ಶ್ರೀ ಗವಿಸಿದ್ದೇಶ್ವರ ಜಾತ್ರಾಮಹೋತ್ಸವ ಮಹಾದಾಸೋಹ ಶುರುದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವದಲ್ಲಿ ನಿತ್ಯವೂ ಬರುವ ಲಕ್ಷ ಲಕ್ಷ ಭಕ್ತರಿಗೆ ಪ್ರಸಾದ ವಿತರಣೆಗಾಗಿ ಮಹಾದಾಸೋಹದ ಒಲೆಯನ್ನು ಶುಕ್ರವಾರ ರಾತ್ರಿ ಹೊತ್ತಿಸಲಾಗಿದ್ದು, ಅಡುಗೆ ಶುರು ಮಾಡಲಾಗಿದೆ. ಜ. 11ರಂದು ಜಾಗೃತಿ ರ್ಯಾಲಿಯಲ್ಲಿ ಭಾಗವಹಿಸುವ ಸುಮಾರು 25 ಸಾವಿರ ವಿದ್ಯಾರ್ಥಿಗಳಿಗೆ ಮೊದಲ ದಿನವೇ ಮಹಾದಾಸೋಹದಲ್ಲಿ ಮಹಾಪ್ರಸಾದ ವಿತರಣೆ ನಡೆಯಲಿದೆ.