• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಡಗು ಜಿಲ್ಲೆಯಲ್ಲಿ ಬೀಜ, ಗೊಬ್ಬರ ಅಗತ್ಯ ದಾಸ್ತಾನು: ಸೋಮಸುಂದರ
ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಈವರೆಗೆ 316.1 ಮಿ.ಮೀ. ಮಳೆಯಾಗಿದ್ದು, ವಾಡಿಕೆಗಿಂತ ಶೇ.30 ರಷ್ಟು ಹೆಚ್ಚಾಗಿ ಮಳೆಯಾಗಿದೆ. ರೈತರು ಮುಂಗಾರು ಹಂಗಾಮಿನ ಪೂರ್ವ ಸಿದ್ಧತೆಯಲ್ಲಿದ್ದು, ಜಿಲ್ಲೆಯಲ್ಲಿ ಭತ್ತದ ಸಸಿ ಮಡಿ ಕಾರ್ಯವು ಜೂನ್ ಅಂತ್ಯದಿಂದ ಪ್ರಾರಂಭವಾಗಲಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ ತಿಳಿಸಿದ್ದಾರೆ.
ಕೊಡಗಿನಲ್ಲಿ ಎರಡು ‘ಪಾನಮುಕ್ತ’ ಗ್ರಾಮಗಳ ಘೋಷಣೆ: ಪಾಯಸ್‌
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮೂಲಕ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಈ ವರ್ಷದ ಅಂತ್ಯದೊಳಗೆ ಎರಡು ಗ್ರಾಮಗಳನ್ನು ಪಾನಮುಕ್ತ ಗ್ರಾಮಗಳನ್ನಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ಕಾರ್ಯಯೋಜನೆ ಸಿದ್ಧಪಡಿಸಲಾಗುವುದು ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ತಿಳಿಸಿದ್ದಾರೆ.
ಕುಶಾಲನಗರ: ನೇತ್ರ ಉಚಿತ ತಪಾಸಣಾ ಶಿಬಿರ
ಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ನ ಸುವರ್ಣ ಭವನದಲ್ಲಿ ಕೊಡಗು ಗೌಡ ನಿವೃತ್ತ ನೌಕರರ ಸಂಘದ ನೇತೃತ್ವದಲ್ಲಿ ರೋಟರಿ ಮಿಸ್ಟಿ ಹಿಲ್ಸ್, ಮಡಿಕೇರಿಯ ವಿನೋದ್ ಮೆಡಿಕಲ್ಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂದತ್ವ ನಿಯಂತ್ರಣ ವಿಭಾಗ ಹಾಗೂ ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ರೆಡ್ ಕ್ರಾಸ್ ಘಟಕದ ಸಹಯೋಗದೊಂದಿಗೆ ಸಾರ್ವಜನಿಕರಿಗಾಗಿ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು.
ವಿಧಾನ ಪರಿಷತ್ ಚುನಾವಣೆ: ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಲು ಒತ್ತಾಯ
ಕೊಡಗು ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಪಿ.ಎ.ಹನೀಫ್, ಕೊಡಗಿನಲ್ಲಿ ಬಿಜೆಪಿಯ ಭದ್ರಕೋಟೆ ಬೇಧಿಸುವಲ್ಲಿ ಮತ್ತು ಇಬ್ಬರು ಕಾಂಗ್ರೆಸ್ ಶಾಸಕರ ಗೆಲವಿನಲ್ಲಿ ಅಲ್ಪಸಂಖ್ಯಾತರ ಮತಗಳು ನಿರ್ಣಾಯಕವಾಗಿದ್ದವು. ಜಿಲ್ಲೆಯಲ್ಲಿ ಸುಮಾರು 1 ಲಕ್ಷ ಅಲ್ಪಸಂಖ್ಯಾತರ ಮತಗಳಿದ್ದು, ಇದರಲ್ಲಿ ಶೇ.99 ರಷ್ಟು ಮತಗಳು ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊರಕಿದೆ. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ತಿನಲ್ಲಿ ಜಿಲ್ಲೆಯ ಅಲ್ಪಸಂಖ್ಯಾತರಿಗೆ ಅವಕಾಶವನ್ನು ಕಲ್ಪಿಸಬೇಕೆಂದು ಮನವಿ ಮಾಡಿದ್ದಾರೆ.
ಕಾರ್ಯಪ್ಪ ಬಡಾವಣೆಯಲ್ಲಿ ಹತ್ತಾರು ಸಮಸ್ಯೆ: ದುರ್ವಾಸನೆಯಲ್ಲೇ ಬದುಕು!
ಸೋಮವಾರಪೇಟೆ ತಾಲೂಕಿನ ಮಾದಾಪುರದಲ್ಲಿ ಪ್ರಕೃತಿ ವಿಕೋಪ ಸಂತ್ರಸ್ತರಿಗೆ ನಿರ್ಮಾಣ ಮಾಡಿಕೊಡಲಾಗಿರುವ ಕಾರ್ಯಪ್ಪ ಬಡಾವಣೆಯಲ್ಲಿ ನಿವಾಸಿಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವೈಜ್ಞಾನಿಕ ಚರಂಡಿ ವ್ಯವಸ್ಥೆಯಿಂದಾಗಿ ಮನೆಯ ಬದಿ ಹಾಗೂ ಮನೆಯ ಸಮೀಪದಲ್ಲಿ ತ್ಯಾಜ್ಯ ನೀರು ಹರಿದು ಹೋಗುತ್ತಿದ್ದು, ದುರ್ವಾಸನೆಯಿಂದ ಕೂಡಿದೆ.
ಸಾಲಬಾಧೆ: ನೇಣು ಬಿಗಿದು ಕೃಷಿಕ ಆತ್ಮಹತ್ಯೆ
ಸೋಮವಾರಪೇಟೆ ಪಟ್ಟಣದ ರಾಜ್‍ಮಹಲ್ ವಾಣಿಜ್ಯ ಸಂಕೀರ್ಣದಲ್ಲಿ ಕೃಷಿ ಸಂಬಂಧಿತ ಪರಿಕರಗಳ ಮಾರಾಟ ಅಂಗಡಿ ನಡೆಸುತ್ತಿದ್ದ ಸತೀಶ್, ಅತಿಯಾದ ಸಾಲ ಹೊಂದಿದ್ದರು. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸಂಶಯಿಸಲಾಗಿದೆ.
ಸಿದ್ದಾಪುರ: ಮುಖ್ಯರಸ್ತೆಯಲ್ಲೇ 15ಕ್ಕೂ ಅಧಿಕ ಕಾಡಾನೆ ಹಿಂಡು ವಾಕಿಂಗ್!
ಕೊಡಗು ಜಿಲ್ಲೆಯ ಸಿದ್ದಾಪುರದ ವಿರಾಜಪೇಟೆ ಮುಖ್ಯ ರಸ್ತೆಯ ಇಂಜಿಲಗೆರೆ ಸಮೀಪದಲ್ಲಿ ಗುಹ್ಯ ಗ್ರಾಮದ ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿರುವ ಮರಿ ಆನೆಗಳು ಸೇರಿದಂತೆ ಸುಮಾರು 25ಕ್ಕೂ ಅಧಿಕ ಕಾಡಾನೆಗಳ ಹಿಂಡು ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಮುಖ್ಯ ರಸ್ತೆ ದಾಟುವ ದೃಶ್ಯ ಮಂಗಳ ವಾರ ಸಂಜೆ ಕಂಡುಬಂದಿದೆ.
ಗುರು ಬಸವೇಶ್ವರ ದೇವಸ್ಥಾನ ವಾರ್ಷಿಕ ಪೂಜೆ ಸಂಪನ್ನ
ಸೋಮವಾರಪೇಟೆ ಸಮೀಪದ ಗರಗಂದೂರು ಬಿ ಗ್ರಾಮದ ಶ್ರೀಗುರು ಬಸವೇಶ್ವರ ದೇವಳದ ವಾರ್ಷಿಕ ಮಹಾಪೂಜೆ ಇತ್ತೀಚೆಗೆ ನಡೆಯಿತು. ವಿವಿಧೆಡೆಗಳಿಂದ ಆಗಮಿಸಿದ ಭಕ್ತರ ಸಮ್ಮುಖದಲ್ಲಿ ಗಣಪತಿ ಹೋಮ, ಶ್ರೀ ದೇವರ ಮಹಾಪೂಜೆ, ಮಹಾಮಂಗಳಾರತಿ ಶ್ರದ್ಧಾ ಭಕ್ತಿಯಿಂದ ಜರುಗಿತು. ಆಗಮಿಸಿದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.
ನೈಋತ್ಯ ಪದವೀಧರರ ಕ್ಷೇತ್ರ ಚುನಾವಣೆ: ಕೊಡಗು ಜಿಲ್ಲೆಯಲ್ಲಿ ಒಟ್ಟು 3,909 ಮತದಾರರು
ಕರ್ನಾಟಕ ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆ ಸಂಬಂಧಿಸಿದಂತೆ ಕರ್ನಾಟಕ ನೈಋತ್ಯ ಪದವೀಧರರ ಕ್ಷೇತ್ರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ಜೂ.3 ರಂದು ನಡೆಯಲಿದೆ. ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯಲ್ಲಿ ಒಟ್ಟು 1578 ಮತದಾರರು ಇದ್ದು, ಇವರಲ್ಲಿ 543 ಪುರುಷರು ಮತ್ತು 1035 ಮಹಿಳಾ ಮತದಾರರು ಇದ್ದಾರೆ.
ಕನ್ನಡ ಫಲಕ ಅಳವಡಿಕೆ ಆದೇಶ: ಜಿಲ್ಲಾಧಿಕಾರಿಗೆ ಕನ್ನಡ ಸಾಹಿತ್ಯ ಪರಿಷತ್ ಅಭಿನಂದನೆ
ಮಡಿಕೇರಿಯಲ್ಲಿ ನಡೆದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ಕನ್ನಡ ಭಾಷೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಎಲ್ಲ ಸಾರ್ವಜನಿಕ ಫಲಕಗಳಲ್ಲಿ ಕನ್ನಡ ಪ್ರಮುಖ ಸ್ಥಾನದಲ್ಲಿರಬೇಕು ಮತ್ತು ಶೇ. 60ರಷ್ಟು ಭಾಗ ಕನ್ನಡದಲ್ಲಿ ಇರಬೇಕು ಎಂದು ಆದೇಶ ಹೊರಡಿಸಿರುವ ಕರ್ನಾಟಕ ಸರ್ಕಾರ ಹಾಗೂ ಜಿಲ್ಲೆಯಲ್ಲಿ ಅಳವಡಿಸಲು ಆದೇಶಿಸಿರುವ ಜಿಲ್ಲಾಧಿಕಾರಿ ವೆಂಕಟರಾಜಾ ಅವರನ್ನು ಅಭಿನಂದಿಸಿ ಪತ್ರ ಬರೆಯುವಂತೆ ತೀರ್ಮಾನಿಸಲಾಯಿತು.
  • < previous
  • 1
  • ...
  • 266
  • 267
  • 268
  • 269
  • 270
  • 271
  • 272
  • 273
  • 274
  • ...
  • 412
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved