ಕೊಡಗಿನ ಕಿಗ್ಗಾಲು ಗ್ರಾಮದ ನಿಧಿ ಎಂ.ಎಸ್. ಅವರು ತರಾಸು ಪ್ರಶಸ್ತಿ ಪಡೆದುಕೊಂಡಿದ್ದಾರೆ.
ನಾಪೋಕ್ಲು: ಕೊಡಗಿನ ಕಿಗ್ಗಾಲು ಗ್ರಾಮದ ನಿಧಿ ಎಂ.ಎಸ್. ಅವರು ತರಾಸು ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕಲಾ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿಧಿ ಎಂ.ಎಸ್. ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.ಬೆಂಗಳೂರಿನ ಜನ್ಮ ಭೂಮಿ ಸಾಂಸ್ಕೃತಿಕ ನಾಗರಿಕ ವೇದಿಕೆ ವತಿಯಿಂದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಾಧಕ ವಿದ್ಯಾರ್ಥಿಗಳಿಗೆ ನೀಡುವ ತರಾಸು ಪ್ರಶಸ್ತಿಯನ್ನು ನಿಧಿ ಪಡೆದುಕೊಂಡಿದ್ದಾರೆ.
ಬೆಂಗಳೂರಿನ ಗಾರ್ಡನ್ ಸಿಟಿ ವಿಶ್ವವಿದ್ಯಾಲಯ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿರುವ ನಿಧಿ ಕಿಗ್ಗಾಲು ಗ್ರಾಮದ ನಿವಾಸಿ ಮೊಟ್ಟೆಮನೆ ಶ್ರೀಧರ್-ರೈನಾ ದಂಪತಿ ಪುತ್ರಿ.