• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತ್ತೊಮ್ಮೆ ಮೋದಿ ಪ್ರಧಾನಿ ಸಂಕಲ್ಪ: ಡಾ. ಅಶ್ವತ್ಥ್‌ ನಾರಾಯಣ ಕರೆ
ವಿರಾಜಪೇಟೆಯ ಸೆರಿನಿಟಿ ಹಾಲ್‌ನಲ್ಲಿ ಗುರುವಾರ ನಡೆದ ವಿರಾಜಪೇಟೆ ಮಂಡಲ ಬಿಜೆಪಿ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭಕ್ಕೆ ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಚಾಲನೆ ನೀಡಿದರು.ಮೋದಿ ಅವರನ್ನು ಮೂರನೇ ಅವಧಿಗೆ ಪ್ರಧಾನಿಯಾಗಿಸಲು ಕಾರ್ಯಕರ್ತರು ಸಂಕಲ್ಪ ಕೈಗೊಳ್ಳಬೇಕು ಎಂದು ಅವರು ಕಾರ್ಯಕರ್ತರಿಗೆ ಕರೆ ನೀಡಿದರು.
ಕುಶಾಲನಗರ ಕಂದಾಯ ಇಲಾಖೆಯಿಂದ ಪಹಣಿ, ಪೋಡಿ ದುರಸ್ತಿ ಅವಕಾಶ
ಇತ್ತೀಚೆಗೆ ಕೊಡಗು ಜಿಲ್ಲೆಗೆ ಆಗಮಿಸಿದ ಕಂದಾಯ ಸಚಿವರ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಸಲಹೆಯಂತೆ ಹಲವೆಡೆ ರೈತರಿಗೆ ಹಕ್ಕು ವರ್ಗಾವಣೆ, ಬ್ಯಾಂಕ್ ಸಾಲ, ಭೂ ಪರಿವರ್ತನೆ, ಬೆಳೆ ಪರಿಹಾರ ಮುಂತಾದ ಸರ್ಕಾರದ ಯೋಜನೆ ಸದುಪಯೋಗ ಪಡೆಯಲು ತೊಂದರೆ ಉಂಟಾಗುತ್ತಿದೆ. ಅದನ್ನು ಪರಿಹರಿಸಲು ಕಂದಾಯ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಹಸೀಲ್ದಾರ್‌ ಮಾಹಿತಿ ನೀಡಿದರು.
ಸಾರ್ವಜನಿಕ ರಸ್ತೆಗೆ ಸ್ವಂತ ಖರ್ಚಿನಲ್ಲಿ ಕಾಂಕ್ರಿಟ್‌ ಹೊದಿಸಿದ ಕಾರ್ಮಿಕ!
ರಾಮನಗರ ಹೆಗ್ಗಳ ಶಾಲೆಯ ರಸ್ತೆಯ ಸಮೀಪದಲ್ಲಿ ಮೇಲಿನ ಭಾಗದಲ್ಲಿ ಬರೆಯೊಂದು ಇದ್ದು ಮಳೆಗಾಲದಲ್ಲಿ ಆ ಬರೆಯ ಮೂಲಕ ನೀರು ಕೊಚ್ಚಿ ಬಂದು ರಸ್ತೆ ಹೊಂಡವಾಗಿ ಕೆಸರು ತುಂಬಿರುತ್ತದೆ. ಇದರಿಂದ ಸಾರ್ವಜನಿಕರಿಗೂ ಕಷ್ಟವಾಗುತ್ತಿತ್ತು. ಇದನ್ನು ಮನಗಂಡ ಕೂಲಿ ಕಾರ್ಮಿಕ ಮಧು ಸ್ವಂತ ಖರ್ಚಿನಲ್ಲಿ ರಸ್ತೆಗೆ ಕಾಂಕ್ರಿಟ್‌ ಹಾಕಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಮಡಿಕೇರಿ: ರೆಂಟಲ್‌ ಬೈಕ್‌ ಮಳಿಗೆ ಪರವಾನಗಿ ರದ್ದುಗೊಳಿಸಲು ಆಗ್ರಹ
ಮಡಿಕೇರಿ ಕಾರು ನಿಲ್ದಾಣದ ಸಮೀಪದಲ್ಲೇ ರೆಂಟಲ್‌ ಬೈಕ್‌ ಮಳಿಗೆ ಮಾಡಲಾಗುತ್ತಿದೆ. ಇದನ್ನು ತೆರವುಗೊಳಿಸದಿದ್ದಲ್ಲಿ ಸೋಮವಾರದಿಂದ ಹಳದಿ ಬೋರ್ಡ್ ಟ್ಯಾಕ್ಸಿ ವಾಹನಗಳನ್ನು ಸ್ಥಗಿತಗೊಳಿಸುವ ಮೂಲಕ ಪ್ರತಿಭಟನೆ ನಡೆಸುವುದಾಗಿ ಮಡಿಕೇರಿ ಪ್ರವಾಸಿ ಕಾರು ಮಾಲೀಕರ ಮತ್ತು ಚಾಲಕರ ಸಂಘ ಎಚ್ಚರಿಕೆ ನೀಡಿದೆ.
ರಾಜ್ಯದಲ್ಲಿ ತಾಲೀಬಾನ್‌ ಸರ್ಕಾರ: ಪ್ರತಾಪ ಸಿಂಹ ಕಿಡಿ
ಮೊನ್ನೆ ವಿಧಾನಸಭೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಟ್ರಯಲ್‌ ಅಷ್ಟೇ. ಮುಂದಿನ ದಿನಗಳಲ್ಲಿ ವಿಧಾನಸೌಧದ ಮೇಲಿರುವ ಗೋಪುರ ಗುಂಬಜ್ ಆಗುತ್ತದೆ. ಅದರ ಮೇಲೆ ಒಂದು ಲೌಡ್ ಸ್ಪೀಕರ್ ಬಂದು ಆಜಾನ್ ಕೇಳುತ್ತದೆ ಎಂದು ಮೈಸೂರು ಕೊಡಗು ಸಂಸದ ಪ್ರತಾಪ್‌ ಸಿಂಹ ಗುರುವಾರ ವಿರಾಜಪೇಟೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಗೋಣಿಕೊಪ್ಪ ಹೈಟೆಕ್ ಬಸ್ ನಿಲ್ದಾಣ ಕಾಮಗಾರಿಗೆ ಚಾಲನೆ
ಗೋಣಿಕೊಪ್ಪ ಹೈಟೆಕ್ ಬಸ್ ನಿಲ್ದಾಣ ಕಾಮಗಾರಿಗೆ ಗುರುವಾರ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಭೂಮಿಪೂಜೆ ನಡೆಸಿ ಚಾಲನೆ ನೀಡಿದರು. ಕಾಮಗಾರಿಯ ಗುಣಮಟ್ಟ, ಸಮಯ ಪಾಲನೆ ಇವುಗಳಲ್ಲಿ ಯಾವುದೇ ಲೋಪ ನಡೆಯದಂತೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಕೊಡಗು ಜಿಲ್ಲೆಯ 22 ವಿಶೇಷಚೇತನರಿಗೆ ವೀಲ್‌ಚೇರ್ ವಿತರಣೆ
ಮಡಿಕೇರಿಯ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಸಭಾಂಗಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ ೨೨ ಮಂದಿ ವಿಕಲಚೇತನರಿಗೆ ವೀಲ್‌ಚೇರ್‌ ವಿತರಿಸಲಾಯಿತು. 25,410 ರು. ವೆಚ್ಚದ 10 ವೀಲ್‌ಚೇರ್‌ಗಳು ಮತ್ತು 17 ಸಾವಿರ ರು. ವೆಚ್ಚದ 19 ವೀಲ್‌ಚೇರ್‌ಗಳನ್ನು ಕೊಡಗು ಮತ್ತು ಹುಣಸೂರು ವಿಭಾಗಕ್ಕೆ ಸೇರಿದ 29 ವಿಶೇಷಚೇತನರಿಗೆ ವಿತರಿಸಲಾಯಿತು.
ಸೋಮವಾರಪೇಟೆ: ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ
ಸರ್ ಸಿ.ವಿ. ರಾಮನ್ ಜ್ಞಾಪಕಾರ್ಥವಾಗಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಸೋಮವಾರಪೇಟೆಯ ಎಸ್.ಜೆಎಂ ಪ್ರೌಢಶಾಲೆಯಲ್ಲಿ ಹಾಗೂ ಐಗೂರು ಸರ್ಕಾರಿ ಪದವಿಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗದ ವಿಜ್ಞಾನ ಸಂಘದ ವತಿಯಿಂದ ಆಚರಿಸಲಾಯಿತು.
ಅರಣ್ಯ ಪದವೀಧರ ವಿಧ್ಯಾರ್ಥಿಗಳ ಮನವಿಗೆ ಸಚಿವ ಸ್ಪಂದನೆ
ವಲಯ ಅರಣ್ಯಾಧಿಕಾರಿ ಸೇರಿದಂತೆ ಉಳಿದ ಬೇಡಿಕೆಗಳಿಗೆ ತಜ್ಞರ ಸಮಿತಿ ರಚಿಸಿ ಬೇರೆ ಬೇರೆ ರಾಜ್ಯಗಳಿಂದ ವರದಿಗಳನ್ನು ತರಿಸಿ. ತಜ್ಞರ ಸಮಿತಿ ವರದಿ ತಯಾರಿಸಿ ನಿಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗುವುದು. ಸರ್ಕಾರ ನಿಮ್ಮ ಪರವಾಗಿದೆ. ನಿಮ್ಮ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಷ್ಕರ ನಿರತ ಅರಣ್ಯ ಮಹಾವಿದ್ಯಾಲಯ ವಿದ್ಯಾರ್ಥಿಗಳಿಗೆ ಬೆಂಗಳೂರಿನಲ್ಲಿ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು.
ಕ್ರಿಕೆಟ್: ಟೀಮ್ ಕಾರ್ಣಿಕ ಕೊಡಗು ಚಾಂಪಿಯನ್, ಫ್ರೆಂಡ್ಸ್ ಇಲೆವೆನ್ ಅಮ್ಮತಿ ರನ್ನರ್ಸ್
ಅಮ್ಮತಿಯ ಪ್ರೌಢ ಶಾಲಾ ಮೈದಾನದಲ್ಲಿ ನಡೆದ ಅಮೃತ ಯುವ ಮೊಗೇರ ಸೇವಾ ಸಮಾಜ ಸಿದ್ದಾಪುರ ಹಾಗೂ ಅಮ್ಮತಿ ಹೋಬಳಿ ನೇತೃತ್ವದಲ್ಲಿ ಮೂರು ದಿನಗಳ ಕಾಲ ನಡೆದ ಪಂದ್ಯಾವಳಿಯಲ್ಲಿ ಒಟ್ಟು ಹತ್ತು ತಂಡಗಳು ಚಾಂಪಿಯನ್ ಟ್ರೋಫಿಗಾಗಿ ಸೆಣಸಾಡಿದವು. ಟೀಮ್ ಕಾರ್ಣಿಕ ಕೊಡಗು ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಫ್ರೆಂಡ್ಸ್ ಇಲೆವೆನ್ ಅಮ್ಮತಿ ತಂಡವು ರನ್ನರ್ಸ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.
  • < previous
  • 1
  • ...
  • 402
  • 403
  • 404
  • 405
  • 406
  • 407
  • 408
  • 409
  • 410
  • ...
  • 481
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved