ರಾಷ್ಟ್ರೀಯ ವಿಚಾರದಲ್ಲಿ ರಾಜಿ ಇಲ್ಲ: ಸಚಿವ ತಂಗಡಗಿಪಾಕಿಸ್ತಾನ, ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ಅಡಗುತಾಣಗಳ ಮೇಲೆ ದಾಳಿ ಮಾಡಿ ನಾಶ ಮಾಡಿರುವ ಭಾರತದ ಸೈನಿಕರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದಿರುವ ಸಚಿವ ಶಿವರಾಜ ತಂಗಡಗಿ, ಈ ದಾಳಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ಧ ಅವರನ್ನು ಛೂ ಬಿಡುತ್ತಿದ್ದ ಪಾಕಿಸ್ತಾನಕ್ಕೂ ಎಚ್ಚರಿಕೆ ಆಗಿದೆ ಎಂದಿದ್ದಾರೆ.