• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೋಲಿನ ಭೀತಿಯಲ್ಲಿ ಬಿಜೆಪಿ ಇಲ್ಲಸಲ್ಲದ ಆರೋಪ: ಕಾಂಗ್ರೆಸ್ ಟೀಕೆ
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಭೇಟಿ ನೀಡಿದ ಸಂದರ್ಭ, ಒಕ್ಕಲಿಗ ಸಮಾಜದ ಸಮಸ್ಯೆಗಳನ್ನು ಅವರ ಮುಂದಿಡುವ ಪ್ರಯತ್ನವಾಗಿಯಷ್ಟೆ ಒಕ್ಕಲಿಗ ಸಮಾಜದ ಸಭೆ ನಡೆದಿತ್ತು. ಚುನಾವಣೆಯಲ್ಲಿ ಸೋಲುವ ಆತಂಕ ಎದುರಿಸುತ್ತಿರುವ ಬಿಜೆಪಿ ಪ್ರಮುಖರು, ಇತ್ತೀಚೆಗೆ ಒಕ್ಕಲಿಗರ ಸಭೆಯಲ್ಲಿ ಉಪಮುಖ್ಯಮಂತ್ರಿ ಪಾಲ್ಗೊಂಡಿರುವುದಕ್ಕೆ ಜಾತಿಯ ಲೇಪನವನ್ನು ನೀಡಿ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಟೀಕಿಸಿದೆ.
ನಾಪೋಕ್ಲು: ಮೂರನೇ ವರ್ಷದ ಕೊಡವ ಕೌಟುಂಬಿಕ ಹಗ್ಗಜಗ್ಗಾಟ ಕ್ರೀಡಾಕೂಟ ಉದ್ಘಾಟನೆ
ನಾಪೋಕ್ಲು ಕೆಪಿಎಸ್ ಶಾಲೆಯ ಆಟದ ಮೈದಾನದಲ್ಲಿ ಬೊಟ್ಟೋಳಂಡ ಕುಟುಂಬಸ್ಥರು ಆಯೋಜಿಸಿದ್ದ ಮೂರನೇ ವರ್ಷದ ಕೊಡವ ಕೌಟುಂಬಿಕ ಹಗ್ಗಜಗ್ಗಾಟ ಕ್ರೀಡಾಕೂಟ ಗುರುವಾರ ಆರಂಭವಾಯಿತು. ಮಡಿಕೇರಿ ಕೊಡ ಸಮಾಜ ಮತ್ತು ನಾಪೋಕ್ಲು ಕೊಡ ಸಮಾಜ ಮಹಿಳಾ ತಂಡಗಳ ನಡುವೆ ನಡೆದ ಪ್ರದರ್ಶನ ಪಂದ್ಯದಲ್ಲಿ ನಾಪೋಕ್ಲು ತಂಡ ಗೆಲವು ಸಾಧಿಸಿದರೆ, ನಾಪೋಕ್ಲು ಮತ್ತು ಅಮ್ಮತಿ ಕೊಡವ ಸಮಾಜದ ಪುರುಷರ ತಂಡ ಪಂದ್ಯಾಟದಲ್ಲಿ ನಾಪೋಕ್ಲು ತಂಡ ಗೆಲವು ಸಾಧಿಸಿತು.
ಮೂಲಸೌಕರ್ಯ ವಂಚಿತ ಅಂಬಟಿ ಗ್ರಾಮ: ಮತದಾನ ಬಹಿಷ್ಕಾರ ಘೋಷಣೆ
ಬಿಟ್ಟಂಗಾಲ ಗ್ರಾ.ಪಂ. ವ್ಯಾಪ್ತಿಯ ಅಂಬಟ್ಟಿ ಗ್ರಾಮಸ್ಥರು ಮತ ಬಹಿಷ್ಕಾರ ಕುರಿತ ಬ್ಯಾನರ್ ಗಳನ್ನು ಇದೀಗ ಮುಖ್ಯ ರಸ್ತೆಯಲ್ಲಿ ಅಳವಡಿಸಿದ್ದು, ‘ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ, ಚರಂಡಿ, ಶುದ್ಧ ಕುಡಿಯುವ ನೀರು, ದಾರಿದೀಪ ಮೊದಲಾದ ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಗ್ರಾಮಕ್ಕೆ ಕಲ್ಪಿಸುವವರೆಗೂ ಯಾವುದೇ ಪಕ್ಷಗಳು ಮತ್ತು ಮುಖಂಡರು ಮತಯಾಚನೆಗಾಗಿ ನಮ್ಮ ಗ್ರಾಮವನ್ನು ಪ್ರವೇಶಿಸಬೇಡಿ’ ಎಂದು ಘೋಷಿಸಿದ್ದಾರೆ.
