ಕಸಾಪ ಉಡುಪಿ: ಕನ್ನಡ ರಾಜ್ಯೋತ್ಸವ ಸಂಭ್ರಮ

| Published : Nov 02 2024, 01:37 AM IST

ಸಾರಾಂಶ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಉಡುಪಿ ತಾಲೂಕು ಘಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಎಂ.ಜಿ.ಎಂ. ಕಾಲೇಜಿನ ಮುಂಭಾಗದ ಆಟೋ ನಿಲ್ದಾಣದಲ್ಲಿ ಶುಕ್ರವಾರ ನಡೆಯಿತು. ಈ ಸಂದರ್ಭದಲ್ಲಿ ಎಲ್ಲ ರಿಕ್ಷಾಗಳಿಗೆ ಕನ್ನಡ ಧ್ವಜ ನೀಡಿ ಸಿಂಗರಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಉಡುಪಿ ತಾಲೂಕು ಘಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಎಂ.ಜಿ.ಎಂ. ಕಾಲೇಜಿನ ಮುಂಭಾಗದ ಆಟೋ ನಿಲ್ದಾಣದಲ್ಲಿ ಶುಕ್ರವಾರ ನಡೆಯಿತು. ಈ ಸಂದರ್ಭದಲ್ಲಿ ಎಲ್ಲ ರಿಕ್ಷಾಗಳಿಗೆ ಕನ್ನಡ ಧ್ವಜ ನೀಡಿ ಸಿಂಗರಿಸಲಾಯಿತು.ಕನ್ನಡ ಧ್ವಜ ಹಸ್ತಾಂತರಿಸಿ ಮಾತನಾಡಿದ ಕಸಾಪ ಜಿಲ್ಲಾ ಕಾರ್ಯಕಾರಿ ಸದಸ್ಯ ಭುವನ ಪ್ರಸಾದ್ ಹೆಗ್ಡೆ, ರಾಜ್ಯೋತ್ಸವ ನಾಡಿನ ಶ್ರೇಷ್ಠ ಹಬ್ಬವಾಗಿದೆ. ನಮ್ಮ ನಾಡು ನುಡಿ ಸಂಸ್ಕೃತಿಗಾಗಿ ನಾವೆಲ್ಲರೂ ಕಟಿಬದ್ಧರಾಗಿ ಕಾರ್ಯ ನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಕಸಾಪದ ಕಾರ್ಯ ಶ್ಲಾಘನೀಯ ಎಂದರು.ಬ್ರಹ್ಮಾವರ ತಾಲೂಕು ಕಸಾಪ ಪೂರ್ವ ಅಧ್ಯಕ್ಷ ನಾರಾಯಣ ಮಡಿ, ನಮ್ಮ ರಾಜ್ಯ ನಮ್ಮ ದೇಶದಲ್ಲಿ ಅಪೂರ್ವವಾದ ರಾಜ್ಯವಾಗಿದೆ. ಭಾಷಾವಾರು ಪ್ರಾಂತ್ಯ ರಚನೆಯಾದ ಬಳಿಕ ನಮ್ಮ ರಾಜ್ಯ 68ನೇ ರಾಜ್ಯೋತ್ಸವವನ್ನು ಆಚರಣೆ ಮಾಡುತ್ತಿದ್ದು, ಈ ನಿಟ್ಟಿನಲ್ಲಿ ಕನ್ನಡ ಭಾಷೆಯು ನಮ್ಮೆಲ್ಲರ ಮನೆ ಮನದಲ್ಲಿರಬೇಕು ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ ಅಧ್ಯಕ್ಷ ರವಿ, ಕಸಾಪ ತಾಲೂಕು ಗೌರವ ಕಾರ್ಯದರ್ಶಿಗಳಾದ ಜನಾರ್ದನ್ ಕೊಡವೂರು, ರಂಜನಿ ವಸಂತ್, ಗೌ.ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ಶ್ರೀನಿವಾಸ ರಾವ್, ವಸಂತ್, ಸುಮಿತ್ರ ಕೆರೆಮಠ, ರಾಮಾಂಜಿ, ವಿರಣ್ಣ ಕುರುವತ್ತಿಗೌಡರ್ ಮೊದಲಾದವರಿದ್ದರು. ರಾಘವೇಂದ್ರ ಕರ್ವಾಲು ನಿರೂಪಿಸಿದರು. ಸಂಯೋಜಕ ಉಮೇಶ್ ಆಚಾರ್ಯ ವಂದಿಸಿದರು.