ಸಾರಾಂಶ
‘ಸಮಗ್ರ ಗ್ರಾಮೀಣ ಆಶ್ರಮ’ ಸಂಸ್ಥೆಯ ರೂವಾರಿ, ಸಮಾಜ ಸೇವಕ ಕಾಪು ಕಲ್ಯಾ ನಿವಾಸಿ ದೇವದಾಸ್ ಶೆಟ್ಟಿ ಅವರಿಗೆ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಸಾಪ ಕಾಪು ಘಟಕದ ಸಹಭಾಗಿತ್ವದಲ್ಲಿ ‘ಹಿರಿಯರೆಡೆಗೆ ಸಾಹಿತ್ಯದ ನಡಿಗೆ’ ಕಾರ್ಯಕ್ರಮದಡಿ ಅವರ ನಿವಾಸದಲ್ಲಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಗೌರವ ಪುರಸ್ಕಾರ ಪ್ರದಾನ ಮಾಡಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
‘ಸಮಗ್ರ ಗ್ರಾಮೀಣ ಆಶ್ರಮ’ ಸಂಸ್ಥೆಯ ರೂವಾರಿ, ಸಮಾಜ ಸೇವಕ ಕಾಪು ಕಲ್ಯಾ ನಿವಾಸಿ ದೇವದಾಸ್ ಶೆಟ್ಟಿ ಅವರಿಗೆ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಸಾಪ ಕಾಪು ಘಟಕದ ಸಹಭಾಗಿತ್ವದಲ್ಲಿ ‘ಹಿರಿಯರೆಡೆಗೆ ಸಾಹಿತ್ಯದ ನಡಿಗೆ’ ಕಾರ್ಯಕ್ರಮದಡಿ ಅವರ ನಿವಾಸದಲ್ಲಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಗೌರವ ಪುರಸ್ಕಾರ ಪ್ರದಾನ ಮಾಡಲಾಯಿತು.ಕೊರಗ ಭಾಷಾತಜ್ಞ, ಸಾಹಿತಿ, ಸಂಶೋಧಕ, ಪಾಂಗಾಳ ಬಾಬು ಕೊರಗ ಅವರ ಸರ್ವಾಧ್ಯಕ್ಷತೆಯಲ್ಲಿ ಜರುಗಲಿರುವ ಕಾಪು ತಾಲೂಕು ೬ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ದೇವದಾಸ್ ಶೆಟ್ಟಿ ಬಿಡುಗಡೆಗೊಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಸಮಾಜಸೇವಕ ದೇವದಾಸ್ ಶೆಟ್ಟಿ ಗರಡಿಯಲ್ಲಿ ಪಳಗಿದ ಪಾಂಗಾಳ ಬಾಬು ಕೊರಗ ಬಹುಮುಖ ಪ್ರತಿಭಾ ಸಂಪನ್ನ ವ್ಯಕ್ತಿಯಾಗಿದ್ದು, ಅರ್ಹತೆಯಿಂದಲೇ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರ ಚಟುವಟಿಕೆ, ಜನಪರ ಹೋರಾಟ, ಚಿಂತನೆ, ಲೇಖನಗಳು ಎಲ್ಲರಿಗೂ ಮಾದರಿ ಎಂದರು.ಸಮಾರಂಭದ ಅಧ್ಯಕ್ಷತೆಯನ್ನು ಕಾಪು ತಾಲೂಕು ಕ.ಸಾ.ಪ. ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ವಹಿಸಿದ್ದರು. ಕಸಾಪ ಜಿಲ್ಲಾ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಆಶಯ ಮಾತುಗಳನ್ನಾಡಿದರು. ಕೋಶಾಧಿಕಾರಿ ಮನೋಹರ ಪಿ., ವಸಂತಿ ದೇವದಾಸ್ ಶೆಟ್ಟಿ, ಕೊರಗ ಸಮುದಾಯದ ಮುಂದಾಳುಗಳಾದ ಗಣೇಶ್ ಕುಂದಾಪುರ, ಗಣೇಶ ಬಾರ್ಕೂರು, ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ಸುಧಾಕರ ಶೆಣೈ ಪಿಲಾರು ವೇದಿಕೆಯಲ್ಲಿದ್ದರು.
ತಾಲೂಕು ಘಟಕದ ಕೋಶಾಧಿಕಾರಿ ವಿದ್ಯಾಧರ್ ಪುರಾಣಿಕ್ ಸ್ವಾಗತಿಸಿದರು. ಅನಂತ ಮೂಡಿತ್ತಾಯ ನಿರೂಪಿಸಿದರು. ಗೌರವ ಕಾರ್ಯದರ್ಶಿ ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ ಧನ್ಯವಾದವಿತ್ತರು. ಸಾಹಿತ್ಯ ಪರಿಷತ್ತಿನ ಸದಸ್ಯರು, ಕೊರಗ ಸಂಘಟನೆಯ ಪದಾಧಿಕಾರಿಗಳು, ಸ್ಥಳೀಯರು ಇದ್ದರು.