• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅಂಬೇಡ್ಕರ್ ಓದು ಕಾರ್ಯಕ್ರಮ
ಕುಷ್ಟಗಿ ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2023-24ನೇ ಸಾಲಿನ ಅಂಬೇಡ್ಕರ್ ಓದು ಕಾರ್ಯಕ್ರಮ ನಡೆಸಲಾಯಿತು.
ಎಸ್‌ಟಿಗೆ ಸೇರಿಸಲು ಕೇಂದ್ರದ ಒತ್ತಡ ಹೇರಲು ನಿರ್ಧಾರ: ನಿಜಶರಣ ಅಂಬಿಗರ ಚೌಡಯ್ಯ ಗುರುಪೀಠದ ಸ್ವಾಮೀಜಿ
೧೨ನೇ ಶತಮಾನದ ಶಿವಶರಣರಿಗೆ ತನ್ನ ದೋಣಿ ಮೂಲಕ ಅನುಭವ ಮಂಟಪಕ್ಕೆ ಸಾಗಿಸುವ ಕಾಯಕ ಮಾಡುತ್ತಿದ್ದ ನಿಜಶರಣ ಅಂಬಿಗರ ಚೌಡಯ್ಯನವರು ತಮ್ಮ ಹರಿತವಾದ ವಚನಗಳ ಮೂಲಕ ಮೂಢನಂಬಿಕೆ, ಕಂದಾಚಾರ ತೊಲಗಿಸಲು ಶ್ರಮಿಸಿದ ಕ್ರಾಂತಿಕಾರಿಯಾಗಿದ್ದಾರೆ. ಅವರ ಅನುಯಾಯಿ ಸಮಾಜವಾದ ಗಂಗಾಮತ ಸಮಾಜವು ೩೯ ಪರ್ಯಾಯ ಪದಗಳಿಂದ ರಾಜ್ಯಾದ್ಯಂತ ಹರಿದು ಹಂಚಿಹೋಗಿದ್ದು, ಅವರೆಲ್ಲರನ್ನು ಹಾವೇರಿಯ ಜಿಲ್ಲೆಯ ಸುಕ್ಷೇತ್ರ ಟಿ.ನರಸೀಪುರದ ಅವರ ಐಕ್ಯಸ್ಥಳದಲ್ಲಿನ ಅಂಬಿಗರ ಚೌಡಯ್ಯ ಗುರುಪೀಠದಲ್ಲಿ ಪ್ರತಿವರ್ಷ ಅವರನ್ನು ಸ್ಮರಿಸುವ ಕೆಲಸ ನಡೆಯುತ್ತಿದೆ
ಧೂಳು, ಬಿಸಿಲಲ್ಲಿ ಪಾಠ ಆಲಿಸುವ ಅಂಗನವಾಡಿ ಮಕ್ಕಳು
ಅಂಗನವಾಡಿ ಪಕ್ಕದಲ್ಲಿಯೇ ರೈಲ್ವೆ ನಿಲ್ದಾಣ ಕಾಮಗಾರಿ ನಡೆದಿರುವುದರಿಂದ ವಿಪರೀತ ಧೂಳು ಬರುತ್ತಿದೆ. ಹೀಗಾಗಿ, ಇಲ್ಲಿ ಉಸಿರುಗಟ್ಟುವ ವಾತಾವರಣವಿದೆ. ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದ್ದರೂ ಸಂಬಂಧಪಟ್ಟವರು ಗಮನ ಹರಿಸದಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.
ರಾಜ್ಯಾದ್ಯಂತ ಸರ್ಕಾರಿ ಪದವಿ ಕಾಲೇಜಿಗೆ ಅಘೋಷಿತ ರಜೆ
ರಾಜ್ಯಾದ್ಯಂತ ಇರುವ ಸುಮಾರು 432 ಸರ್ಕಾರಿ ಪದವಿ ಕಾಲೇಜುಗಳು ಕಳೆದ 22 ದಿನಗಳಿಂದ ಅಘೋಷಿತ ರಜೆಯಲ್ಲಿವೆ. ಉಪನ್ಯಾಸಕರು ಇಲ್ಲದಿರುವುದರಿಂದ ವಿದ್ಯಾರ್ಥಿಗಳು ನಿತ್ಯವೂ ಕಾಲೇಜಿಗೆ ಬಂದು, ಹರಟೆ ಹೊಡೆದು ಮನೆಗೆ ವಾಪಸಾಗುವಂತಾಗಿದೆ. ಇನ್ನೇನು ತಿಂಗಳು ಕಳೆದರೆ ಪರೀಕ್ಷೆ ಇರುವ ಹೊತ್ತಲ್ಲಿ ಪದವಿ ಕಾಲೇಜು ತರಗತಿ ನಡೆಯದೇ ಇರುವುದರಿಂದ ವಿದ್ಯಾರ್ಥಿಗಳು ಆಂತಕಗೊಂಡಿದ್ದಾರೆ. ರಾಜ್ಯದ ಸರ್ಕಾರಿ ಪದವಿ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ 11,500 ಅತಿಥಿ ಉಪನ್ಯಾಸಕರು ಪಾಠ ಮಾಡುವ ಬದಲು ತಮ್ಮ ಸೇವಾ ಕಾಯಮಾತಿಗಾಗಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ನವೆಂಬರ್ 23ರಿಂದ ನಿರಂತರವಾಗಿ ಧರಣಿ ಪ್ರಾರಂಭಿಸಿದ್ದಾರೆ. 22 ದಿನಕ್ಕೆ ಹೋರಾಟ ಕಾಲಿಟ್ಟಿದೆ.
ಕ್ಯಾನ್ಸರ್ ಆರಂಭದಲ್ಲೇ ಪತ್ತೆಯಾದರೆ ನೂರಕ್ಕೆ ನೂರು ಗುಣಮುಖ
ಪ್ರತಿ ಐವರಲ್ಲಿ ಒಬ್ಬರಿಗೆ ಕ್ಯಾನ್ಸರ್ ಪತ್ತೆಯಾಗುವಷ್ಟು ರೋಗ ಬೆಳೆಯುತ್ತಿರುವುದರಿಂದ ಪ್ರಾರಂಭದಲ್ಲಿಯೇ ಪತ್ತೆ ಮಾಡಿದರೆ ಖಂಡಿತವಾಗಿಯೂ ಸಂಪೂರ್ಣ ಗುಣಮುಖವಾಗಲು ಸಾಧ್ಯವಾಗುತ್ತದೆ ಎಂದು ಹುಬ್ಬಳ್ಳಿ ಎಚ್.ಸಿ.ಜಿ. ಆಸ್ಪತ್ರೆಯ ಡಾ.ಸಂತೋಷ ಚಿಕ್ಕರಡ್ಡಿ ಹೇಳಿದ್ದಾರೆ. ನಗರದ ಲಯನ್ಸ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಕ್ಯಾನ್ಸರ್ ಅಪಾಯಕಾರಿ ಎನ್ನುವುದಕ್ಕಿಂತ ಅದನ್ನು ಪ್ರಾರಂಭದಲ್ಲಿಯೇ ಪತ್ತೆ ಮಾಡುವ ಕಾರ್ಯ ಆಗಬೇಕು. ಇದಕ್ಕಾಗಿ ಗುಣಲಕ್ಷಣಗಳನ್ನು ಅರಿತುಕೊಂಡು ಮೊದಲೇ ಇಂಥ ತಪಾಸಣಾ ಶಿಬಿರಕ್ಕೆ ಹಾಜರಾಗಿ, ಗುರುತಿಸಿಕೊಳ್ಳಬೇಕು. ಒಂದು, ಎರಡನೇ ಹಂತದಲ್ಲಿ ಪತ್ತೆಯಾದರೆ ಖಂಡಿತವಾಗಿಯೂ ಅದನ್ನು ಗುಣಮುಖ ಮಾಡುವುದಕ್ಕೆ ವೈದ್ಯಕೀಯವಾಗಿ ಸಾಕಷ್ಟು ಅವಕಾಶಗಳು ಇವೆ. ಆದರೆ, ಮೂರು ಮತ್ತು ನಾಲ್ಕನೇ ಹಂತದಲ್ಲಿ ನಿವಾರಿಸುವ ಸಾಧ್ಯತೆ ತೀರಾ ಕಡಿಮೆಯಾಗುತ್ತದೆ. ಹೀಗಾಗಿ, ಜಾಗೃತಿ ಅಗತ್ಯ ಎಂದರು.
ಪದವಿ ಕಾಲೇಜು ತರಗತಿಗಾಗಿ ಎಬಿವಿಪಿ ಪ್ರತಿಭಟನೆ
ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿರುವುದರಿಂದ ಸರ್ಕಾರಿ ಪದವಿ ಕಾಲೇಜುಗಳ ತರಗತಿಗಳು ನಡೆಯದಂತಾಗಿದ್ದು, ಕೂಡಲೇ ಸರ್ಕಾರ ಸಮಸ್ಯೆ ಇತ್ಯರ್ಥ ಮಾಡುವಂತೆ ಆಗ್ರಹಿಸಿ ಎಬಿವಿಪಿ ಗುರುವಾರ ಪ್ರತಿಭಟನೆ ನಡೆಸಿತು. ಕಾಲೇಜುಗಳಲ್ಲಿ ಸರಿಯಾಗಿ ತರಗತಿಗಳು ನಡೆಯದ ವಿದ್ಯಾರ್ಥಿಗಳ ಪಠ್ಯ ಚಟುವಟಿಕೆಗಳಿಗೆ ಹಿನ್ನಡೆ ಆಗುತ್ತಿದೆ. ಕೆಲವೊಂದು ವಿಶ್ವವಿದ್ಯಾಲಯಗಳು ಸೆಮಿಸ್ಟರ್ ಪರೀಕ್ಷೆ ನಡೆಸುವ ವೇಳಾಪಟ್ಟಿ ಬಿಡುಗಡೆ ಮಾಡಿವೆ. ಆದರೆ ತರಗತಿಗಳು ಸರಿಯಾಗಿ ನಡೆಯದೇ ವಿದ್ಯಾರ್ಥಿಗಳು ಹೇಗೆ ಪರೀಕ್ಷೆ ಬರೆಯಬೇಕು ಎಂದು ಪ್ರತಿಭಟನಾಕಾರರು ಪ್ರಶ್ನಿಸಿದ್ದಾರೆ.
