಎಂ ಧ್ವಜಾರೋಹಣ ಮಾಡದೆ, ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಒಂದೊಂದು ಜಿಲ್ಲೆಯಲ್ಲಿ ಧ್ವಜಾರೋಹಣ ಮಾಡಬೇಕು. ಇದರ ಭಾಗವಾಗಿ ಈ ವರ್ಷ ಕೊಪ್ಪಳದಲ್ಲಿ ನೆರವೇರಿಸಬೇಕೆಂದರು.

ಈ ವೇಳೆ ಅಧ್ಯಕ್ಷ ರಮೇಶ ತುಪ್ಪದ, ಜಿಲ್ಲಾ ಸಂಚಾಲಕ ಸಂತೋಷ ದೇಶಪಾಂಡೆ, ಶಿವಕುಮಾರ ಕುಕನೂರ, ಮಂಜುನಾಥ ಅಂಗಡಿ, ಹುಲಗಪ್ಪ ಕಟ್ಟಿಮನಿ, ಸೋಮನಗೌಡ ಹೊಗರನಾಳ, ಸುಧಾಕರ ಮುಜಗೊಂಡ, ನಿತೇಶ‌ ಪುಲಸ್ಕರ, ವಿನೋದ ಡೊಳ್ಳಿನ, ಆರ್. ಮಂಜುನಾಥ ಇದ್ದರು.