ಉದ್ಯೋಗ ಸೃಷ್ಟಿಸಲು ಕೈಗಾರಿಕಾ ಪ್ರದೇಶ ಸ್ಥಾಪನೆ: ಎಸ್.ಎನ್.ನಾರಾಯಣಸ್ವಾಮಿಪ್ರತಿನಿತ್ಯ ಉದ್ಯೋಗಕ್ಕಾಗಿ ಯುವಕರು ಮತ್ತು ಯುವತಿಯರು ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದು, ಇದನ್ನು ತಪ್ಪಿಸಲು ಸ್ಥಳೀಯವಾಗಿ ಉದ್ಯೋಗ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಏಳು ನೂರು ಎಕರೆ ಪ್ರದೇಶದಲ್ಲಿ ಕೈಗಾರಿಕೆ ಅಭಿವೃದ್ಧಿ ಪ್ರದೇಶ ಮತ್ತು ನಗರಾಭಿವೃದ್ಧಿ ಪ್ರದೇಶವನ್ನು ನಿರ್ಮಾಣ ಮಾಡಲು ಜಮೀನನ್ನು ಮಂಜೂರು ಮಾಡಿಸಿದ್ದು, ಅತಿ ಶೀಘ್ರದಲ್ಲೇ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು.