ಸಾರಾಂಶ
ಬಿಜೆಪಿ ಉಡುಪಿ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕುತ್ಯಾರು ನವೀನ್ ಶೆಟ್ಟಿ ಅವರನ್ನು ಮಂಗಳವಾರ ಕಾಪು ಮಂಡಲ ಬಿಜೆಪಿ ವತಿಯಿಂದ ಅಭಿನಂದಿಸಲಾಯಿತು.
ಕನ್ನಡಪ್ರಭ ವಾರ್ತೆ ಕಾಪು
ಬಿಜೆಪಿ ಉಡುಪಿ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕುತ್ಯಾರು ನವೀನ್ ಶೆಟ್ಟಿ ಅವರನ್ನು ಮಂಗಳವಾರ ಕಾಪು ಮಂಡಲ ಬಿಜೆಪಿ ವತಿಯಿಂದ ಅಭಿನಂದಿಸಲಾಯಿತು.ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಬಿಜೆಪಿ ಇಂದು ಒಬ್ಬ ಸಮರ್ಥ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಿದೆ. ವ್ಯಕ್ತಿಗಿಂತ ಪಕ್ಷ ಮುಖ್ಯ ಪಕ್ಷಕ್ಕಿಂತ ರಾಷ್ಟ ಮುಖ್ಯ. ಮುಂದಿನ ದಿನಗಳಲ್ಲಿ ನಾವು ಎಲ್ಲರೂ ಸೇರಿ ಒಟ್ಟಾಗಿ ಪಕ್ಷಕ್ಕಾಗಿ ದುಡಿಯುವ ಮೂಲಕ ಕಾಪು ಕ್ಷೇತ್ರದಲ್ಲಿ ಬಿಜೆಪಿಯನ್ನು ಇನ್ನಷ್ಟು ಭದ್ರಪಡಿಸೋಣ ಎಂದರು.ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಕಾಪು ಪುರಸಭೆಯ ಅಧ್ಯಕ್ಷ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷ ಸರಿತಾ ಶಿವಾನಂದ, ಮಾಜಿ ಶಾಸಕ ಲಾಲಾಜಿ, ಜಿಲ್ಲಾ ಬಿಜೆಪಿ ನಿಕಟಪೂರ್ವ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಕಾಪು ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಸೋನು ಪಾಂಗಾಳ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ನೀತಾ ಗುರುರಾಜ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಮಟ್ಟು ಹಾಗೂ ಕಾರ್ಯಕರ್ತರು ಇದ್ದರು.