• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೆಜೆಎಂ ಅನುಷ್ಠಾನ ಬಗ್ಗೆ ನಿರ್ಲಕ್ಷಿಸಿದವರ ವಿರುದ್ಧ ಎಫ್‌ಐಆರ್
ಜೆಜೆಎಂ ಯೋಜನೆಯ ಅನುಷ್ಠಾನದ ಬಗ್ಗೆ ನಿರ್ಲಕ್ಷ್ಯ ವಹಿಸಿರುವ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತುಗೊಳಿಸಿದರೆ ಸಾಲದು. ಅಂತಹವರ ವಿರುದ್ಧ ಎಫ್‌ಐಆರ್ ದಾಖಲಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿಯ ಅಧ್ಯಕ್ಷರೂ ಆಗಿರುವ ಸಂಸದ ಸಂಗಣ್ಣ ಕರಡಿ ಹೇಳಿದರು. ಜಲಜೀವನ ಮಿಷನ್ ಕಾಮಗಾರಿಗಳನ್ನು ದೂರುಗಳು ಬಾರದ ಹಾಗೆ ನಡೆಸಬೇಕು. ಪ್ರತಿ ಮನೆಮನೆಗೂ ನೀರು ತಲುಪಬೇಕು ಅನ್ನುವ ಬಹುಮುಖ್ಯ ಆಶಯದ ಜೆಜೆಎಂ ಯೋಜನೆಯ ಅನುಷ್ಠಾನದ ಬಗ್ಗೆ ಗಮನ ಹರಿಸಬೇಕಾದ ಅಧಿಕಾರಿಗಳೇ ಕಾಮಗಾರಿ ಕಳಪೆಯಾಗಿದೆ ಎಂದು ಹೇಳುವುದು ಎಷ್ಟು ಸರಿ? ಎಂದು ಪ್ರಶ್ನಿಸಿದ ಅವರು, ಕೆಲಸದ ಬಗ್ಗೆ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳಿಗೆ ತಕ್ಕಪಾಠ ಕಲಿಸಬೇಕು. ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತುಗೊಳಿಸಿದರೆ ಸಾಲದು. ಅಂತಹವರ ಮೇಲೆ ಯಾವುದೇ ಮುಲಾಜಿಲ್ಲದೆ ಎಫ್‌ಐಆರ್ ದಾಖಲಿಸಲು ಕ್ರಮ ವಹಿಸಬೇಕು ಎಂದರು.
ಜೆಜೆಎಂ ಅನುಷ್ಠಾನ ಬಗ್ಗೆ ನಿರ್ಲಕ್ಷಿಸಿದವರ ವಿರುದ್ಧ ಎಫ್‌ಐಆರ್
ಜೆಜೆಎಂ ಯೋಜನೆಯ ಅನುಷ್ಠಾನದ ಬಗ್ಗೆ ನಿರ್ಲಕ್ಷ್ಯ ವಹಿಸಿರುವ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತುಗೊಳಿಸಿದರೆ ಸಾಲದು. ಅಂತಹವರ ವಿರುದ್ಧ ಎಫ್‌ಐಆರ್ ದಾಖಲಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿಯ ಅಧ್ಯಕ್ಷರೂ ಆಗಿರುವ ಸಂಸದ ಸಂಗಣ್ಣ ಕರಡಿ ಹೇಳಿದರು. ಜಲಜೀವನ ಮಿಷನ್ ಕಾಮಗಾರಿಗಳನ್ನು ದೂರುಗಳು ಬಾರದ ಹಾಗೆ ನಡೆಸಬೇಕು. ಪ್ರತಿ ಮನೆಮನೆಗೂ ನೀರು ತಲುಪಬೇಕು ಅನ್ನುವ ಬಹುಮುಖ್ಯ ಆಶಯದ ಜೆಜೆಎಂ ಯೋಜನೆಯ ಅನುಷ್ಠಾನದ ಬಗ್ಗೆ ಗಮನ ಹರಿಸಬೇಕಾದ ಅಧಿಕಾರಿಗಳೇ ಕಾಮಗಾರಿ ಕಳಪೆಯಾಗಿದೆ ಎಂದು ಹೇಳುವುದು ಎಷ್ಟು ಸರಿ? ಎಂದು ಪ್ರಶ್ನಿಸಿದ ಅವರು, ಕೆಲಸದ ಬಗ್ಗೆ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳಿಗೆ ತಕ್ಕಪಾಠ ಕಲಿಸಬೇಕು. ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತುಗೊಳಿಸಿದರೆ ಸಾಲದು. ಅಂತಹವರ ಮೇಲೆ ಯಾವುದೇ ಮುಲಾಜಿಲ್ಲದೆ ಎಫ್‌ಐಆರ್ ದಾಖಲಿಸಲು ಕ್ರಮ ವಹಿಸಬೇಕು ಎಂದರು.
