ಕರ್ನಾಟಕ ಅರೆಭಾಷೆ ಸಂಸ್ಕೃತಿ, ಸಾಹಿತ್ಯ ಅಕಾಡೆಮಿ ಪೂರ್ವಭಾವಿ ಸಭೆ
Author : KannadaprabhaNewsNetwork
Published : Feb 24 2026, 04:15 AM IST
20-ಎನ್ಪಿ ಕೆ-6.ಕರ್ನಾಟಕಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯವತಿಯಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ, ಅಕಾಡೆಮಿಪ್ರಕಟಿತ ಪುಸ್ತಕ ಬಿಡುಗಡೆ ಹಾಗೂವಾದ್ಯ ಪರಿಕರಗಳ ವಿತರಣಾ ಕಾರ್ಯಕ್ರಮದಪೂರ್ವಭಾವಿ ಸಭೆ ಶುಕ್ರವಾರ ಮಂಗಳೂರಿನ ತುಳುಭವನದಸಿರಿಚಾವಡಿಯಲ್ಲಿ ಆಯೋಜಿಸಲಾಯಿತು. | Kannada Prabha
Image Credit: KP
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ, ಅಕಾಡೆಮಿ ಪ್ರಕಟಿತ ಪುಸ್ತಕ ಬಿಡುಗಡೆ ಹಾಗೂ ವಾದ್ಯ ಪರಿಕರಗಳ ವಿತರಣಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಮಂಗಳೂರಿನ ತುಳುಭವನದ ಸಿರಿಚಾವಡಿಯಲ್ಲಿ ಆಯೋಜಿಸಲಾಯಿತು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ, ಅಕಾಡೆಮಿ ಪ್ರಕಟಿತ ಪುಸ್ತಕ ಬಿಡುಗಡೆ ಹಾಗೂ ವಾದ್ಯ ಪರಿಕರಗಳ ವಿತರಣಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಶುಕ್ರವಾರ ಮಂಗಳೂರಿನ ತುಳುಭವನದ ಸಿರಿಚಾವಡಿಯಲ್ಲಿ ಆಯೋಜಿಸಲಾಯಿತು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ಮುಂಬರುವ ಮಾ. 14ರಂದು ಮಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆಸಲುದ್ದೇಶಿಸಿರುವ 2025ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ, ಅಕಾಡೆಮಿ ಪ್ರಕಟಿತ ಪುಸ್ತಕ ಬಿಡುಗಡೆ ಹಾಗೂ ವಾದ್ಯ ಪರಿಕರಗಳ ವಿತರಣಾ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಮಂಗಳೂರಿನ ಉರ್ವಾಸ್ಟೋರ್ನಲ್ಲಿರುವ ತುಳುಭವನದ ಸಿರಿಚಾವಡಿಯಲ್ಲಿ ಶುಕ್ರವಾರ ನಡೆಯಿತು.
ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಗೌಡ ಸಮಾಜ, ಅರೆಭಾಷೆ ಸಂಘಟನೆಗಳ ಮುಖ್ಯಸ್ಥರು,
ಅಕಾಡೆಮಿಯ ಹಾಲಿ ಹಾಗೂ ಮಾಜಿ ಸದಸ್ಯರು ಭಾಗವಹಿಸಿದ್ದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.