• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಲೇಜು ವಿದ್ಯಾರ್ಥಿಗಳಿಗೆ ಪೊಲೀಸ್‌ ಇಲಾಖೆ ಸಂಚಾರ ಸುರಕ್ಷ ನಿಯಮ ಅರಿವು
ವಿರಾಜಪೇಟೆ ನಗರದಲ್ಲಿರುವ ಸಂತ ಅನ್ನಮ್ಮ ಕಾಲೇಜಿನ ಮೊದಲನೇ ಮತ್ತು ದ್ವಿತಿಯ ಪಿಯುಸಿ ವಿದ್ಯಾರ್ಥಿಗಳಿಗೆ ರಸ್ತೆ ಸಂಚಾರಿ ಸುರಕ್ಷ ನಿಯಮದ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆ ವಹಿಸಿದ ವಿರಾಜಪೇಟೆ ಡಿವೈಎಸ್ಪಿ ಮೋಹನ್ ಕುಮಾರ್ ಮಾತನಾಡಿ, ದ್ವಿಚಕ್ರ ವಾಹನ ಸವಾರರು ಕಡ್ಡಯವಾಗಿ ಹೆಲ್ಮೆಟ್ ಧರಿಸುವ ಮೂಲಕ ತಮ್ಮ ಜೀವ ಉಳಿಸಿಕೊಳ್ಳುವಂತಾಗಬೇಕು ಎಂದರು.
ಮಡಿಕೇರಿ: 23ರಂದು ‘ಪ್ರಕೃತಿ-ಪರಿಸರ’ ಜಿಲ್ಲಾ ಮಟ್ಟದ ಕವಿಗೋಷ್ಠಿ
ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ ಕೊಡಗು ಜಿಲ್ಲಾ ಸಮಿತಿ ವತಿಯಿಂದ 23ರಂದು ಮಡಿಕೇರಿ ನಗರದಲ್ಲಿ ಸಾರ್ವಜನಿಕರಿಗಾಗಿ ‘ಪ್ರಕೃತಿ-ಪರಿಸರ’ ವಿಷಯದ ಕುರಿತ ಜಿಲ್ಲಾ ಮಟ್ಟದ ಕವಿಗೋಷ್ಠಿ ಆಯೋಜಿಸಲಾಗಿದೆ. ಮೊದಲು ನೋಂದಾಯಿತ ೩೦ ಕವನಗಳಿಗೆ ಕಾರ್ಯಕ್ರಮದಲ್ಲಿ ವಾಚನ ಮಾಡಲು ಅವಕಾಶ ಕಲ್ಪಿಸಲಾಗುವುದು. ಆಸಕ್ತ ಕವಿಗಳು ಜೂ.೨೨ರ ಒಳಗೆ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.
ಚಿಕ್ಕಅಳುವಾರದ ಜ್ಞಾನ ಕಾವೇರಿ ಕ್ಯಾಂಪಸ್‌ನಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ
ಚಿಕ್ಕಅಳುವಾರದ ಜ್ಞಾನ ಕಾವೇರಿ ಕ್ಯಾಂಪಸ್, ಕೊಡಗು ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮ ನಡೆಯಿತು. ಚಿಕ್ಕಳುವಾರ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಆಲೂರ ಉದ್ಘಾಟಿಸಿದರು.
ಕುಶಾಲನಗರ: ಗ್ರಾಮೀಣ ಕ್ರೀಡಾಕೂಟ, ಕ್ರಿಕೆಟ್‌ ಪಂದ್ಯಾವಳಿ
ಕುಶಾಲನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ಪ್ರಥಮ ವರ್ಷದ ಗ್ರಾಮೀಣ ಕ್ರೀಡಾಕೂಟ ಹಾಗೂ ಕ್ರಿಕೆಟ್ ಪಂದ್ಯಾವಳಿ ನಡೆಯಿತು. ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ಬಹುಮಾನ ನೀಡಲಾಯಿತು.
ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿಗೆ ಸಿಲುಕಿ ಜಿಂಕೆ ಸಾವು
ಕುಶಾಲನಗರ-ಮಡಿಕೇರಿ ಮಾರ್ಗದ ಆನೆಕಾಡು ಮೀಸಲು ಅರಣ್ಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರಿಗೆ ಸಿಲುಕಿ ಜಿಂಕೆ ಸ್ಥಳದಲ್ಲಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಬೆಳಗ್ಗೆ 10 ಗಂಟೆ ವೇಳೆಗೆ ಕುಶಾಲನಗರ ಕಾರು ಶೋ ರೂಮ್ ನಿಂದ ಮಡಿಕೇರಿ ಶೋರೂಮ್ ಗೆ ತೆರಳುತ್ತಿದ್ದ ಹೊಸ ಕಾರು ಆನೆಕಾಡು ಬಳಿ ಅತ್ತೂರು ಅರಣ್ಯ ವಲಯದಿಂದ ಆನೆಕಾಡು ಮೀಸಲು ಅರಣ್ಯ ವಲಯದ ಕಡೆಗೆ ವೇಗದಿಂದ ಸಾಗುತ್ತಿದ್ದ ಜಿಂಕೆಗೆ ಡಿಕ್ಕಿಯಾಗಿದೆ.
ಉತ್ತಮ ಶಿಕ್ಷಣದಿಂದ ಸದೃಢ ಸಮಾಜ ನಿರ್ಮಾಣ: ಅಪ್ಪಾಜಿ ಗೌಡ
ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಶುಕ್ರವಾರ ಕಾಲೇಜು ಸಭಾಂಗಣದಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭ ನಡೆಯಿತು. ಕಾಲೇಜು ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಎಸ್. ಬಿ ಅಪ್ಪಾಜಿಗೌಡ ಉದ್ಘಾಟಿಸಿದರು.
ನಾಳೆ ಬೆಣ್ಣೆಹಣ್ಣು ಕ್ಷೇತ್ರೋತ್ಸವ, ವೈವಿಧ್ಯತೆ ಮೇಳ
ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರ ಚೆಟ್ಟಳ್ಳಿಯಲ್ಲಿ ಶನಿವಾರ ಬೆಣ್ಣೆಹಣ್ಣಿನ ಕ್ಷೇತ್ರೋತ್ಸವ ಮತ್ತು ವೈವಿಧ್ಯತೆಯ ಮೇಳ ಆಯೋಜಿಸಲಾಗಿದ್ದು, ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಬೆಣ್ಣೆಹಣ್ಣಿನ ವೈವಿಧ್ಯತೆ, ವೈಜ್ಞಾನಿಕ ಕೃಷಿ ಮತ್ತು ಬೆಳೆ ಸಂರಕ್ಷಣೆ ಬಗ್ಗೆ ಚರ್ಚಿಸಲಾಗುತ್ತಿದೆ.
ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ಕಾ ಕಾಲೇಜು ಸಂಸತ್ತು ರಚನೆ
ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2024-25 ನೇ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯನ್ನು ಪ್ರಜಾಪ್ರಭುತ್ವ ಮಾದರಿ ಗುಪ್ತಮತದಾನದ ಮೂಲಕ ನಡೆಸಿ, ಮಾದರಿ ಕಾಲೇಜು ಸಂಸತ್ತು ರಚಿಸಲಾಯಿತು. ಮಕ್ಕಳಿಂದ ಗೌಪ್ಯ ಮತದಾನ ನಡೆಯಿತು. ಮತ ಎಣಿಕೆಯನ್ನು ಉಪನ್ಯಾಸಕರಾದ ಸುನೀತಾ, ಅಭಿಷೇಕ್, ಪದ್ಮಾವತಿ, ಸುಚಿತ್ರಾ, ಅನುಷಾ, ಸಂಧ್ಯಾ, ಕವಿತಾಭಕ್ತಾ, ಈಶ ನೇರವೇರಿಸಿದರು.
ಅರೆಭಾಷೆ ಸಂಸ್ಕೃತಿ, ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪದಗ್ರಹಣ
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೂತನ ಅಧ್ಯಕ್ಷರಾಗಿ ಸದಾನಂದ ಗೌಡ ಮಾವಜಿ ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ. ನಗರದ ಕಾಫಿ ಕೃಪಾ ಕಟ್ಟಡದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ರಿಜಿಸ್ಟ್ರಾರ್ ಚಿನ್ನಸ್ವಾಮಿ, ಸಿಬ್ಬಂದಿ ಜ್ಯೋತಿ, ಶೋಭ ಇದ್ದರು.
ವಿರಾಜಪೇಟೆ: ಉದ್ಯೋಗ ಮೇಳ ಮುಕ್ತಾಯ
ವಿರಾಜಪೇಟೆ ಗೋಣಿಕೊಪ್ಪ ರಸ್ತೆಯ ಶಾನ್ಬೋಗ್ ಕಟ್ಟಡದಲ್ಲಿರುವ ಎಟೆಕ್ ಎಜುಕೇಶನಲ್ ಸೆಂಟರ್ ವತಿಯಿಂದ ಸಂಸ್ಥೆಯ ಸಭಾಂಗಣದಲ್ಲಿ ಶಂಕರಾಚಾರ್ಯ ಟ್ರಸ್ಟ್ ಹಾಗೂ ಮೈಸೂರಿನ ನೈಸ್ ಸಂಸ್ಥೆಯ ಸಹಯೋಗದೊಂದಿಗೆ ಉದ್ಯೋಗ ಮೇಳ ನಡೆಯಿತು. ಕೊಡಗಿನ ಸುಮಾರು 160 ವಿದ್ಯಾರ್ಥಿಗಳು ಈ ಮೇಳದಲ್ಲಿ ಭಾಗವಹಿಸಿದ್ದರು.
  • < previous
  • 1
  • ...
  • 328
  • 329
  • 330
  • 331
  • 332
  • 333
  • 334
  • 335
  • 336
  • ...
  • 485
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved