ಅದ್ಧೂರಿಯಾಗಿ ನಡೆದ ಕಾರೇಹಳ್ಳಿ ಜಾತ್ರಾ ಮಹೋತ್ಸವ

| Published : Jun 14 2025, 12:21 AM IST

ಸಾರಾಂಶ

ತಾಲೂಕಿನ ಕಾರೇಹಳ್ಳಿಯ ಸಂತ ಅಂತೋಣಿಯವರ ಪುಣ್ಯಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವ ಪ್ರತಿ ವರ್ಷದಂತೆ ಈ ವರ್ಷವೂ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು.

ಭದ್ರಾವತಿ: ತಾಲೂಕಿನ ಕಾರೇಹಳ್ಳಿಯ ಸಂತ ಅಂತೋಣಿಯವರ ಪುಣ್ಯಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವ ಪ್ರತಿ ವರ್ಷದಂತೆ ಈ ವರ್ಷವೂ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು.

ಭಕ್ತರು ಹರಕೆ, ಪ್ರಾರ್ಥನೆಗಳನ್ನು ಸಂತರ ಮುಂದೆ ಸಲ್ಲಿಸಲು ಹೂವಿನ ಹಾರ ಹಾಗೂ ಮೊಂಬತ್ತಿಗಳನ್ನು ಹಿಡಿದು ಬೆಳಗ್ಗೆ ೭ ಗಂಟೆಯಿಂದಲೇ ದೇವಾಲಯಕ್ಕೆ ಆಗಮಿಸುತ್ತಿದ್ದರು.

ಶಿವಮೊಗ್ಗ ಧರ್ಮಕ್ಷೇತ್ರದ ಧರ್ಮಧ್ಯಕ್ಷರಾದ ಫ್ರಾನ್ಸಿಸ್ ಸೆರಾವೋ ಅವರಿಂದ ಪೂಜಾ ವಿಧಿವಿಧಾನಗಳು ನೆರವೇರಿದವು. ಹಳೇನಗರದ ವೇಳಾಂಗಣಿ ಆರೋಗ್ಯ ಮಾತೆ ದೇವಾಲಯದ ಧರ್ಮ ಗುರುಗಳಾದ ಫಾದರ್ ಸ್ಟೀವನ್ ಡೇಸಾರವರಿಂದ ಪ್ರಭೋದನೆ, ಶಿವಮೊಗ್ಗ ಕ್ಷೇತ್ರದ ಗುರು ಶ್ರೇಷ್ಠರಾದ ಫಾದರ್ ಸ್ಟ್ಯಾನಿ ಡಿಸೋಜ, ಫಾದರ್ ಸ್ಟೀವನ್ ಅಲ್ಬುಕರ್ಕ್‌ರವರಿಂದ ಆಶೀರ್ವಚನ ನೀಡಲಾಯಿತು. ಭಕ್ತಾದಿಗಳಿಗೆ ಅನ್ನಸಂತರ್ಪಣೆ ಕಾರ್ಯ ನೆರವೇರಿತು.

ಧರ್ಮಕೇಂದ್ರದ ಗುರುಗಳಾದ ಫಾದರ್ ಸಂತೋಷ್ ಅಲ್ ಮೇಡಾ, ನೆರೆಯ ಧರ್ಮಕೇಂದ್ರದ ಗುರುಗಳು, ಸೈಂಟ್ ಚಾರ್ಲ್ಸ್ ಸೈಂಟ್ ಡೊಮಿನಿಕ್ ಧರ್ಮಭಗಿನಿಯರು, ಭಕ್ತಾದಿಗಳು ಪಾಲ್ಗೊಂಡಿದ್ದರು.