ಸಾರಾಂಶ
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕೆಲವು ಅಹಿತಕರ ಪ್ರಕರಣಗಳ ಬಗ್ಗೆ ಸತ್ಯಾಸತ್ಯತೆ ತಿಳಿದುಕೊಳ್ಳಲು ಕೆಪಿಸಿಸಿ ವತಿಯಿಂದ ನಿಯೋಗವೊಂದನ್ನು ಕಳುಹಿಸಲಾಗುತ್ತಿದ್ದು, ನಿಯೋಗಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ರನ್ನ ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಮಾಡಿದ್ದಾರೆ.
ಶಿವಮೊಗ್ಗ : ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕೆಲವು ಅಹಿತಕರ ಪ್ರಕರಣಗಳ ಬಗ್ಗೆ ಸತ್ಯಾಸತ್ಯತೆ ತಿಳಿದುಕೊಳ್ಳಲು ಕೆಪಿಸಿಸಿ ವತಿಯಿಂದ ನಿಯೋಗವೊಂದನ್ನು ಕಳುಹಿಸಲಾಗುತ್ತಿದ್ದು, ನಿಯೋಗಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ರನ್ನ ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಮಾಡಿದ್ದಾರೆ.
ನಿಯೋಗದಲ್ಲಿರುವ ಕಿಮ್ಮನೆ ರತ್ನಾಕರ್ ಸೇರಿದಂತೆ ತಂಡವು ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡಿ, ಸ್ಥಳೀಯ ಮುಖಂಡರುಗಳ ಸಹಕಾರದೊಂದಿಗೆ ಘಟನೆ ನೆಡೆದ ಪ್ರದೇಶಗಳಲ್ಲಿ ಸಂಬಂಧಪಟ್ಟ ಸಂತ್ರಸ್ತ ಕುಟುಂಬಗಳು. ಎಲ್ಲ ವರ್ಗದ ಜನರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಇತರರೊಂದಿಗೆ ಚರ್ಚಿಸಿ ಕೆಪಿಸಿಸಿ ವರದಿ ಸಲ್ಲಿಸಬೇಕಿದೆ.