ಕಾಪು ಶ್ರೀ ಹೊಸಮಾರಿಗುಡಿ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

| Published : Feb 04 2025, 12:33 AM IST

ಕಾಪು ಶ್ರೀ ಹೊಸಮಾರಿಗುಡಿ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ
Share this Article
  • FB
  • TW
  • Linkdin
  • Email

ಸಾರಾಂಶ

ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿಯ ಪುನರ್ ಪ್ರತಿಷ್ಠೆ - ಬ್ರಹ್ಮಕಲಶೋತ್ಸವ ಫೆ. 25 ರಿಂದ ಮಾ.5 ರವರೆಗೆ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಸೋಮವಾರ ಜಿಲ್ಲಾಧಿಕಾರಿ ಕೋರ್ಟ್ ಹಾಲ್ ನಲ್ಲಿ ಸಭೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿಯ ಪುನರ್ ಪ್ರತಿಷ್ಠೆ - ಬ್ರಹ್ಮಕಲಶೋತ್ಸವ ಫೆ. 25 ರಿಂದ ಮಾ.5 ರವರೆಗೆ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಸೋಮವಾರ ಜಿಲ್ಲಾಧಿಕಾರಿ ಕೋರ್ಟ್ ಹಾಲ್ ನಲ್ಲಿ ಸಭೆ ನಡೆಸಲಾಯಿತು.

ಈ ಬ್ರಹ್ಮಲಕಲಶೋತ್ಸವದ ಸಂದರ್ಭ ಹೊರ ಜಿಲ್ಲೆ, ಹೊರ ರಾಜ್ಯ ಹಾಗೂ ಹೊರ ದೇಶಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ದೇವಸ್ಥಾನದ ಸುತ್ತಮುತ್ತಲಿನ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಸ್ವಚ್ಛ ಮತ್ತು ಸುಂದರೀಕರಣಗೊಳಿಸುವ ಬಗ್ಗೆ ಮತ್ತು ಬರುವ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ, ವಾಹನ ನಿಲುಗಡೆ ವ್ಯವಸ್ಥೆ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚಿಸಲಾಯಿತು.

ಕಾಪು ಶಾಸಕ ಶ್ರೀ ಹೊಸಮಾರಿಗುಡಿ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ, ಗೌರವಾಧ್ಯಕ್ಷ ಲಾಲಾಜಿ ಮೆಂಡನ್, ಉಪಾಧ್ಯಕ್ಷ ಕೆ. ದಿವಾಕರ್ ಶೆಟ್ಟಿ, ಮಾಧವ ಆರ್ ಪಾಲನ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಯೋಗೀಶ್ ಶೆಟ್ಟಿ, ಕಾಪು ಪುರಸಭೆಯ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಪೋಲಿಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನಾಗರಾಜ್, ಕಾಪು ತಹಸೀಲ್ದಾರ್‌ ಪ್ರತೀಭಾ ಆರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.