ತಳಕಲ್ಲಿನಲ್ಲಿ ಅನ್ನದಾನೀಶ್ವರ ಶಾಖಾಮಠ ಸ್ಥಾಪನೆ
ತಳಕಲ್ಲ ಗ್ರಾಮದಲ್ಲಿ ಮುಂಡರಗಿ ಶ್ರೀ ಜಗದ್ಗುರು ಅನ್ನದಾನೀಶ್ವರ ಸಂಸ್ಥಾನಮಠದ ಶ್ರೀ ಶಾಖಾಮಠ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಅನ್ನದಾನೀಶ್ವರ ಸಂಸ್ಥಾನಮಠ ನೂರಾರು ಎಕರೆಗಿಂತ ಹೆಚ್ಚು ಭೂ ದಾನವನ್ನು ಸಮಾಜದ ಅಭಿವೃದ್ಧಿಗೆ ನೀಡಿದೆ. ತಲಕಲ್ಲ ಗ್ರಾಮದ ಭಕ್ತರು ಹೃದಯವಂತರು, ಧಾನ ದರ್ಮಗಳ ಗುಣಗಳನ್ನು ಅಳವಡಿಸಿಕೊಂಡು ಸಮಾಜಮುಖಿ ಬದುಕನ್ನು ಸಾಗಿಸುತ್ತಿದ್ದಾರೆ. ಇಂತಹ ಭಕ್ತರಿಗೆ ನಮ್ಮ ಮಠದ ನಾಲ್ಕು ಎಕರೆ ಭೂದಾನ ಮಾಡಿದ್ದು, ಅದರಲ್ಲಿ ೧೦ ಗುಂಟೆ ಜಾಗದಲ್ಲಿ ಕುಕನೂರ ಶ್ರೀಗಳ ನೇತೃತ್ವದಲ್ಲಿ ಶಾಖಾಮಠ ನಿರ್ಮಾಣ ಮಾಡಿರುವುದು ಅತ್ಯಂತ್ಯ ಸಂತೋಷ ತಂದಿದೆ, ಕುಕನೂರ ಶ್ರೀಗಳ ಕಾರ್ಯ ಶ್ಲಾಘನೀಯ ಎಂದರು.
ಜಬ್ಬಲಗುಡ್ಡ ಬಳಿ ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ
ಕೊಪ್ಪಳ ತಾಲೂಕಿಗೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಯನ್ನು ತಾಲೂಕಿನ ಜಬ್ಬಲಗುಡ್ಡ ಗ್ರಾಮದ ಬಳಿ ಪೂರ್ಣಕುಂಭದೊಂದಿಗೆ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಕರ್ನಾಟಕ ಸಂಭ್ರಮ 50ರ ಜ್ಯೋತಿ ರಥಯಾತ್ರೆಯು ಭಾನುವಾರ ಕೊಪ್ಪಳ ತಾಲೂಕಿಗೆ ಪ್ರವೇಶಿಸಿತು. ಬೆಳಗ್ಗೆ ಗಂಗಾವತಿಯಿಂದ ಹೊರಟ ರಥಯಾತ್ರೆ ಬೂದಗುಂಪಾ ಮಾರ್ಗವಾಗಿ ಕೊಪ್ಪಳ ತಾಲೂಕಿಗೆ ಪ್ರವೇಶ ಮಾಡಿತು. ತಾಲೂಕಿನ ಮಾರ್ಗ ಮಧ್ಯೆದ ಜಬ್ಬಲಗುಡ್ಡ ಗ್ರಾಮದಲ್ಲಿ ಬಳಿಯಲ್ಲಿ ರಥಯಾತ್ರೆಯನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಜಬ್ಬಲಗುಡ್ಡ ಸೇರಿದಂತೆ ಸುತ್ತಲಿನ ವಿವಿಧ ಗ್ರಾಮಗಳ ಮಹಿಳೆಯರು ರಥದ ಮುಂದೆ ಕುಂಭ ಹೊತ್ತು ಸಾಗಿದರು. ಕನ್ನಡಪರ ಸಂಘಟನೆಗಳು, ವಿವಿಧ ಸಂಘಟನೆಗಳು, ಮುಖಂಡರು ರಥಯಾತ್ರೆ ಸ್ವಾಗತಿಸಿದರು. ಕನ್ನಡ ಧ್ವಜದ ಶಾಲುಗಳನ್ನು ಹಾಕಿ, ಕನ್ನಡ ಜಯಘೋಷ ಕೂಗುತ್ತಾ ಸಾಲಾಗಿ ಹೆಜ್ಜೆ ಹಾಕಿ ಸಂಭ್ರಮಿಸಿದರು. ರಥಯಾತ್ರೆಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು.
ಡಿಕೆಶಿ ರಕ್ಷಿಸಲು ಸಿಎಂರಿಂದ ಸಚಿವ ಸಂಪುಟ ದುರುಪಯೋಗ-ಕೋಟ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ರಕ್ಷಿಸಲು ಸಿಬಿಐಗೆ ನೀಡಿದ್ದ ಅವರ ಪ್ರಕರಣವನ್ನು ವಾಪಸ್‌ ಪಡೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಡೀ ಸಚಿವ ಸಂಪುಟವನ್ನೇ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ವಿಪ ಸದಸ್ಯ ಕೋಟ ಶ್ರೀನಿವಾಸ ಪೂಜಾರ ವಾಗ್ದಾಳಿ ನಡೆಸಿದರು. ಈ ಹಿಂದೆ ಸಂವಿಧಾನ ರಕ್ಷಣೆ ಮಾಡಬೇಕು ಎಂದು ಹೇಳುತ್ತಿದ್ದ ಸಿದ್ದರಾಮಯ್ಯ ಈಗ ಸಂವಿಧಾನದ ನಿಯಮಗಳನ್ನು ಗಾಳಿಗೆ ತೂರಿ ಡಿಕೆಶಿ ವಿರುದ್ಧ ನಡೆಯುತ್ತಿದ್ದ ತನಿಖೆ ನಿಲ್ಲಿಸುವಂತೆ ಮಾಡಿದ್ದು ಸರಿಯಲ್ಲ. ಸದ್ಯಕ್ಕೆ ನಮ್ಮ ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ. ಆದರೂ ಸಹಿತ ಸಿಎಂ, ಡಿಸಿಎಂ ರೈತರ ಹೊಲಗಳಿಗೆ ಹೋಗಿ ಧೈರ್ಯ ತುಂಬುವ ಕೆಲಸ ಮಾಡುತ್ತಿಲ್ಲ; ಪರಿಹಾರ ಕೊಡುತ್ತಿಲ್ಲ. ಮುಂದಿನ ದಿನಮಾನಗಳಲ್ಲಿ ನೀರಿಗೆ ಹಾಹಾಕಾರ ಸೃಷ್ಟಿಯಾಗಲಿದೆ ಎಂದರು.
ಕಾಲುವೆಯಲ್ಲ, ನದಿಯಿಂದ ಆಂಧ್ರ, ತೆಲಂಗಾಣಕ್ಕೆ ನೀರು
ರಾಜ್ಯದ ರೈತರ ಬೆಳೆ ಕಾಪಾಡುವ ಉದ್ದೇಶದಿಂದ ಕಾಲುವೆ ಮೂಲಕವೇ ನಿಮ್ಮ ಪಾಲಿನ ನೀರನ್ನು ಪಡೆಯಿರಿ ಎಂದು ರಾಜ್ಯ ಸರ್ಕಾರಮ ಮಾಡಿಕೊಂಡ ಮನವಿಗೆ ಕವಡೆ ಕಾಸಿನ ಕಿಮ್ಮತ್ತನ್ನೂ ತೋರದೇ, ರಾಜ್ಯದ ರೈತರ ಬಗ್ಗೆ ಕರುಣೆಯನ್ನೂ ತೋರದ, ಆಂಧ್ರಪ್ರದೇಶ ಮತ್ತು ತೆಲಂಗಾಣ ಸರ್ಕಾರಗಳು ನದಿ ಮೂಲಕವೇ ಶನಿವಾರದಿಂದ ನೀರು ಹರಿಸಿಕೊಳ್ಳಲು ಆರಂಭಿಸಿದ್ದು ತಮ್ಮ ಮೊಂಡು ಹಠವನ್ನು ಮುಂದುವರಿಸಿವೆ. ತುಂಗಭದ್ರಾ ಜಲಾಶಯದಲ್ಲಿ ಈಗ ಇರುವುದೇ ಕೇವಲ 16 ಟಿಎಂಸಿ ನೀರು. ಇದರಲ್ಲಿ ಆಂಧ್ರ, ತೆಲಂಗಾಣ ರಾಜ್ಯದ ಪಾಲು 4 ಟಿಎಂಸಿ. ಈ ನಾಲ್ಕು ಟಿಎಂಸಿ ನೀರನ್ನು ಬಲದಂಡೆ ಮೇಲ್ಮಟ್ಟದ ಕಾಲುವೆ ಮೂಲಕ ಹರಿಸಿಕೊಂಡರೆ ಕಾಲುವೆ ವ್ಯಾಪ್ತಿಯ ಬಳ್ಳಾರಿ ಜಿಲ್ಲೆಯ ರೈತರ ಒಂದು ಲಕ್ಷ ಎಕರೆ ಪ್ರದೇಶದ ಬೆಳೆ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಹೀಗಾಗಿ, ಕಾಲುವೆಯ ಮೂಲಕವೇ ನೀರು ಹರಿಸಿಕೊಳ್ಳಿ ಎಂದು ರಾಜ್ಯ ಸರ್ಕಾರ ಮನವಿ ಮಾಡಿದರೂ ಆಂಧ್ರ ಮತ್ತು ತೆಲಂಗಾಣ ಸರ್ಕಾರಗಳು ಒಪ್ಪುತ್ತಿಲ್ಲ.
