Katihalli Kariappa is the president of the Contractors Association.

ಚಿತ್ರದುರ್ಗ: ತಾಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿ ಕಾಟಿಹಳ್ಳಿ ಕರಿಯಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಮೈಲಾರಪ್ಪ, ಖಜಾಂಚಿಯಾಗಿ ಎಸ್.ಎಂ.ಎಲ್. ಪ್ರವೀಣ್ ಅವರನ್ನು ಮೂರು ವರ್ಷಗಳ ಅವಧಿಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಜಾನುಕೊಂಡ ಸಮೀಪವಿರುವ ರಂಗನಾಥಸ್ವಾಮಿ ಬೆಟ್ಟದಲ್ಲಿ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್.ಮಂಜುನಾಥ್‍ ಅವರ ಸಮ್ಮುಖದಲ್ಲಿ ನಡೆದ ಮಹಾಸಭೆಯಲ್ಲಿ ತಾಲೂಕು ಗುತ್ತಿಗೆದಾರರ ಸಂಘಕ್ಕೆ ಆಯ್ಕೆ ಮಾಡಲಾಯಿತು. ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಮಲ್ಲೇಶಪ್ಪ, ಅನ್ವರ್ ಭಾಷಾ ಈ ಸಂದರ್ಭದಲ್ಲಿ ಹಾಜರಿದ್ದರು.

ಪೋಟೋ

ಕರಿಯಪ್ಪ, ಮೈಲಾರಪ್ಪ, ಪ್ರವೀಣ್