ಸಾರಾಂಶ
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನ ವಾಗ್ದೇವಿ ಸಭಾಂಗಣದಲ್ಲಿ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ನೆರವೇರಿತು.ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕ ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ ಆಶೀರ್ವಚನ ನೀಡಿ ಸಾಧಕರನ್ನು ಸನ್ಮಾನಿಸಿದರು.
ಕನ್ನಡಪ್ರಭ ವಾರ್ತೆ ಮೂಲ್ಕಿ
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನ ವಾಗ್ದೇವಿ ಸಭಾಂಗಣದಲ್ಲಿ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ನೆರವೇರಿತು.ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕ ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ ಆಶೀರ್ವಚನ ನೀಡಿ ಸಾಧಕರನ್ನು ಸನ್ಮಾನಿಸಿದರು.ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಾದ ಸಿಎ ಅಶೋಕ್ ರಾವ್, ಸಿಎ ಚರಣ್ ರಾಜ್ ಮುಚ್ಚೂರು, ರವಿರಾಜ್ ಪೂಜಾರಿ, ಪಿ.ಎಚ್.ಡಿ. ಪುರಸ್ಕೃತರಾದ ಕಾಲೇಜಿನ ಉಪನ್ಯಾಸಕಿ ಡಾ.ವನಿತಾ ಶೆಟ್ಟಿ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉಪನ್ಯಾಸಕ ಪ್ರದೀಪ್ ಡಿ. ಎಂ., ಕಾಲೇಜಿನ ಬಿ.ಎ. ರ್ಯಾಂಕ್ ವಿಜೇತ ಹಿರಿಯ ವಿದ್ಯಾರ್ಥಿನಿಯರಾದ ಚೋಂದಮ್ಮ ಎಂ.ಎಂ., ಅನನ್ಯಾ, ಚಿನ್ನದ ಪದಕ ವಿಜೇತ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಮೋಕ್ಷಾ ಬಿ., ಎಂ.ಎ. ವಿಭಾಗದಲ್ಲಿ ರ್ಯಾಂಕ್ ಗಳಿಸಿದ ಸಂಧ್ಯಾ ಎಚ್., ಕ್ರೀಡಾ ವಿಭಾಗದಲ್ಲಿ ಸಾಧನೆ ಮಾಡಿದ ಶ್ರೇಯಾ ಮತ್ತು ಗಾಯತ್ರಿ ಕುಲಾಲ್ ಅವರನ್ನು ಸನ್ಮಾನಿಸಲಾಯಿತು.
ತುಳು ವರ್ಲ್ಡ್ ಫೌಂಡೇಶನ್ ನಿರ್ದೇಶಕ ಡಾ. ರಾಜೇಶ್ ಆಳ್ವ ಬದಿಯಡ್ಕ ಸಂಸ್ಥೆಯ ನಿವೃತ್ತ ಪ್ರಾಂಶುಪಾಲ ಎಂ. ಬಾಲಕೃಷ್ಣ ಶೆಟ್ಟಿ ಹಾಗೂ ಕೇಶವ್ಎಚ್., ನಿವೃತ್ತ ಉಪನ್ಯಾಸಕ ಜಗದೀಶ್ಚಂದ್ರ ಕೆ.ಕೆ., ನಿವೃತ್ತ ಗ್ರಂಥಪಾಲಕ ಗಣೇಶ್ ದೇವಾಡಿಗ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಪ್ರಾಂಶುಪಾಲ ಡಾ.ವಿಜಯ ವಿ. ವಿದ್ಯಾರ್ಥಿ ನಾಯಕರಾದ ಶಶಾಂಕ್, ಆದಿತ್ ಆರ್. ಶೆಟ್ಟಿ, ಮನೀಶ್ ಮತ್ತು ತ್ರಿಶಾ ಶೆಟ್ಟಿ ಉಪಸ್ಥಿತರಿದ್ದರು.ಉಪನ್ಯಾಸಕ ಡಾ. ಪದ್ಮನಾಭ ಮರಾಠೆ ಸ್ವಾಗತಿಸಿದರು. ವಿದ್ಯಾರ್ಥಿನಿ ಯೋಗಿನಿ ಸುಷ್ಮಾ ಅತಿಥಿಗಳ ಪರಿಚಯ ಮಾಡಿದರು, ಉಪನ್ಯಾಸಕಿ ಲತಾಶ್ರೀ ವಂದಿಸಿದರು. ಪ್ರಾಂಜಲಿ, ಗಾಯತ್ರಿ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.