ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಕುವೆಂಪುಕುವೆಂಪು ಅವರು ವರಕವಿ ಬೇಂದ್ರೆ ಯವರಿಂದ ಯುಗದ ಕವಿ ಜಗದ ಕವಿ ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ ಜ್ಞಾನಪೀಠ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಕೊಡಮಾಡುವ ಕರ್ನಾಟಕ ರತ್ನ, ಹಾಗೂ ಪಂಪ ಪ್ರಶಸ್ತಿ ಪುರಸ್ಕೃತರು.