ಕೆನರಾ ಶಿಕ್ಷಣ ಸಂಸ್ಥೆಗಳ ಬಗ್ಗೆ ಕೇರಳ ರಾಜ್ಯಪಾಲ ಆರಿಫ್ ಖಾನ್ ಮೆಚ್ಚುಗೆ

| Published : May 28 2024, 01:02 AM IST

ಕೆನರಾ ಶಿಕ್ಷಣ ಸಂಸ್ಥೆಗಳ ಬಗ್ಗೆ ಕೇರಳ ರಾಜ್ಯಪಾಲ ಆರಿಫ್ ಖಾನ್ ಮೆಚ್ಚುಗೆ
Share this Article
  • FB
  • TW
  • Linkdin
  • Email

ಸಾರಾಂಶ

ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಅಧ್ಯಕ್ಷ ವಾಸುದೇವ್ ಕಾಮತ್ ಹಾಗೂ ಆಡಳಿತ ಮಂಡಳಿಯ ಪ್ರಮುಖ ಮಂಗಲ್ಪಾಡಿ ನರೇಶ್ ಶೆಣೈ ಅವರು ಮಂಗಳೂರಿನಲ್ಲಿ ಸೋಮವಾರ ಕೇರಳ ರಾಜ್ಯಪಾಲರನ್ನು ಭೇಟಿಯಾಗಿ ಕೆನರಾ ಎಂಜಿನಿಯರಿಗ್ ಕಾಲೇಜು ಮುಂದಿನ ವರ್ಷ ಬೆಳ್ಳಿಹಬ್ಬ ಆಚರಿಸಲಿದ್ದು, ಈ ಸಂಭ್ರಮಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ಕೋರಿಕೆ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಸ್ವಾತಂತ್ರ್ಯಪೂರ್ವದಲ್ಲಿ ಸ್ಥಾಪನೆಯಾದ ಕೆನರಾ ಶಿಕ್ಷಣ ಸಂಸ್ಥೆ ತನ್ನ 133 ವರ್ಷಗಳ ಇತಿಹಾಸದಲ್ಲಿ ಶಿಕ್ಷಣಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿದೆ. ಈ ಮೂಲಕ ಲಕ್ಷಾಂತರ ನಾಗರಿಕರ ಉಜ್ವಲ ಬದುಕಿಗೆ ಕಾರಣೀಕರ್ತರಾಗಿರುವ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಕೊಡುಗೆ ಸ್ಮರಣೀಯ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅಭಿಪ್ರಾಯಪಟ್ಟಿದ್ದಾರೆ.

ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಅಧ್ಯಕ್ಷ ವಾಸುದೇವ್ ಕಾಮತ್ ಹಾಗೂ ಆಡಳಿತ ಮಂಡಳಿಯ ಪ್ರಮುಖ ಮಂಗಲ್ಪಾಡಿ ನರೇಶ್ ಶೆಣೈ ಅವರು ಮಂಗಳೂರಿನಲ್ಲಿ ಸೋಮವಾರ ಕೇರಳ ರಾಜ್ಯಪಾಲರನ್ನು ಭೇಟಿಯಾಗಿ ಕೆನರಾ ಎಂಜಿನಿಯರಿಗ್ ಕಾಲೇಜು ಮುಂದಿನ ವರ್ಷ ಬೆಳ್ಳಿಹಬ್ಬ ಆಚರಿಸಲಿದ್ದು, ಈ ಸಂಭ್ರಮಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ಕೋರಿಕೆ ಸಲ್ಲಿಸಿದರು. ರಾಜ್ಯಪಾಲರು ಮುಕ್ತ ಮನಸ್ಸಿನಿಂದ ಭಾಗವಹಿಸುವುದಾಗಿ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಕೆನರಾ ಶಿಕ್ಷಣ ಸಂಸ್ಥೆಗಳ ಸಮಗ್ರ ಬೆಳವಣಿಗೆಗಳ ಬಗ್ಗೆ ತಮ್ಮ ಆಡಳಿತ ಮಂಡಳಿ ಕೈಗೊಂಡ ಸುಧಾರಣಾ ಕ್ರಮಗಳು, ಆಗಿರುವ ಅಭಿವೃದ್ಧಿ, ಫಲಿತಾಂಶದಲ್ಲಿ ಪ್ರಗತಿ, ಏರುತ್ತಿರುವ ವಿದ್ಯಾರ್ಥಿ ಸಮುದಾಯದ ಸಂಖ್ಯೆ, ಹೊಸ ಕೋರ್ಸುಗಳ ಅಳವಡಿಕೆ, ಇಂಟರ್ ನ್ಯಾಶನಲ್ ಸ್ಕೂಲ್ ಆರಂಭ, ಶಿಕ್ಷಕ ವೃಂದದ ಮಾದರಿ ಪ್ರಯತ್ನಗಳ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡ ರಾಜ್ಯಪಾಲ ಅರಿಫ್ ಖಾನ್, ಇಂತಹ ಶ್ರೇಷ್ಠ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮದಲ್ಲಿ ಸಂತೋಷದಿಂದ ಭಾಗವಹಿಸುವುದಾಗಿ ತಿಳಿಸಿದರು.