ಮಂಡ್ಯ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಹಾರ ಕೊಡುವ ಮೂಲಕ ಆಹಾರದಲ್ಲಿರುವ ತಾರತಮ್ಯವನ್ನು ಕೊನೆಗಾಣಿಸಬೇಕು ಎಂದು ಕರ್ನಾಟಕ ರಕ್ಷಣ ವೇದಿಕೆ ಶಿವರಾಮೇಗೌಡರ ಬಣದ ಮುಖಂಡರು ಆಗ್ರಹಿಸಿದ್ದಾರೆ. ಈ ಕುರಿತು ಅಪರ ಜಿಲ್ಲಾಧಿಕಾರಿಗಳು, ಸಮ್ಮೇಳನ ಆಹಾರ ಸಮಿತಿ ಅಧ್ಯಕ್ಷರಾದ ಶಾಸಕ ರಮೇಶ ಬಂಡಿಸಿದ್ದೇಗೌಡರ ಕಚೇರಿಗೆ ಮನವಿ ಸಲ್ಲಿಸಿರುವ ಮುಖಂಡರು, ಕನ್ನಡನಾಡು ನುಡಿಯ ಹಬ್ಬವಾದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಈ ಬಾರಿ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವುದು ನಮ್ಮೆಲ್ಲರಿಗೂ ಹರ್ಷ ತಂದಿದೆ ಎಂದು ತಿಳಿಸಿದ್ದಾರೆ. ಸಂವಿಧಾನದ ಆರ್ಟಿಕಲ್ 51ಎ(ಎಚ್ ) ಆಧಾರದಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಮಾಂಸಹಾರ ಮತ್ತು ಸಸ್ಯಹಾರ ಎರಡು ಬಗೆಯ ಆಹಾರವನ್ನು ಈ ಸಮ್ಮೇಳನದಲ್ಲಿ ಕೊಟ್ಟು ಮಾಂಸಾಹಾರದ ಬಗ್ಗೆ ಇರುವ ತಾರತಮ್ಯ ತೊಡೆದು ಹಾಕಬೇಕು ಎಂದು ಮನವಿ ಮಾಡಿದರು. ಮನವಿ ಸಲ್ಲಿಸುವ ವೇಳೆ ಕರವೇ ಮುಖಂಡರಾದ ಎಚ್.ಡಿ.ಜಯರಾಂ, ಶಿವರಾಮೇಗೌಡ, ಮನು ಸೇರಿದಂತೆ ಮುಖಂಡರು ಇದ್ದರು.
ಸಮ್ಮೇಳನದಲ್ಲಿ ಮಾಂಸಹಾರ ಕೊಡುವಂತೆ ಕರವೇಆಗ್ರಹ
ಕನ್ನಡನಾಡು ನುಡಿಯ ಹಬ್ಬವಾದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಈ ಬಾರಿ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವುದು ನಮ್ಮೆಲ್ಲರಿಗೂ ಹರ್ಷ ತಂದಿದೆ .
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.