ದರೆಗುಡ್ಡೆ ಶಾಲಾ ಮಕ್ಕಳಿಗೆ ಕರಾವಳಿ ಕೇಸರಿ ಸೇವಾ ಟ್ರಸ್ಟ್ ಪುಸ್ತಕ ವಿತರಣೆ

| Published : Jun 13 2025, 02:17 AM IST

ದರೆಗುಡ್ಡೆ ಶಾಲಾ ಮಕ್ಕಳಿಗೆ ಕರಾವಳಿ ಕೇಸರಿ ಸೇವಾ ಟ್ರಸ್ಟ್ ಪುಸ್ತಕ ವಿತರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಕರಾವಳಿ ಕೇಸರಿ ಸೇವಾ ಟ್ರಸ್ಟ್ ಬೆದ್ರ ಹಾಗೂ ಕರಾವಳಿ ಕೇಸರಿ ಮಹಿಳಾ ಘಟಕ ದರೆಗುಡ್ಡೆ ವತಿಯಿಂದ ಸರಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಪ್ರಾಥಮಿಕ ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ರು. 57000 ಮೌಲ್ಯದ ಬರೆಯುವ ನೋಟ್ ಬುಕ್ ಗಳನ್ನು ಉಚಿತವಾಗಿ ಬುಧವಾರ ವಿತರಿಸಲಾಯಿತು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆಕರಾವಳಿ ಕೇಸರಿ ಸೇವಾ ಟ್ರಸ್ಟ್ ಬೆದ್ರ ಹಾಗೂ ಕರಾವಳಿ ಕೇಸರಿ ಮಹಿಳಾ ಘಟಕ ದರೆಗುಡ್ಡೆ ವತಿಯಿಂದ ಸರಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಪ್ರಾಥಮಿಕ ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ರು. 57000 ಮೌಲ್ಯದ ಬರೆಯುವ ನೋಟ್ ಬುಕ್ ಗಳನ್ನು ಉಚಿತವಾಗಿ ಬುಧವಾರ ವಿತರಿಸಲಾಯಿತು.

ಶಾಸಕ ಉಮಾನಾಥ ಎ ಕೋಟ್ಯಾನ್ ಪುಸ್ತಕ ವಿತರಿಸಿ ಮಾತನಾಡಿ, ಕರಾವಳಿ ಕೇಸರಿ ಟ್ರಸ್ಟ್ ಹಾಗೂ ಕರಾವಳಿ ಕೇಸರಿ ಮಹಿಳಾ ಘಟಕ ಸ್ಥಾಪಕಧ್ಯಕ್ಷ ಸಮಿತ್ ರಾಜ್ ದರೆಗುಡ್ಡೆ ನೇತೃತ್ವದಲ್ಲಿ ಹಲವಾರು ಜನಪರ ಯೋಜನೆಯನ್ನು ಪ್ರತಿವರ್ಷ ಹಮ್ಮಿಕೊಳ್ಳುತ್ತಿದ್ದು, ಅನಾರೋಗ್ಯದಲ್ಲಿ ಇರುವವರಿಗೆ ಸಹಾಯಧನ ನೀಡುತ್ತಾ ಇಲ್ಲಿಯವರೆಗೆ ಟ್ರಸ್ಟ್ 2000 ಕ್ಕಿಂತಲೂ ಅಧಿಕ ವಿದ್ಯಾರ್ಥಿಗಳಿಗೆ ಪುಸ್ತಕವನ್ನು ನೀಡಿರುವುದು ಅತ್ಯಂತ ಸಂತೋಷದಾಯಕ ವಿಚಾರ ಎಂದು ಸಮಾಜಮುಖಿ ಕೆಲಸದ ಬಗ್ಗೆ ಸಂತೋಷ ವ್ಯಕ್ತ ಪಡಿಸಿದರು.

ದರೆಗುಡ್ಡೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶೋಕ್ ಶೆಟ್ಟಿ ಬೆಲೋಟ್ಟು, ಉಪಾಧ್ಯಕ್ಷೆ ನಳಿನಿ, ಸದಸ್ಯ ಮುನಿರಾಜ್ ಹೆಗ್ಡೆ, ಕರಾವಳಿ ಕೇಸರಿ ಸೇವಾ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಸಮಿತ್ ರಾಜ್ ದರೆಗುಡ್ಡೆ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಮಧುರ, ಉದ್ಯಮ ರತ್ನ ಪ್ರಶಸ್ತಿ ಪುರಸ್ಕೃತ ಸಮಾಜಸೇವಕ ಕೊಡುಗೈ ದಾನಿ ಆರ್ ಆರ್ ಫ್ಯಾಶನ್ ನ ಮಾಲಕ ರಾಜೇಶ್ ಕೊಟ್ಯಾನ್, ಸದಾನಂದ ಶೆಟ್ಟಿ ಉಪಸ್ಥಿತರಿದ್ದರು,

ಶಾಲಾ ಮುಖ್ಯೋಪಾಧ್ಯಾಯ ಕರುಣಾಕರ ದೇವಾಡಿಗ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗಣೇಶ್ ಅಳಿಯೂರು ನಿರೂಪಿಸಿದರು. ಶಿಕ್ಷಕಿ ಮೀರಾ ಡಯಾಸ್ ವಂದಿಸಿದರು.