ನಿರಾಶ್ರಿತರ ಹೋರಾಟಕ್ಕೂ ಸಂಸದ ಸಂಗಣ್ಣ ಕರಡಿ ಬೆಂಬಲ
ಕೊಪ್ಪಳ ನಗರದ ವಸತಿ ನಿರಾಶ್ರಿತರಿಗೆ ಆಶ್ರಯ ನಿವೇಶನ,ಮನೆ ನೀಡಲು ಒತ್ತಾಯಿಸಿ ವಸತಿ ನಿರಾಶ್ರಿತರ ಹೋರಾಟ ಸಮಿತಿ ನಗರಸಭೆ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ 10ನೇ ದಿನಕ್ಕೆ ಕಾಲಿಟ್ಟಿದ್ದು, ಸಂಸದ ಸಂಗಣ್ಣ ಕರಡಿ ಭೇಟಿ ನೀಡಿ, ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ನಗರದ ವಸತಿ ನಿರಾಶ್ರಿತರಿಗೆ ಆಶ್ರಯ ನಿವೇಶನ, ಮನೆ ಸೇರಿದಂತೆ ಅವರ ನ್ಯಾಯಯುತ ಬೇಡಿಕೆಗಳನ್ನು ರಾಜ್ಯ ಸರ್ಕಾರ ಕೂಡಲೇ ಈಡೇರಿಸಬೇಕು ಎಂದರು. ವಸತಿ ನಿರಾಶ್ರಿತರ ಹೋರಾಟ ಸಮಿತಿಯ ಸಂಚಾಲಕ ಸಂಜಯದಾಸ ಕೌಜಗೇರಿ ಮಾತನಾಡಿ, ಕಳೆದ 10 ದಿನಗಳಿಂದ ಹೋರಾಟ ನಡೆಸಿದರೂ ಸರ್ಕಾರ ಸ್ಪಂದಿಸುತ್ತಿಲ್ಲ ಎಂದರು.
ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಧರಣಿ
ಪಿಯು ಹಂತವನ್ನು ಪ್ರೌಢ ಶಾಲೆಯಲ್ಲಿ ವಿಲೀನಗೊಳಿಸುವುದನ್ನು ವಿರೋಧಿಸಿ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ, ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಹಾಗೂ ಪದವಿ ಪೂರ್ವ ಕಾಲೇಜುಗಳ ಬೋಧಕೇತರ ಸಂಘ ಜಂಟಿಯಾಗಿ ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು. ಪಿಯು ಶಿಕ್ಷಣಕ್ಕೆ ದೇಶದಲ್ಲಿಯೇ ಅತ್ಯುತ್ತಮ ಮಾನ್ಯತೆ ಇದೆ. ಗುಣಮಟ್ಟದ ಶಿಕ್ಷಣಕ್ಕೆ ಹೆಸರಾಗಿದೆ. ಇದನ್ನು ಏಕಾಏಕಿ ಪ್ರೌಢ ಶಿಕ್ಷಣ ವ್ಯಾಪ್ತಿಗೆ ಸೇರ್ಪಡೆ ಮಾಡುವುದು ಸರಿಯಲ್ಲ. ಇದರಿಂದ ಪಿಯು ಗುಣಮಟ್ಟದ ಶಿಕ್ಷಣಕ್ಕೆ ಸಮಸ್ಯೆಯಾಗುತ್ತದೆ. ಕೂಡಲೇ ಇದನ್ನು ಹಿಂಪಡೆಯಬೇಕು.
ವಾಹನಗಳ ವಾಯುಮಾಲಿನ್ಯ ತಪಾಸಣೆ ಮಾಡಿಸಿ-ಜಿಲ್ಲಾಧಿಕಾರಿ ನಳಿನ್
ವಾಹನ ಮಾಲೀಕರು ಪ್ರತಿ ಆರು ತಿಂಗಳಿಗೊಮ್ಮೆ ವಾಹನಗಳ ವಾಯುಮಾಲಿನ್ಯ ತಪಾಸಣೆ ಮಾಡಿಸಿ, ವಾಹನದಿಂದ ವಾಯುಮಾಲಿನ್ಯ ಆಗುತ್ತಿಲ್ಲ ಎಂಬುದರ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಳಿನ್ ಅತುಲ್ ಹೇಳಿದರು. ಪ್ರತಿ 6 ತಿಂಗಳಿಗೊಮ್ಮೆ ವಾಯುಮಾಲಿನ್ಯ ತಪಾಸಣಾ ಕೇಂದ್ರಗಳಲ್ಲಿ ತಮ್ಮ ವಾಹನ ತಪಾಸಣೆಗೊಳಪಡಿಸಿ ವಾಯು ಮಾಲಿನ್ಯ ನಿಯಂತ್ರಣದಲ್ಲಿದೆ ಎಂಬ ಪ್ರಮಾಣಪತ್ರ ಪಡೆಯಬೇಕು. ಕಲಬೆರಕೆ ಇಂಧನ ಉಪಯೋಗಿಸಬಾರದು. ಕಪ್ಪು ಮತ್ತು ದಟ್ಟವಾದ ಹೊಗೆ ಬರುತ್ತಿದ್ದರೆ ತಕ್ಷಣ ಅಧಿಕೃತ ಮಾರಾಟಗಾರರು ಅಥವಾ ಸರ್ವೀಸಿಂಗ್ ಸೆಂಟರ್‌ಗಳಲ್ಲಿ ದುರಸ್ತಿ ಮಾಡಿಸಬೇಕು ಎಂದರು.
ಡಿಸೆಂಬರ್ 15ರಿಂದ ಸಿಂಧನೂರ ಹುಬ್ಬಳ್ಳಿ ರೈಲು ಸಂಚಾರ-ಕರಡಿ ಸಂಗಣ್ಣ
ಗಿಣಿಗೇರಾ ಮೆಹಬೂಬ್‍ನಗರ ರೈಲ್ವೆ ಲೈನ್ ಕಾಮಗಾರಿ ಸಿಂಧನೂರುವರೆಗೆ ಪೂರ್ಣಗೊಂಡಿದೆ. ಡಿ.15ಕ್ಕೆ ಸಿಂಧನೂರಿಗೆ ರೈಲು ಸಂಚಾರ ಮತ್ತು ಗದಗ ವಾಡಿ ಮಾರ್ಗದಲ್ಲಿ ಕುಷ್ಟಗಿ ಪಟ್ಟಣಕ್ಕೆ ಜನೇವರಿಯಲ್ಲಿ ರೈಲು ಸಂಚಾರ ಪ್ರಾರಂಭವಾಗಲಿದೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅಧಿಕಾರಾವಧಿಯಲ್ಲಿ ಕೊಪ್ಪಳ ಲೋಕಸಭೆ ಕ್ಷೇತ್ರಕ್ಕೆ ಹತ್ತಾರು ರೀತಿಯ ರೈಲು ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಕಿಷ್ಕಿಂಧೆ ಪ್ರದೇಶವಾಗಿರುವ ಗಂಗಾವತಿಯಿಂದ ಅಯೋಧ್ಯೆವರೆಗೂ ನೇರ ರೈಲು ಸಂಚಾರ ಪ್ರಾರಂಭವಾಗುವ ವಿಶ್ವಾಸವಿದೆ ಎಂದು ಸಂಸದರು ಹೇಳಿದರು.
  • < previous
  • 1
  • ...
  • 440
  • 441
  • 442
  • 443
  • 444
  • 445
  • 446
  • 447
  • 448
  • ...
  • 458
  • next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved