ಹೊಳೆನರಸೀಪುರ ಪಟ್ಟಣದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಭಾನುವಾರ ಲೋಕ ಕಲ್ಯಾಣಾರ್ಥವಾಗಿ ಹಾಗೂ ಭಕ್ತಾದಿಗಳ ಮನಃ ಸಂಕಲ್ಪ ಸಿದ್ದಿಗಾಗಿ ಸಾಮೂಹಿಕ ಶ್ರೀ ಸ್ವಾಮಿಯ ಕಲ್ಯಾಣೋತ್ಸವ ಪೂಜಾ ಮಹೋತ್ಸವ ಸಂಪ್ರದಾಯ ಆಚರಣೆಯಂತೆ ನೂರಾರು ಭಕ್ತರ ಉಪಸ್ಥಿತಿಯಲ್ಲಿ ವೈಭವದಿಂದ ನಡೆಯಿತು. ಸ್ವಾಮಿಯ ಮೂಲ ಮೂರ್ತಿಗೆ ಪಂಚಾಮೃತಾಭಿಷೇಕ, ಅಲಂಕಾರ, ನೈವೇದ್ಯ, ಸಹಸ್ರ ನಾಮಾರ್ಚನೆ ನೆರವೇರಿಸಲಾಯಿತು. ಅರ್ಚಕರಾದ ನಾರಾಯಣ ಭಟ್ಟರು, ರಾಮಪ್ರಸಾದ್, ಪಟ್ಟಾಭಿರಾಮ್, ವಿದ್ಯಾಶಂಕರ್, ರೋಹಿತ್ ಐಯಂಗಾರ್‌ ಇತರರು ಪೂಜಾ ಕೈಂಕರ್ಯ ನೆರವೇರಿಸಿದರು.

ಹೊಳೆನರಸೀಪುರ: ಪಟ್ಟಣದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಭಾನುವಾರ ಲೋಕ ಕಲ್ಯಾಣಾರ್ಥವಾಗಿ ಹಾಗೂ ಭಕ್ತಾದಿಗಳ ಮನಃ ಸಂಕಲ್ಪ ಸಿದ್ದಿಗಾಗಿ ಸಾಮೂಹಿಕ ಶ್ರೀ ಸ್ವಾಮಿಯ ಕಲ್ಯಾಣೋತ್ಸವ ಪೂಜಾ ಮಹೋತ್ಸವ ಸಂಪ್ರದಾಯ ಆಚರಣೆಯಂತೆ ನೂರಾರು ಭಕ್ತರ ಉಪಸ್ಥಿತಿಯಲ್ಲಿ ವೈಭವದಿಂದ ನಡೆಯಿತು.

ಶ್ರೀ ಸ್ವಾಮಿಯ ದೇವಾಲಯದಲ್ಲಿ ಭಾನುವಾರ ಮುಂಜಾನೆ ಬ್ರಾಹ್ಮಿ ಮಹೂರ್ತದಲ್ಲಿ ಶ್ರೀ ಸ್ವಾಮಿಯ ಮೂಲ ಮೂರ್ತಿಗೆ ಪಂಚಾಮೃತಾಭಿಷೇಕ, ಅಲಂಕಾರ, ನೈವೇದ್ಯ, ಸಹಸ್ರ ನಾಮಾರ್ಚನೆ ನೆರವೇರಿಸಲಾಯಿತು. ಅರ್ಚಕರಾದ ನಾರಾಯಣ ಭಟ್ಟರು, ರಾಮಪ್ರಸಾದ್, ಪಟ್ಟಾಭಿರಾಮ್, ವಿದ್ಯಾಶಂಕರ್, ರೋಹಿತ್ ಐಯಂಗಾರ್‌ ಇತರರು ಪೂಜಾ ಕೈಂಕರ್ಯ ನೆರವೇರಿಸಿದರು.