ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶಅರಣ್ಯ ಇಲಾಖೆಯವರು ರೈತರಿಗೆ ನೋಟಿಸ್ ನೀಡುವ ಮುನ್ನ ರೈತರೊಂದಿಗೆ ಪೂರ್ವಭಾವಿ ಸಭೆಗಳನ್ನು ನಡೆಸಿ, ನಮ್ಮ ಬಳಿಯಿರುವ ಪಹಣಿ, ಹಕ್ಕುಪತ್ರಗಳು, ನೋಂದಣಿ ಪತ್ರಗಳನ್ನು ಪರಿಶೀಲಿಸಿ ಅನಂತರ ಅವುಗಳನ್ನು ನ್ಯಾಯಾಲಯ ಮೂಲಕ ವಶಕ್ಕೆ ಪಡೆಯಬೇಕಾಗಿತ್ತು, ಆದರೆ ಅಧಿಕಾರಿಗಳು ರೈತರ ಜಮೀನಿಗೆ ಜೆಸಿಬಿಗಳನ್ನು ಬಿಟ್ಟು ಬೆಳೆದಿರುವ ಬೆಳೆಗಳನ್ನು ನಾಶಪಡಿಸುತ್ತಿರುವುದು ಎಷ್ಟರ ಮಟ್ಟಿಗೆ ಸರಿ?