ಕೊಡವ ಕೌಟುಂಬಿಕ ಹಾಕಿ: ಕರ್ತಮಾಡ ವಿರುದ್ಧ ನೆಲ್ಲಮಕ್ಕಡ ಭರ್ಜರಿ ಜಯ
ಚೆರಿಯ ಪರಂಬುವಿನ ಜನರಲ್ ಕೆ.ಎಸ್ ತಿಮ್ಮಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕುಂಡ್ಯೋಳಂಡ ಕಪ್ ಹಾಕಿ ನಮ್ಮೆಯ ಗುರುವಾರದ ಪಂದ್ಯಗಳಲ್ಲಿ ನೆಲ್ಲಮಕ್ಕಡ 3- 0 ಅಂತರದಿಂದ ಕರ್ತಮಾಡ ವಿರುದ್ಧ ಭರ್ಜರಿ ಜಯ ಗಳಿಸಿತು. ಕುಪ್ಪಮಡ (ಕೈಕೇರಿ) ಬೊಪ್ಪಂಡ ವಿರುದ್ಧ 4- 0 ಅಂತರದಲ್ಲಿ ಗೆಲುವು ಸಾಧಿಸಿತು.
ಕೊಡಗಿನಲ್ಲಿ ಹುಲಿ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಬಲಿ

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಜಾಗಲೆ ಗ್ರಾಮದಲ್ಲಿ ಗುರುವಾರ ಸಂಜೆ ಮತ್ತೆ ಹುಲಿ ದಾಳಿ ನಡೆದು ಅಸ್ಸಾಂ ಮೂಲದ ಕಾರ್ಮಿಕ ಮುಝೀದ್ ರೆಹಮಾನ್ (55) ಮೃತಪಟ್ಟರು.  

ಇಂದಿನಿಂದ ‘ಬೊಟ್ಟೋಳಂಡ ಕಪ್’ ಕೊಡವ ಕೌಟುಂಬಿಕ ಹಗ್ಗ ಜಗ್ಗಾಟ- 2024
ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ಮೈದಾನದಲ್ಲಿ ಮೂರನೇ ವರ್ಷದ ಕೊಡವ ಕೌಟುಂಬಿಕ ಹಗ್ಗ ಜಗ್ಗಾಟ- 2024 ಬೊಟ್ಟೋಳಂಡ ಕಪ್ ಉತ್ಸವ ನಡೆಯಲಿದ್ದು ಇದರ ಅಂಗವಾಗಿ ಗುರುವಾರ ಬೆಳಗ್ಗೆ 9 ಗಂಟೆಗೆ ಶ್ರೀರಾಮ ಮಂದಿರದಿಂದ ಮೆರವಣಿಗೆ, 10.15ಕ್ಕೆ ಮೈದಾನದಲ್ಲಿ ಧ್ವಜಾರೋಹಣ ನೆರವೇರಲಿದೆ.
ಕೊಡಗು ಗೌಡ ಯುವ ವೇದಿಕೆ ಗೌಡ ಪ್ರೀಮಿಯರ್ ಲೀಗ್‌ ಕ್ರಿಕೆಟ್‌ ಕೂಟ ಚಾಲನೆ
ಕೊಡಗು ಗೌಡ ಯುವ ವೇದಿಕೆ ವತಿಯಿಂದ ಗೌಡ ಪ್ರೀಮಿಯರ್ ಲೀಗ್ ಸೀಸನ್ 2 ಕ್ರಿಕೆಟ್‌ ಪಂದ್ಯಾವಳಿಗೆ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು‌. ಬುಧವಾರ ನಡೆದ ಮೊದಲ ಪಂದ್ಯಾವಳಿಯಲ್ಲಿ ಜಿ ಕಿಂಗ್ಸ್ ಸಿದ್ದಲಿಂಗಪುರ ತಂಡ ಮಡಿಕೇರಿ ಚಾಂಪಿಯನ್ಸ್ ಭಾವ ತಂಡದ ಎದುರು 28 ರನ್‌ಗಳ ಗೆಲವು ಸಾಧಿಸಿತು‌.‌
ಕೊಡಗು ಜಿಲ್ಲಾದ್ಯಂತ ರಾಮನವಮಿ ಆಚರಣೆ ಸಂಭ್ರಮ
ರಾಮನವಮಿ ಪ್ರಯುಕ್ತ ಕೊಡಗು ಜಿಲ್ಲೆಯ ರಾಮ ಹಾಗೂ ಹನುಮ ದೇವಾಲಯಗಳಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜಾ ಕೆಂಕರ್ಯಗಳು ನಡೆದವು. ಬ್ರಾಹ್ಮಿ ಮುಹೂರ್ತದ ವೇಳೆಗೆ ದೇವಾಲಯಗಳಲ್ಲಿ ಪೂಜಾ ಕಾರ್ಯಗಳಿಗೆ ಚಾಲನೆ ನೀಡಲಾಯಿತು. ಪಂಚಾಮತ ಅಭಿಷೇಕದ ನಂತರ ಅಲಂಕಾರ ಮಾಡಿ, ಮಹಾಮಂಗಳಾರತಿ ನೆರವೇರಿಸಿ ಭಕ್ತರಿಗೆ ತೀರ್ಥ ಪ್ರಸಾದ ವಿತರಿಸಲಾಯಿತು.
ಕೊಡವ ಕೌಟುಂಬಿಕ ಹಾಕಿ: ಮಾದಂಡ ವಿರುದ್ಧ ಚೇಂದಿರ ಭರ್ಜರಿ ಮುನ್ನಡೆ
ಚೆರಿಯಪರಂಬುವಿನ ಜನರಲ್ ಕೆ.ಎಸ್. ತಿಮ್ಮಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕುಂಡ್ಯೋಳಂಡ ಕಪ್ ಹಾಕಿ ನಮ್ಮೆಯಲ್ಲಿ ಬುಧವಾರದ ಪಂದ್ಯಗಳಲ್ಲಿ ಸೋಮಯಂಡ ಮತ್ತು ಮಾತ್ರಂಡ ತಂಡಗಳ ನಡುವೆ ಸಮ ಬಲದ ಹೋರಾಟ ನಡೆಯಿತು. ಬಳಿಕ ಟೈ ಬ್ರೇಕರ್ ನಲ್ಲಿ ಮಾತ್ರಂಡ 7-5 ಅಂತರದಿಂದ ಸೋಮಯಂಡ ವಿರುದ್ಧ ಜಯ ಸಾಧಿಸಿತು.
ಡಾ.ಅಂಬೇಡ್ಕರ್‌ ಚಿಂತನೆ ಇಂದಿಗೂ ಪ್ರಸ್ತುತ: ಜಯಪ್ಪ ಹಾನಗಲ್‌
ಸೋಮವಾರಪೇಟೆ ಸಮೀಪದ ಯಡೂರಿನ ಬಿ.ಟಿ.ಚನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ಡಾ.ಬಿ.ಆರ್.ಅಂಬೇಡ್ಕರ್‌ ಅವರ 133ನೆ ಜನ್ಮದಿನಾಚರಣೆ ನಡೆಯಿತು. ದಲಿತ ಮುಖಂಡ ಜಯಪ್ಪ ಹಾನಗಲ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡರು.
  • < previous
  • 1
  • ...
  • 370
  • 371
  • 372
  • 373
  • 374
  • 375
  • 376
  • 377
  • 378
  • ...
  • 484
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved