ಮುಂಗಾರಿಗೆ ಮುನ್ನವೇ ವಿಪತ್ತು: ಗಾಳಿಬೀಡು ನಿವಾಸಿಗಳಿಗೆ ಆತಂಕಮುಂಗಾರಿಗೂ ಮುನ್ನವೇ ಕೊಡಗಿನಲ್ಲಿ ಮಳೆ ಸುರಿಯಲು ಆರಂಭಿಸಿದ್ದು, ಮತ್ತೆ ಗಾಳಿಬೀಡು ಗ್ರಾ.ಪಂ. ವ್ಯಾಪ್ತಿಯ ಗುಡ್ಡ ಪ್ರದೇಶ ಸುತ್ತಮುತ್ತ ಭೂಮಿ ಒಳಗೆ ಶಬ್ದ ಬರುವ ಕುರಿತು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಇದಕ್ಕೆ ಪೂರಕವಾಗಿ ಇತ್ತೀಚೆಗೆ ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಿಡಿಲಿನ ಹೊಡೆತಕ್ಕೆ ಮನೆಯೊಂದು ಸಂಪೂರ್ಣ ನಾಶವಾಗಿದೆ. ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕಿದೆ.