• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಂದ್ರಯಾನ ಯಶಸ್ಸಿನ ನಂತರ ಪ್ರಪಂಚವೇ ಭಾರತದತ್ತ ತಿರುಗಿ ನೋಡುತ್ತಿದೆ-ದಾರುಕೇಶ
ಚಂದ್ರಯಾನ ಯಶಸ್ಸಿನ ನಂತರ ಪ್ರಪಂಚವೇ ಭಾರತದತ್ತ ತಿರುಗಿ ನೋಡುತ್ತಿದೆ ಎಂದು ಚಂದ್ರಯಾನ -2 ಉಡಾವಣೆ ಯಶಸ್ವಿಗೊಳಿಸಿದ ಇಸ್ರೋ ತಂಡದ ಪ್ರಮುಖ ಸದಸ್ಯ, ವಿಜ್ಞಾನಿ ಡಾ.ಬಿ.ಎಚ್.ಎಂ. ದಾರುಕೇಶ ಹೇಳಿದರು. ಕಲಿಕಾ ವಿಷಯವಾಗಿ ವಿಜ್ಞಾನದ ಮಹತ್ವ ಅಪಾರ. ಜಗತ್ತಿನಲ್ಲಿನ ಎಲ್ಲ ಹುದ್ದೆಗಳನ್ನು ವಿದ್ಯಾರ್ಥಿಗಳು ಪಟ್ಟಿಮಾಡಿ, ಆ ವಿಷಯದ ಬಗ್ಗೆ ಒಂದು ಪುಟ ಟಿಪ್ಪಣಿ ಮಾಡಿ, ನಂತರ ಸಾಧನೆ ಮಾಡಿ, ಯಶಸ್ಸು ನಿಮ್ಮನ್ನು ಹಿಂಬಾಲಿಸುತ್ತದೆ. ವಿಜ್ಞಾನ ಇಂದು ತುಂಬ ಮುಂದುವರಿದಿದೆ. ಚಂದ್ರಯಾನ ಯಶಸ್ಸಿನ ನಂತರ ಪ್ರಪಂಚವೇ ಭಾರತದತ್ತ ತಿರುಗಿ ನೋಡುತ್ತಿದೆ. ಭೂಮಿ ನಮಗೆ ತೊಟ್ಟಿಲು ಇದ್ದಂತೆ. ಬದುಕ ಬೇಕಾದರೆ ಕೆಳಗಿಳಿಯಲೇಬೇಕು. ಭವಿಷ್ಯದಲ್ಲಿ ಮಂಗಳಗ್ರಹ, ಚಂದ್ರನಲ್ಲಿ ಮಾನವನ ವಾಸ್ತವ್ಯದ ಅನಿವಾರ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ನೀರಿಲ್ಲದೇ ಒಣಗುತ್ತಿರುವ ರಸ್ತೆ ಬದಿ ಸಸಿ
ಗಿಡ ಬೆಳೆಸಿ, ಪರಿಸರ ಉಳಿಸಿ ಎಂಬ ಘೋಷಣೆಯು ಘೋಷಣೆಯಾಗಿಯೇ ಉಳಿದಿದೆ. ಲಕ್ಷಾಂತರ ರುಪಾಯಿ ಖರ್ಚು ಮಾಡಿ ಸಸಿಗಳನ್ನು ನೆಟ್ಟು, ಅವುಗಳಿಗೆ ನೀರು ಹಾಕದ ಸಾಮಾಜಿಕ ಅರಣ್ಯ ವಲಯದ ಅಧಿಕಾರಿಗಳ ವಿರುದ್ಧ ಪರಿಸರ ಪ್ರೇಮಿಗಳಿಂದ ಆಕ್ರೋಶ ವ್ಯಕ್ತವಾಗಿದೆ. ತಾಲೂಕಿನ ಕೆಲವೆಡೆ ರಸ್ತೆಯ ಪಕ್ಕದಲ್ಲಿ ಕಳೆದ ಒಂದು ತಿಂಗಳ ಹಿಂದಷ್ಟೇ ಸಾವಿರಾರು ಸಸಿಗಳನ್ನು ಸಾಮಾಜಿಕ ಅರಣ್ಯ ವಲಯದಿಂದ ನೆಟ್ಟು ಕೈ ತೊಳೆದುಕೊಂಡಿದೆ. ಅವುಗಳ ರಕ್ಷಣೆಗೆ ಬರುತ್ತಿಲ್ಲ. ನೆಟ್ಟಿರುವ ಗಿಡಗಳು ಒಣಗುತ್ತಿವೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಕಾಲಕಾಲಕ್ಕೆ ನೀರು ಹಾಕಿ ಸಸಿಗಳ ಪಾಲನೆ ಪೋಷಣೆ ಮಾಡಬೇಕು ಎನ್ನುವುದು ಸಾರ್ವಜನಿಕ ವಲಯದ ಅಂಬೋಣ.
ಜನನ, ಮರಣ ಪ್ರಮಾಣಪತ್ರ ಎಚ್ಚರಿಕೆಯಿಂದ ನೀಡಿ-ಜಿಪಂ ಸಿಇಒ
ವ್ಯಕ್ತಿಯ ಜನನ ಮತ್ತು ಮರಣ ಪ್ರಮಾಣಪತ್ರಗಳು ಸದ್ಯದ ಹಾಗೂ ಭವಿಷ್ಯದ ದಿನಗಳಲ್ಲಿ ಮಹತ್ವದ ದಾಖಲೆಗಳಾಗಿವೆ. ಜನನ ಪ್ರಮಾಣಪತ್ರ ಪಡೆಯುವುದು ಮಗುವಿನ ಮೊದಲ ಹಕ್ಕಾಗಿದೆ. ಮಗುವನ್ನು ಶಾಲೆಗೆ ಸೇರಿಸಲು, ಉದ್ಯೋಗಕ್ಕಾಗಿ, ಆಧಾರ್ ಕಾರ್ಡ್ ಪಡೆಯಲು, ವಿಮಾ ಪಾಲಿಸಿ ಪಡೆಯಲು, ಪಡಿತರ ಚೀಟಿ ಪಡೆಯಲು, ವಿವಾಹ ನೋಂದಣಿ ಮುಂತಾದ ಸಂದರ್ಭಗಳಲ್ಲಿ ಜನನ ಪ್ರಮಾಣ ಪತ್ರ ಕಡ್ಡಾಯವಾಗಿದೆ. ಅದರಂತೆ ವಿಮಾ ಹಣ ಪಡೆಯಲು, ಆಸ್ತಿಯ ಹಕ್ಕನ್ನು ನಿರ್ಧಾರ ಮಾಡಲು, ಪಿಂಚಣಿ ಹಕ್ಕು ಹೊಂದಲು, ಅನುಕಂಪದ ಆಧಾರದ ನೌಕರಿ, ಅಪಘಾತ ಪರಿಹಾರ ಪಡೆಯಲು, ಮುಂತಾದ ವಿಷಯಗಳಲ್ಲಿ ಮರಣ ಪ್ರಮಾಣದ ಅಗತ್ಯ ಹಾಗೂ ಕಡ್ಡಾಯವಿದೆ.
ಕಾಸ್ಮೊಸ್ ಪುಷ್ಪ ಕೃಷಿಯತ್ತ ವಾಲಿದ ರೈತ
ರೈತರು ಅಲ್ಪ ಬೆಳೆಯಾದ ಪುಷ್ಪ ಕೃಷಿಯತ್ತ ವಾಲುತ್ತಿದ್ದು, ಉತ್ತಮ ನಿರ್ವಹಣೆ ಮಾಡಿದರೆ ಕಡಿಮೆ ಅವಧಿಯಲ್ಲಿ ಅಧಿಕ ಲಾಭ ಪಡೆಯಲು ಸಾಧ್ಯ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ.ಸಮೀಪದ ಮಡಿಕೇರಿ, ಬೆನಕನಾಳ, ಯರಗೇರಾ ಸೇರಿದಂತೆ ನಾನಾ ಗ್ರಾಮಗಳಲ್ಲಿ ರೈತರು ಪುಷ್ಪ ಕೃಷಿಯತ್ತ ವಾಲುತ್ತಿದ್ದಾರೆ. ಸದ್ಯ ಮಡಿಕೇರಿ ಗ್ರಾಮದ ರೈತ ಈಶಪ್ಪ ಈಳಗೇರ ಕಾಸ್ಮೊಸ್ ಹೂ ಬೆಳೆದು ಉತ್ತಮ ಇಳುವರಿ ಪಡೆದು ನೆಮ್ಮದಿಯ ಬದುಕು ನಡೆಸುತ್ತಿದ್ದಾರೆ. ಸಾವಯವ ವಿಧಾನದಲ್ಲಿ ತಮ್ಮ ಒಂದು ಎಕರೆ ನೀರಾವರಿ ಜಮೀನಿನಲ್ಲಿ ಕಾಸ್ಮೊಸ್ ಬೆಳೆ ಬೆಳೆದು ಉತ್ಕೃಷ್ಟ ಮಟ್ಟದ ಹೂಗಳನ್ನು ಬಿಡುತ್ತಿದ್ದು, ಕಡಿಮೆ ಖರ್ಚಿನಲ್ಲಿ ಬೆಳೆದ ಕಾಸ್ಮೊಸ್ ಹೂವಿನ ಬೆಳೆಯಲ್ಲಿ ಲಾಭದ ನಿರೀಕ್ಷೆಯಲ್ಲಿದ್ದಾರೆ.
ಗ್ರಾಮೀಣ ಬೀಟ್ ಕಟ್ಟುನಿಟ್ಟಾಗಿ ನಡೆಯಲಿ-ಎಡಿಜಿಪಿ ಅಲೋಕಕುಮಾರ
ಗ್ರಾಮೀಣ ಪ್ರದೇಶದಲ್ಲಿಯೂ ಪೊಲೀಸ್ ಬೀಟ್ ಇದ್ದೇ ಇರುತ್ತದೆ. ಆದರೆ, ಅದು ಕಟ್ಟುನಿಟ್ಟಾಗಿ ಆಗಬೇಕು. ಹೀಗೆ ಬೀಟ್‌ನಲ್ಲಿರುವವರಿಗೆ ಜವಾಬ್ದಾರಿ ನೀಡಬೇಕು. ಆ ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲವಾದರೆ ಅವರ ವಿರುದ್ಧವೂ ಕ್ರಮವಾಗಬೇಕು. ಮಟ್ಕಾ ದಂಧೆ, ಅಕ್ರಮ ಮದ್ಯ ಮಾರಾಟ, ವೇಶ್ಯಾವಾಟಿಕೆ ಸೇರಿದಂತೆ ಮೊದಲಾದವುಗಳ ಮಾಹಿತಿ ಸಂಗ್ರಹಿಸಿ, ಅದರ ವಿರುದ್ಧ ಕ್ರಮವಾಗುವಂತೆ ಬೀಟ್‌ನಲ್ಲಿ ಇದ್ದವರು ಮಾಡಬೇಕು. ಇನ್ನು ಗಾಂಜಾ ಮಾರಾಟ, ಅಕ್ರಮ ಮದ್ಯ ಮಾರಾಟ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆ ನಿಯಂತ್ರಿಸಲು ಕೇವಲ ಕೇಸ್ ಹಾಕಿದರೆ ಸಾಲದು, ಅಷ್ಟು ಕೇಸ್ ಹಾಕಿದ್ದೇವೆ, ಇಷ್ಟು ಕೇಸ್ ಹಾಕಿದ್ದೇವೆ ಎನ್ನುವುದಷ್ಟೇ ಸಾಧನೆಯಲ್ಲ. ಅದನ್ನು ನಿಯಂತ್ರಣ ಮಾಡುವ ದಿಸೆಯಲ್ಲಿ ಕ್ರಮವಾಗಬೇಕು ಎಂದರು.
ಕುಕನೂರಿಗೆ ಇಂದಿರಾ ಕ್ಯಾಂಟೀನ್ ಮಂಜೂರು-₹1.54 ಕೋಟಿ ವೆಚ್ಚದಲ್ಲಿ ನಿರ್ಮಾಣಕ್ಕೆ ಸರ್ಕಾರ ಆದೇಶ
ಬಡ ವರ್ಗದವರಿಗೆ, ಹಸಿದವರಿಗೆ ಕಡಿಮೆ ವೆಚ್ಚದಲ್ಲಿ ಊಟ ಸಿಗಲಿ ಎಂದು ಸರ್ಕಾರ ಇಂದಿರಾ ಕ್ಯಾಂಟೀನ್‌ಗಳನ್ನು ನಗರ, ಪಟ್ಟಣ ಕೇಂದ್ರಗಳಲ್ಲಿ ಈ ಹಿಂದೆ ಆರಂಭಿಸಿತ್ತು. ಇದರಿಂದ ಶ್ರಮಿಕ ವರ್ಗಕ್ಕೆ ಹಾಗೂ ಬಡ ವರ್ಗಕ್ಕೆ, ಹಸಿದವರಿಗೆ ಕಡಿಮೆ ವೆಚ್ಚದಲ್ಲಿ ಆಹಾರ ಸಿಗುತ್ತಿತ್ತು. ಇನ್ನು ಹಲವೆಡೆ ಕ್ಯಾಂಟೀನ್ ಬೇಡಿಕೆ ಹೆಚ್ಚಿತ್ತು. ಅಂತಹ ಅವಶ್ಯಕ ಕೇಂದ್ರಗಳಲ್ಲಿ ಕುಕನೂರು ಪಟ್ಟಣಕ್ಕೂ ಕ್ಯಾಂಟೀನ್ ಅವಶ್ಯಕತೆ ಇತ್ತು. ನಿತ್ಯ ಪಟ್ಟಣಕ್ಕೆ ವ್ಯಾಪಾರ, ವಹಿವಾಟು, ಶಾಲಾ, ಕಾಲೇಜು, ಎಪಿಎಂಸಿ ಮಾರುಕಟ್ಟೆ, ಕಚೇರಿಗಳಿಗೆ ಬರುವ ಜನರು, ಕಾರ್ಮಿಕರು ಹೀಗೆ ಜನಜಂಗುಳಿಯಿಂದ ಕುಕನೂರು ತುಂಬಿರುತ್ತದೆ. ಹೊಟೆಲ್ ಗಳಲ್ಲಿ ದುಬಾರಿ ಬೆಲೆಗೆ ಆಹಾರ ಸೇವಿಸುವ ಅನಿವಾರ್ಯತೆ ಇತ್ತು. ಈ ಸಮಸ್ಯೆ ನೀಗಿದಂತಾಗಿದೆ.
ಒಣಮೀಸಲಾತಿಗಾಗಿ ಒಂದಾಗೋಣ-ಬಸವರಾಜ ದಡೆಸೂಗುರ
ಒಳ ಮೀಸಲಾತಿ ಮೂಲಕ ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸುವ ಒಳಮೀಸಲಾತಿ ಹೋರಾಟವನ್ನು ನಿರ್ಲಕ್ಷ್ಯ ಮಾಡಲಾಗುತ್ತಿದ್ದು, ಇದರ ಜಾರಿಗಾಗಿ ಒಂದಾಗಿ ಹೋರಾಟ ಮಾಡೋಣ ಎಂದು ಮಾಜಿ ಶಾಸಕ ಬಸವರಾಜ ದಢೇಸ್ಗೂರು ಕರೆ ನೀಡಿದ್ದಾರೆ. ನಗರದ ಖಾಸಗಿ ಹೋಟೆಟ್‌ನಲ್ಲಿ ಬುಧವಾರ ನಡೆದ ಮಾದಿಗ ಮುನ್ನಡೆ ಸಮಾವೇಶ ಪೂರ್ವಬಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮಾದಿಗ ಸಮುದಾಯ ಪರಿಶಿಷ್ಟ ಜಾತಿಯಲ್ಲಿ ಬಹುಪಾಲು ಜನಸಂಖ್ಯೆ ಹೊಂದಿದ್ದು, ಜನಸಂಖ್ಯಾ ಅನುಗುಣವಾಗಿ ಮೂರು ದಶಕಗಳ ಮೀಸಲಾತಿ ವರ್ಗೀಕರಣ ಹೋರಾಟವನ್ನು ನಿರ್ಲಕ್ಷ ಮಾಡಲಾಗುತ್ತಿದೆ. ಈ ಕಾರಣಕ್ಕಾಗಿಯೇ ಮಾದಿಗ ಮುನ್ನಡೆ ಸಮಾವೇಶ ನಡೆಸುವ ಕುರಿತು ಪೂರ್ವಭಾವಿ ಸಭೆಯನ್ನು ಆಯೋಜನೆ ಮಾಡಲಾಗಿದೆ ಎಂದರು.
ಹಳ್ಳಿಯಲ್ಲಿ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಿ
ಸಮರ್ಪಕವಾಗಿ ಮಳೆ ಬಾರದೇ ಇರುವುದರಿಂದ ಮುಂಬರುವ ದಿನಗಳಲ್ಲಿ ಹಳ್ಳಿಗಳಲ್ಲಿ ಕುಡಿಯುವ ನೀರು, ದನಕರುಗಳಿಗೆ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ನೋಡಲ್ ಅಧಿಕಾರಿಗಳು, ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕಿ ಕೆ.ವಿ. ಕಾವ್ಯರಾಣಿ ಹೇಳಿದರು. ಪಟ್ಟಣದ ವಿಶೇಷ ಎಪಿಎಂಸಿಯ ಸಭಾಂಗಣದಲ್ಲಿ ಬುಧವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿಗಿಂತ ಈ ಬಾರಿ ಕಡಿಮೆ ಮಳೆಯಾಗಿದೆ. ಸಕಾಲದಲ್ಲಿ ಸರಿಯಾದ ಮಳೆಯಾಗಿದ್ದರೆ ನೀರಿನ ಸಮಸ್ಯೆಯಾಗುತ್ತಿರಲಿಲ್ಲ. ಸರ್ಕಾರ ಈಗಾಗಲೇ ಬರ ಪೀಡಿತ ತಾಲೂಕವೆಂದು ಘೋಷಿಸಿದೆ. ಅದಕ್ಕಾಗಿ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ನವಲಿಗೆ ಆಗಮಿಸಿದ ಕನ್ನಡಜ್ಯೋತಿ ರಥಯಾತ್ರೆ
ಕರ್ನಾಟಕ ಸಂಭ್ರಮ 50 ಕನ್ನಡ ಜ್ಯೋತಿ ರಥಯಾತ್ರೆಯು ನವಲಿ ಗ್ರಾಮದ ಬುದ್ಧ ಸರ್ಕಲ್ ಹತ್ತಿರ ಆಗಮಿಸಿದ ಹಿನ್ನೆಲೆಯಲ್ಲಿ ತಾಪಂ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ರಥಯಾತ್ರೆಯಲ್ಲಿರುವ ನಾಡದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಈ ಮೂಲಕ ಕನ್ನಡಜ್ಯೋತಿ ರಥಯಾತ್ರೆಯನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು.ನಾಡು, ನುಡಿ, ಸಾಹಿತ್ಯ ಪರಂಪರೆ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಕರ್ನಾಟಕ ಸಂಭ್ರಮ-50ರ ಹೆಸರಾಯಿತು ಕರ್ನಾಟಕ ಉಸಿಗಾಗಲಿ ಕನ್ನಡ ಎಂಬ ಧ್ಯೇಯವಾಕ್ಯದೊಂದಿಗೆ ವರ್ಷವಿಡೀ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಾಂಸ್ಕೃತಿಕ ಹಾಗೂ ನುಡಿಗೆ ಸಂಬಂಧಿಸಿದಂತೆ ಮತ್ತು ಯುವ ಜನತೆಯಲ್ಲಿ ಕರ್ನಾಟಕದ ಅರಿವು ಮೂಡಿಸುವ ಉದ್ದೇಶ ಹೊಂದಿದೆ ಎಂದರು.
ಭಾರತದಲ್ಲಿ ಮಹಿಳಾ ಶಕ್ತಿಗಿದೆ ಮನ್ನಣೆಉಪನ್ಯಾಸಕಿ ಡಾ.ವೀಣಾ ಹೇಳಿಕೆ| ಜಾಗೃತ ಮಹಿಳಾ ಸಮಾವೇಶ
ಕನ್ನಡಪ್ರಭ ವಾರ್ತೆ ಕೊಪ್ಪಳಭಾರತದಲ್ಲಿ ಮಹಿಳಾ ಶಕ್ತಿಗಿದೆ ಮನ್ನಣೆ ಎಂದು ಉಪನ್ಯಾಸಕಿ ಡಾ.ವೀಣಾ ಹೇಳಿದರು.ನಗರದ ಶಿವಶಾಂತವೀರ ಮಂಗಲ ಭವನದಲ್ಲಿ ಜರುಗಿದ ಶಕ್ತಿ ಸಂಚಯ ಜಾಗೃತ ಮಹಿಳಾ ಸಮಾವೇಶವನ್ನೂದ್ದೇಶಿಸಿ ಮಾತನಾಡಿದ ಅವರು, ಪುರಾಣದಿಂದ ಹಿಡಿದು ಇಂದಿನವರೆಗೂ ಭಾರತದಲ್ಲಿ ಮಹಿಳೆಯರು ತಮ್ಮದೇ ಆದ ಸಾಧನೆ ಮಾಡುತ್ತಾ ಬಂದಿದ್ದಾರೆ. ಮನೆಯಲ್ಲೂ ಅವರು ಮಕ್ಕಳ ಸಂಸ್ಕಾರ ಮತ್ತು ಕುಟುಂಬ ನಿರ್ವಹಣೆಯ ಜವಾಬ್ದಾರಿ ಹೊರಬೇಕಾಗಿದೆ.
  • < previous
  • 1
  • ...
  • 438
  • 439
  • 440
  • 441
  • 442
  • 443
  • 444
  • 445
  • 446
  • ...
  • 458
  • next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved