• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಸಬಹಂಚಿನಾಳದಲ್ಲಿ ಮಾರುತೇಶ್ವರ ಕಾರ್ತಿಕ
ಕನ್ನಡಪ್ರಭ ವಾರ್ತೆ ಕುಕನೂರುತಾಲೂಕಿನ ಮಸಬಹಂಚಿನಾಳ ಗ್ರಾಮದ ಮಾರುತೇಶ್ವರ ಕಾರ್ತಿಕ ಮಹೋತ್ಸವ ಸೋಮವಾರ ರಾತ್ರಿ ಲಕ್ಷಕ್ಕೂ ಹೆಚ್ಚು ಭಕ್ತಾದಿಗಳಿಂದ ಸಂಪನ್ನವಾಯಿತು.ಈ ಭಾಗದ ಆರಾಧ್ಯ ದೈವ ಆಂಜನೇಯ ಸ್ವಾಮಿಗೆ ಭಕ್ತರು ಮಧ್ಯಾಹ್ನದಿಂದ ತಂಡೋಪತಂಡವಾಗಿ ಹರಿದು ಬಂದರು. ಕೆಲವರು ಪಾದ ನಡಿಗೆಯಿಂದ ಬಂದರು. ಬೆಳಗ್ಗೆಯಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಖಾದಿ ಗ್ರಾಮದ್ಯೋಗ ಕೇಂದ್ರ 3 ವರ್ಷದಿಂದ ಸ್ಥಗಿತ
ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದಲ್ಲಿರುವ ಖಾದಿ ಗ್ರಾಮದ್ಯೋಗ ಕೇಂದ್ರ ಸ್ಥಗಿತಗೊಂಡು ಸುಮಾರು ಮೂರು ವರ್ಷ ಗತಿಸಿದರೂ ಅದನ್ನು ಪ್ರಾರಂಭ ಮಾಡುವ ಕೆಲಸವನ್ನು ಸಹಕಾರ ಇಲಾಖೆಯ ಅಧಿಕಾರಿಗಳು ಮಾಡುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಗ್ರಾಮದ ಖಾದಿ ಗ್ರಾಮದ್ಯೋಗ ಕೇಂದ್ರವು ಸುಮಾರು ವರ್ಷಗಳಿಂದ ಮುಚ್ಚಿದ ಬಾಗಿಲು ತೆರೆದೇ ಇಲ್ಲ. ಈ ಕುರಿತು ಗಮನ ಹರಿಸಬೇಕಾದ ಅಧಿಕಾರಿಗಳು ಸಹಿತ ನಮಗೇನೂ ಸಂಬಂಧವಿಲ್ಲ ಎಂಬಂತೆ ಜಾಣ ಕುರುಡತನ ಮೆರೆಯುತ್ತಿದ್ದಾರೆ. ಇದು ಸಹಕಾರಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷಕ್ಕೆ ಹಿಡಿದ ಕೈಗನ್ನಡಿಯಾಗಿದೆ.
ಸಿಂಗಟಾಲೂರು ಏತನೀರಾವರಿ ಯೋಜನೆ: 11 ವರ್ಷದಿಂದ ನೀರು ಬಳಕೆಯಾಗದೇ ಪೋಲು
1992ರಲ್ಲಿಯೇ ಸಿಂಗಟಾಲೂರು ಏತನೀರಾವರಿ ಯೋಜನೆಗೆ ಡಿಪಿಆರ್ ಸಿದ್ಧ ಮಾಡಲಾಯಿತು. ಆದರೆ, ಆಗ ಕಾರ್ಯಗತವಾಗಲಿಲ್ಲ. ನಂತರ ಹೇಗೋ ಆಗೊಮ್ಮೆ, ಈಗೊಮ್ಮೆ ಸರ್ಕಾರದ ಇಚ್ಛಾಶಕ್ತಿಯಿಂದ 30 ವರ್ಷಗಳ ಬಳಿಕ ಯೋಜನೆ ಪೂರ್ಣಗೊಂಡು 2012ರ ನವೆಂಬರ್‌ನಲ್ಲಿ ಲೋಕಾರ್ಪಣೆಗೊಂಡಿತು. ಬಲಭಾಗದಲ್ಲಿ ಸುಮಾರು 48 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಯಿತು. ಆದರೆ, ಎಡಭಾಗದಲ್ಲಿ ಮಾತ್ರ ನೀರಾವರಿ ಇವತ್ತಿಗೂ ಆಗುತ್ತಿಲ್ಲ. ಬಲಭಾಗದಲ್ಲಿ ಹೂವಿನಹಡಗಲಿ ವ್ಯಾಪ್ತಿಯಲ್ಲಿ ಅತ್ಯುತ್ತಮವಾಗಿ ನೀರಾವರಿಯಾಗಿದೆ. ರೈತರು ಖುಷಿಯಾಗಿದ್ದಾರೆ. ಆದರೆ, ಇದೇ ಯೋಜನೆಯ ಎಡಭಾಗದಲ್ಲಿ ಸುಮಾರು 2.20 ಲಕ್ಷ ಎಕರೆ ಪ್ರದೇಶಕ್ಕೆ ನೀರು ಪೂರೈಕೆ ಮಾಡುವ ಕಾರ್ಯ ಇನ್ನು ನಡೆದಿಲ್ಲ.
ಕಾರಟಗಿ-ಕನಕಗಿರಿ ತಾಲೂಕು ಅಭಿವೃದ್ಧಿಗೆ ಬದ್ಧ
ಕಾರಟಗಿ-ಕನಕಗಿರಿ ತಾಲೂಕು ಕೇಂದ್ರದಲ್ಲಿ ವಿಳಂಬವಾಗಿರುವ ಎಲ್ಲ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು. ಇಲ್ಲಿನ ಸರ್ಕಾರಿ ಪ್ರೌಢಶಾಲೆ ಆವರಣದ ಸಿದ್ದೇಶ್ವರ ರಂಗಮಂದಿರದಲ್ಲಿ ಜಾಗೃತ ಯುವಕ ಸಂಘ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶನಿವಾರ ರಾತ್ರಿ ಮಾತನಾಡಿದ ಅವರು, ಪಟ್ಟಣದಲ್ಲಿ ಸೂಕ್ತ ಜಾಗವನ್ನು ಹುಡುಕಿ ತಾಲೂಕು ಆಡಳಿತ ಭವನ, ಸಂಸ್ಕೃತಿ ಭವನ, ನೂರು ಹಾಸಿಗೆಗಳ ಆಸ್ಪತ್ರೆ ಹಾಗೂ ವಿವಿಧ ಕಾಮಗಾರಿಗಳನ್ನು ಪೂರೈಸುವ ಪ್ರಾಮಾಣಿಕವಾಗಿ ಈಡೇರಿಸುವದೇ ನನ್ನ ಗುರಿ. ಕಾರಟಗಿ ಪಟ್ಟಣ ವೇಗವಾಗಿ ಬೆಳಯುತ್ತಿದ್ದು, ವೇಗಕ್ಕೆ ತಕ್ಕಂತೆ ಅಭಿವೃದ್ಧಿಪಡಿಸಾಲುತ್ತದೆ ಎಂದರು.
2030ರೊಳಗೆ ಏಡ್ಸ್ ಸೋಂಕು ತೊಲಗಿಸಲು ಶಪಥ ಮಾಡೋಣ
ಎಚ್‌ಐವಿ ನಿಯಂತ್ರಣ, ಸೇವಾ ಸೌಲಭ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು, ಎಲ್ಲ ಇಲಾಖೆಗಳಿಂದ ಸಿಗುವ ಸಾಮಾಜಿಕ ಸೌಲಭ್ಯಗಳು ಸೋಂಕಿತ ಸಮುದಾಯಕ್ಕೆ ಲಭ್ಯವಾಗುವಂತೆ ಸಮಾಲೋಚನೆ ಮಾಡಿ ಸರ್ಕಾರದ ಸೇವೆಗಳಿಗೆ ಸಂಪರ್ಕ ಕಲ್ಪಿಸಲು ಅನುಕೂಲವಾಗುವಂತೆ ಪ್ರೇರೇಪಿಸುವುದು ಇಂದಿನ ಅಗತ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದೇವೇಂದ್ರ ಪಂಡಿತ ಹೇಳಿದರು.
ಡಯಾಲಿಸಿಸ್ ಕೇಂದ್ರ ಸ್ತಬ್ಧ, ರೋಗಿಗಳ ಪರದಾಟ
ಡಯಾಲಿಸಿಸ್ ಸಿಬ್ಬಂದಿ ಬಾಕಿ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಡಯಾಲಿಸಿಸ್ ಕೇಂದ್ರಗಳು ಸ್ತಬ್ಧವಾಗಿವೆ. ಇದರಿಂದ ರೋಗಿಗಳು ಪರಾಡುವಂತಾಗಿದೆ. ಜಿಲ್ಲಾಸ್ಪತ್ರೆಯಲ್ಲಿ 9 ಡಯಾಲಿಸಿಸ್ ಯಂತ್ರಗಳಿವೆ. ಇವುಗಳಲ್ಲಿ ನಾಲ್ಕು ಯಂತ್ರಗಳು ಮಾತ್ರ ಕಾರ್ಯ ನಿರ್ವಹಿಸುತ್ತಿವೆ. ಹೀಗಾಗಿ, ಇಲ್ಲಿ ಡಯಾಲಿಸಿಸ್‌ಗೆ ಬರುವ ರೋಗಿಗಳು ಪರದಾಡುತ್ತಿದ್ದಾರೆ. ಈಗ ಡಯಾಲಿಸಿಸ್ ಕೇಂದ್ರ ಬಂದ್‌ ಆಗಿರುವುದರಿಂದ ತೀವ್ರ ಸಮಸ್ಯೆಯಾಗಿದೆ. ರೋಗಿಗಳು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ.
ಜೆಜೆಎಂ ಯೋಜನೆಯಲ್ಲಿ ಭ್ರಷ್ಟಾಚಾರ: ಸಂಸದ ಕರಡಿ
ಕೇಂದ್ರದ ಮಹತ್ವಕಾಂಕ್ಷಿ ಯೋಜನೆ ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಸಮರ್ಪಕವಾಗಿಲ್ಲ. ರಾಜಕಾರಣಿಗಳೇ ಈ ಯೋಜನೆಯಲ್ಲಿ ಲೂಟಿ ಹೊಡೆದು, ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಸಂಸದ ಕರಡಿ ಸಂಗಣ್ಣ ಆರೋಪಿಸಿದ್ದಾರೆ.ಪಟ್ಟಣದಲ್ಲಿ ಶುಕ್ರವಾರ ಅಂಚೆ ಕಚೇರಿ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ನಮ್ಮಂಥ ರಾಜಕಾರಣಿಗಳು ಇದರಲ್ಲಿ ಶಾಮೀಲಾಗಿ ಈ ಯೋಜನೆಯನ್ನು ಹಾಳು ಮಾಡಿದ್ದಾರೆ. ಜಿಲ್ಲೆಯ ಯೋಜನೆಯಲ್ಲಿ ಪರಿಷ್ಕೃತ ಅಂದಾಜು ನಡೆದು ಹೊಸ ಡಿಪಿಆರ್ ಮಾಡಲಾಗಿದೆ. ಇದು ₹೧೨೩ ಕೋಟಿ ಯೋಜನೆ. ಸಂಸದರಿಂದ ಹಿಡಿದು ಎಲ್ಲರೂ ಲೂಟಿ ಮಾಡಿದ್ದಾರೆ. ಇರಲಿ, ನನ್ನನ್ನೂ ಸೇರಿ ಹೇಳುವೆ. ಈ ಯೋಜನೆ ಬಗ್ಗೆ ನಾನು ಬಹಿರಂಗವಾಗಿಯೇ ಹೇಳುವೆ. ನಾವೇನು ಹರಿಶ್ಚಂದ್ರರಲ್ಲ. ನ್ಯಾಯ, ಅನ್ಯಾಯ ನೋಡಬೇಕು. ಅನ್ಯಾಯದ ಹಣ ಗಳಿಸಿದವರು ನೆಮ್ಮದಿಯಿಂದ ನಿದ್ದೆ ಕೂಡ ಮಾಡಲ್ಲ. ದುಡಿದು ತಿನ್ನೋರು ನೆಮ್ಮದಿಯಿಂದ ನಿದ್ದೆ ಮಾಡ್ತಾರೆ. ಇದೆಲ್ಲ ಬಿಟ್ಟು ಜನರ ಸೇವೆ ಮಾಡಬೇಕೆಂದರು.
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಪ್ರಯತ್ನ
ಅತಿಥಿ ಉಪನ್ಯಾಸಕರ ಕಾಯಂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವ ದಿಸೆಯಲ್ಲಿ ಸರ್ಕಾರದಿಂದ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ‌ ತಂಗಡಗಿ ಹೇಳಿದ್ದಾರೆ. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಅನಿರ್ದಿಷ್ಟಾವಧಿ ಧರಣಿನಿರತ ಸ್ಥಳಕ್ಕೆ ಭೇಟಿ ನೀಡಿ, ಮನವಿ ಸ್ವೀಕರಿಸಿ ಮಾತನಾಡಿದ ಅವರು, ಸರ್ಕಾರಕ್ಕೆ ಅತಿಥಿ ಉಪನ್ಯಾಸಕರ ಕುರಿತು ಅಪಾರ ಗೌರವವಿದೆ ಎಂದರು. ಹಿಂದಿನ ಸರ್ಕಾರದಲ್ಲೂ ಅತಿಥಿ ಉಪನ್ಯಾಸಕರು ಹೋರಾಟ ನಡೆಸಿದ್ದು, ಗೌರವಧನ ಹೆಚ್ಚಳವಾಗಿರುವುದು ಗೊತ್ತಿದೆ. ಈಗ ಸೇವಾ ಕಾಯಂ ಬೇಡಿಕೆಯ ಆಗ್ರಹವನ್ನು ಸರ್ಕಾರ ಗಮನಿಸುತ್ತಿದೆ. ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗುತ್ತಿದೆ. ಸರ್ಕಾರ ನಿಮ್ಮ ಪರವಾಗಿದ್ದು ಧರಣಿ ಹಿಂಪಡೆಯುವಂತೆ ಮನವಿ ಮಾಡಿದರು.