ಆರೋಪಿಗಳಿಗೆ ನಕಲಿ ಶ್ಯೂರಿಟಿ: 9 ಮಂದಿ ಸೆರೆ
ಅಪರಾಧ ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ಪಡೆಯಲು ನ್ಯಾಯಾಲಯಗಳಿಗೆ ನಕಲಿ ದಾಖಲಿ ಸೃಷ್ಟಿಸಿ ಶ್ಯೂರಿಟಿ (ಭದ್ರತಾ ಠೇವಣಿದಾರ) ನೀಡುತ್ತಿದ್ದ ಓರ್ವ ಮಹಿಳೆ ಸೇರಿದಂತೆ 9 ಮಂದಿಯನ್ನು ಸಿಸಿಬಿ ಪೊಲೀಸರು ಸೆರೆ ಹಿಡಿದಿದ್ದಾರೆ. ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ತಾಯಮ್ಮ ಕ್ಯಾಂಪ್‌ನ ವೀರೇಶ್‌, ದೇವದುರ್ಗ ತಾಲೂಕಿನ ನಗೋಳಿ ಗ್ರಾಮದ ಅಮರೇಶ್‌, ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಕೆಸರಹಟ್ಟಿಯ ಉಮೇಶ್ ಕುಮಾರ್‌, ಕೊಪ್ಪಳ ತಾಲೂಕಿನ ಕುಣಿಕೇರಿ ತಾಂಡದ ಸಂತೋಷ್‌, ಮಾದವಾರದ ಪ್ರಕಾಶ್‌, ಮೈಸೂರು ಜಿಲ್ಲೆ ನಂಜನೂಡು ತಾಲೂಕಿನ ಬಿದರಗೋಡು ಉಮೇಶ್‌, ಕೋಲಾರ ಜಿಲ್ಲೆ ಶ್ರೀನಿವಾಸಪುರದ ನಾಗರಾಜ್‌, ಗುಂಟುಪಲ್ಲಿಯ ಆರ್‌.ಮಂಜುನಾಥ್‌, ಆರ್‌,ಟಿ.ನಗರ ಸಮೀಪ ಚಾಮುಂಡಿನಗರದ ತಬಸಂ ಬಂಧಿತರು. ಆರೋಪಿಗಳಿಂದ 35 ನಕಲಿ ಆಧಾರ್ ಕಾರ್ಡ್‌ಗಳು ಹಾಗೂ ಸ್ವತ್ತಿನ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ.
ಪಶ್ಚಕಂಥಿ ಮಠದ ಉತ್ತರಾಧಿಕಾರಿಗೆ ಪಟ್ಟಾಧಿಕಾರ
ಕುಷ್ಟಗಿ ತಾಲೂಕಿನ ನಿಡಶೇಸಿ ಗ್ರಾಮದ ಪಶ್ಚಕಂಥಿ ಹಿರೇಮಠ, ಕುಷ್ಟಗಿ, ಗೆಜ್ಜೆಬಾವಿ, ಜಲಕಮಲದಿನ್ನಿ ಗುಡದೂರ ಮಠಗಳ ಸ್ಥಿರ ಹಾಗೂ ಚರ ಮಠಗಳ ನೂತನ ಉತ್ತರಾಧಿಕಾರಿಯ ಪಟ್ಟಾಧಿಕಾರ ಮಹೋತ್ಸವ ಕಾರ್ಯಕ್ರಮವು ಸಡಗರ ಹಾಗೂ ಸಂಭ್ರಮದೊಂದಿಗೆ ನೆರವೇರಿತು. ಪಟ್ಟಾಧಿಕಾರ ಮಹೋತ್ಸವ ಅಂಗವಾಗಿ ನಿಡಶೇಸಿ ಗ್ರಾಮದಲ್ಲಿ ಬ್ರಾಹ್ಮೀ ಮುಹೂರ್ತದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ದಂಡಕ ಮಂಡಲ ದೀಕ್ಷೆ, ಉಪದೇಶಾಮೃತ, ಮುದ್ರೆಯುಂಗುರ, ಕಿರೀಟ ಧಾರಣೆ ಇತರೆ ವಿಧಿ ವಿಧಾನಗಳೊಂದಿಗೆ ಅನೇಕ ಮಠಾಧೀಶರ ಸಾನ್ನಿಧ್ಯದಲ್ಲಿ ಮರುಳಸಿದ್ದ ಶಿವಾಚಾರ್ಯರು ವಿಶ್ವರಾಧ್ಯ ದೇವರಿಗೆ ಕರಿಬಸವ ಶಿವಾಚಾರ್ಯರು ಎಂಬ ನಾಮಕರಣದೊಂದಿಗೆ ಪಟ್ಟಾಧಿಕಾರದ ಕಾರ್ಯಕ್ರಮ ನಡೆಸಿಕೊಟ್ಟರು.
ಪಾಲಕರು ಮಕ್ಕಳಿಗೆ ಶಿಕ್ಷಣ ಕೊಡಿಸಲಿ
ದಲಿತ ಮತ್ತು ಬಡ ಮಕ್ಕಳು ಉನ್ನತ ಶಿಕ್ಷಣ ಪಡೆಯಲಿ ಎನ್ನುವ ಉದ್ದೇಶದಿಂದ ಸರ್ಕಾರ ದೂರದೃಷ್ಟಿಯಿಂದ ಗ್ರಾಮೀಣ ಭಾಗದಲ್ಲಿ ವಸತಿ ಶಾಲೆಗಳನ್ನು ಪ್ರಾರಂಭಿಸಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ವಿ.ಕೆ. ಬಡಿಗೇರ ಹೇಳಿದರು.ತಾಲೂಕಿನ ಯಡ್ಡೋಣಿ ಗ್ರಾಮದ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಆಯೋಜಿಸಲಾಗಿದ್ದ ಪಾಲಕರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಾಲಕರು ಪ್ರತಿಯೊಬ್ಬ ಮಕ್ಕಳಿಗೆ ಶಿಕ್ಷಣ ಕೊಡಿಸುವತ್ತ ಹೆಚ್ಚಿನ ಗಮನಹರಿಸಬೇಕು ಎಂದರು.ಮಕ್ಕಳನ್ನು ಶಾಲೆಯಲ್ಲಿ ಬಿಟ್ಟು ಹೋದರಷ್ಟೇ ಸಾಲದು. ಆಗಾಗ ಬಂದು ಅವರ ಕಲಿಕೆಯ ಪ್ರಗತಿ ಬಗ್ಗೆ ಚರ್ಚಿಸಬೇಕು. ಸಣ್ಣ ಪುಟ್ಟ ಕಾರಣಗಳಿಂದಾಗಿ ಪದೇಪದೇ ಊರಿಗೆ ಕರೆದುಕೊಂಡು ಹೋಗುವುದನ್ನು ಬಿಡಬೇಕು. ಮಕ್ಕಳ ಆರೋಗ್ಯ, ಸುರಕ್ಷತೆ...
ಬೀದಿಬದಿ ವ್ಯಾಪಾರಸ್ಥರ ಅಂಗಡಿ ತೆರವು
ಹೊಸ ಬಸ್‌ ನಿಲ್ದಾಣ ಸಮೀಪ ಬೀದಿಬದಿ ವ್ಯಾಪಾರಿಗಳ ಅಂಗಡಿಗಳನ್ನು ಪುರಸಭೆ ಅಧಿಕಾರಿಗಳು ತೆರವುಗೊಳಿಸಿ ಎಚ್ಚರಿಕೆ ನೀಡಿದ್ದಾರೆ. ಬಸ್‌ಸ್ಟ್ಯಾಂಡ್‌ ಮುಂಭಾಗ, ಬುದಗುಂಪಾ, ನವಲಿ ರಸ್ತೆಯ ಅಕ್ಕಪಕ್ಕ ಬೀದಿಬದಿ ವ್ಯಾಪಾರಿಗಳಿಂದ ಸಾರ್ವಜನಿಕರು, ವಾಹನ ಸವಾರರಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಸುರೇಶ್ ಶೆಟ್ಟರ್, ಪಿಐ ಸಿದ್ದರಾಮಯ್ಯ ಜಂಟಿಯಾಗಿ ಕೆಲ ಅಂಗಡಿ ಮುಗ್ಗಟ್ಟುಗಳನ್ನು ತೆರವುಗೊಳಿಸಿದರು.
  • < previous
  • 1
  • ...
  • 436
  • 437
  • 438
  • 439
  • 440
  • 441
  • 442
  • 443
  • 444
  • ...
  • 458
  • next >
Top Stories
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved