ಸಾರಾಂಶ
ಕನ್ನಡಪ್ರಭ ವಾರ್ತೆ ಅಥಣಿ
ರಾಜ್ಯದಲ್ಲಿ 2023-24ರ ಕ್ರಷಿಂಗ್ ಸೀಸನ್ಗಾಗಿ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯು ಅತ್ಯುತ್ತಮ ತಾಂತ್ರಿಕ ದಕ್ಷತೆ ಪ್ರಶಸ್ತಿ (ಸಹಕಾರಿ ಸಕ್ಕರೆ ಕಾರ್ಖಾನೆ)ಯನ್ನು ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಗೆ ನೀಡಿರುವುದು ಸಂತೋಷದ ಸಂಗತಿ ಎಂದು ಕಾರ್ಖಾನೆ ಅಧ್ಯಕ್ಷ ಪರಪ್ಪ ಸವದಿ ಹೇಳಿದರು.ಸಂಕೋನಟ್ಟಿ ಗ್ರಾಮದ ಬಳಿಯ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲೇ ಸಹಕಾರಿ ರಂಗದ ಸಕ್ಕರೆ ಕಾರ್ಖಾನೆಗಳಲ್ಲಿ ಅತ್ಯುತ್ತಮ ತಾಂತ್ರಿಕ ನಿರ್ವಹಣೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ. ಯಾವುದೇ ಉದ್ಯಮದ ಉತ್ತಮ ಕಾರ್ಯಕ್ಷಮತೆ ಗುರುತಿಸುವುದರ ಜೊತೆಗೆ ಮತ್ತಷ್ಟು ಸುಧಾರಿಸಲು ಮತ್ತು ಇತರರು ಸ್ಪರ್ಧಿಸಲು ಪ್ರೋತ್ಸಾಹಿಸುತ್ತದೆ ಎಂದರು.ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯು ಕಾರ್ಖಾನೆ ಕಾರ್ಯಕ್ಷಮತೆಯ ಆಧಾರದ ತಾಲೂಕಿನ ಕೃಷ್ಣಾ ಸಹಕಾರಿ ಕಾರ್ಖಾನೆಗೆ 2023-24 ರ ಕ್ರಷಿಂಗ್ ಸೀಸನ್ಗಾಗಿ ರಾಜ್ಯದ ಕಾರ್ಖಾನೆಗಳು ಸಲ್ಲಿಸಿದ ಆರ್ಟಿಬಿ (ಸಿ) ಪ್ರಕಾರ ತಾಂತ್ರಿಕ ನಿಯತಾಂಕಗಳ ವಿಶ್ಲೇಷಣೆ ಆಧಾರದ ಮೇಲೆ ಪ್ರಶಸ್ತಿ ನಮ್ಮ ಕಾರ್ಖಾನೆಗೆ ಸಿಕ್ಕಿದ್ದು ಸಂತೋಷದ ಜೊತೆಗೆ ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದರು.ಪ್ರಶಸ್ತಿಯನ್ನು ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಅಧ್ಯಕ್ಷ ಮತ್ತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವರು ಶಿವಾನಂದ ಪಾಟೀಲ ಅವರು ಬೆಳಗಾವಿಯ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ನಿರ್ದೇಶಕ ಮಂಡಳಿಯ ಸದಸ್ಯರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.ಈ ವೇಳೆ ಉಪಾಧ್ಯಕ್ಷ ಶಂಕರ ವಾಘಮೋಡೆ, ನಿರ್ದೇಶಕರಾದ ಗುರುಬಸು ತೇವಮನಿ, ಶಾಂತಿನಾಥ ನಂದೇಶ್ವರ, ಘೋಳಪ್ಪ ಜತ್ತಿ, ರಮೇಶ ಪಟ್ಟಣ, ವಿಶ್ವನಾಥ ಪಾಟೀಲ, ರುಕ್ಮೀಣಿ ಕುಲಕರ್ಣಿ, ಸೌರಭ ಪಾಟೀಲ, ಸುನಂದಾ ನಾಯಿಕ, ಸಿದ್ರಾಯ ನಾಯಿಕ, ಮಲ್ಲಿಕಾರ್ಜುನ ಗೋಟಖಿಂಡಿ, ಹಣಮಂತ ಜಗದೇವ, ವ್ಯವಸ್ಥಾಕ ನಿರ್ದೇಶಕ ಜಿ ಎಮ್ ಪಾಟೀಲ, ಮುಖಂಡ ಶ್ರೀಶೈಲ ನಾಯಿಕ, ಮುಖ್ಯ ಲೆಕ್ಕಾಧಿಕಾರಿ ಶಂಕರ ಗೋಟಖಿಂಡಿ, ವಿನಾಯಕ ಮನಗೂಳಿ, ಸುರೇಶ ಠಕ್ಕಣ್ಣವರ, ಹೆಚ್ ಡಿ ಧರಿಗೌಡರ, ಸಿ ಎಸ್ ಪಾಟೀಲ, ಡಿ ಬಿ ದೇಸಾಯಿ ಇನ್ನಿತರರು ಉಪಸ್ಥಿತರಿದ್ದರು.ರಾಜ್ಯದಲ್ಲೇ ಸಹಕಾರಿ ರಂಗದ ಸಕ್ಕರೆ ಕಾರ್ಖಾನೆಗಳಲ್ಲಿ ಅತ್ಯುತ್ತಮ ತಾಂತ್ರಿಕ ನಿರ್ವಹಣೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ. ಯಾವುದೇ ಉದ್ಯಮದ ಉತ್ತಮ ಕಾರ್ಯಕ್ಷಮತೆ ಗುರುತಿಸುವುದರ ಜೊತೆಗೆ ಮತ್ತಷ್ಟು ಸುಧಾರಿಸಲು ಮತ್ತು ಇತರರು ಸ್ಪರ್ಧಿಸಲು ಪ್ರೋತ್ಸಾಹಿಸುತ್ತದೆ. ನಮ್ಮ ಕಾರ್ಖಾನೆಗೆ ಪ್ರಶಸ್ತಿ ದೊರಕಿರುವುದು ಸಂತಸ ತಂದಿದೆ.
- ಪರಪ್ಪ ಸವದಿ, ಅಧ್ಯಕ್ಷರು, ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆ ಅಥಣಿ.