ಪದವೀಧರರ ವಿದ್ಯಾಭ್ಯಾಸಕ್ಕೆ ಅನುಕೂಲವಾದ ನರೇಗಾ ಯೋಜನೆ
ಗ್ರಾಮೀಣ ಪ್ರದೇಶದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯು ಬಡವರಿಗೆ ಆರ್ಥಿಕ ಸ್ವಾವಲಂಬನೆ ನೀಡುವ ಜೊತೆಗೆ ಪದವೀಧರರ ಶೈಕ್ಷಣಿಕ ಅಭ್ಯಾಸಕ್ಕೂ ಅನುಕೂಲವಾಗಿದೆ.ತಾಲೂಕಿನ ತಳುವಗೇರಿ ಗ್ರಾಪಂ ವ್ಯಾಪ್ತಿಯ ನಿಡಶೇಸಿ ಗ್ರಾಮದ ಪದವೀಧರೆಯಾದ ಚೈತ್ರಾ ಬಸಪ್ಪ ಕಂದಕೂರ ಎಂಬ ಯುವತಿಯು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ನಡೆಯುವ ಕಾಮಗಾರಿಯಲ್ಲಿ ಕೆಲಸ ಮಾಡುವ ಮೂಲಕ ಕುಟುಂಬದ ಆರ್ಥಿಕ ಸ್ವಾಲಂಬನೆ ಹಾಗೂ ತನ್ನ ಪದವಿಯ ವ್ಯಾಸಂಗಕ್ಕೂ ಅನುಕೂಲವಾಗಿದೆ. ಪಿಯುಸಿ ಮತ್ತು ಪದವಿ ವ್ಯಾಸಂಗ ಮಾಡಿ ಮನೆಯಲ್ಲಿ ಕುಳಿತುಕೊಳ್ಳುವ ನಿರುದ್ಯೋಗಿ ವಿದ್ಯಾವಂತರಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆ ಬಹಳಷ್ಟು ಅನುಕೂಲವಾಗಿದೆ ಎನ್ನಬಹುದು.
ಜೆಜೆಎಂ ಅನುಷ್ಠಾನ ಬಗ್ಗೆ ನಿರ್ಲಕ್ಷಿಸಿದವರ ವಿರುದ್ಧ ಎಫ್‌ಐಆರ್
ಜೆಜೆಎಂ ಯೋಜನೆಯ ಅನುಷ್ಠಾನದ ಬಗ್ಗೆ ನಿರ್ಲಕ್ಷ್ಯ ವಹಿಸಿರುವ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತುಗೊಳಿಸಿದರೆ ಸಾಲದು. ಅಂತಹವರ ವಿರುದ್ಧ ಎಫ್‌ಐಆರ್ ದಾಖಲಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿಯ ಅಧ್ಯಕ್ಷರೂ ಆಗಿರುವ ಸಂಸದ ಸಂಗಣ್ಣ ಕರಡಿ ಹೇಳಿದರು. ಜಲಜೀವನ ಮಿಷನ್ ಕಾಮಗಾರಿಗಳನ್ನು ದೂರುಗಳು ಬಾರದ ಹಾಗೆ ನಡೆಸಬೇಕು. ಪ್ರತಿ ಮನೆಮನೆಗೂ ನೀರು ತಲುಪಬೇಕು ಅನ್ನುವ ಬಹುಮುಖ್ಯ ಆಶಯದ ಜೆಜೆಎಂ ಯೋಜನೆಯ ಅನುಷ್ಠಾನದ ಬಗ್ಗೆ ಗಮನ ಹರಿಸಬೇಕಾದ ಅಧಿಕಾರಿಗಳೇ ಕಾಮಗಾರಿ ಕಳಪೆಯಾಗಿದೆ ಎಂದು ಹೇಳುವುದು ಎಷ್ಟು ಸರಿ? ಎಂದು ಪ್ರಶ್ನಿಸಿದ ಅವರು, ಕೆಲಸದ ಬಗ್ಗೆ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳಿಗೆ ತಕ್ಕಪಾಠ ಕಲಿಸಬೇಕು. ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತುಗೊಳಿಸಿದರೆ ಸಾಲದು. ಅಂತಹವರ ಮೇಲೆ ಯಾವುದೇ ಮುಲಾಜಿಲ್ಲದೆ ಎಫ್‌ಐಆರ್ ದಾಖಲಿಸಲು ಕ್ರಮ ವಹಿಸಬೇಕು ಎಂದರು.
  • < previous
  • 1
  • ...
  • 439
  • 440
  • 441
  • 442
  • 443
  • 444
  • 445
  • 446
  • 447
  • ...
  • 458
  • next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved