ವಸ್ತ್ರ ಸಂಹಿತೆ ವಿಚಾರವಾಗಿ ವಿವಾದದ ಕೇಂದ್ರ ಬಿಂದುವಾಗಿರುವ ಮಡಿಕೇರಿ ತಾಲೂಕಿನ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಪ್ರಧಾನ ಅರ್ಚಕರ ಮೇಲೆ ಸೋಮವಾರ ಸಂಜೆ ತೀವ್ರ ಹಲ್ಲೆಯಾಗಿದ್ದು, ಮಡಿಕೇರಿ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ.