ಸಾರಾಂಶ
ಕನ್ನಡಪ್ರಭ ವಾರ್ತೆ ಮಂಗಳೂರು
ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ವತಿಯಿಂದ ದಸರಾ ಪ್ರಯುಕ್ತ ಮಂಗಳೂರು ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು- ಮಡಿಕೇರಿ, ಮಂಗಳೂರು- ಕೊಲ್ಲೂರು, ಮಂಗಳೂರು- ಮುರ್ಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅ.3ರಿಂದ 12ರವರೆಗೆ ಯೋಜಿಸಲಾಗಿದೆ.ಮಂಗಳೂರು ದಸರಾ ನವದುರ್ಗ ದರ್ಶನ ಪ್ಯಾಕೇಜ್: ಮಂಗಳೂರು ಬಸ್ಸು ನಿಲ್ದಾಣದಿಂದ ಬೆಳಗ್ಗೆ 8 ಗಂಟೆಗೆ ಹೊರಟು, ಶ್ರೀ ಮಂಗಳಾದೇವಿ ದೇವಸ್ಥಾನ - ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ- ಶ್ರೀ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ- ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ (ಮಧ್ಯಾಹ್ನದ ಊಟ) - ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನ ಹಾಗೂ ಬೀಚ್- ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ- ಶ್ರೀ ಉರ್ವ ಮಾರಿಯಮ್ಮ ದೇವಸ್ಥಾನ (ಸಂಜೆ ಉಪಹಾರ)- ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ, ನವದುರ್ಗಾ ದರ್ಶನ ರಾತ್ರಿ 8 ಗಂಟೆಗೆ ಮಂಗಳೂರು ಬಸ್ ನಿಲ್ದಾಣಕ್ಕೆ ಹಿಂತಿರುಗಲಾಗುತ್ತದೆ. ಒಟ್ಟು ಪ್ರಯಾಣದರ (ಊಟ, ಉಪಹಾರ ಹೊರತುಪಡಿಸಿ) ವಯಸ್ಕರಿಗೆ 400 ರು. ಮಕ್ಕಳಿಗೆ (6 ವರ್ಷದಿಂದ 12 ವರ್ಷದವರಿಗೆ) 300 ರು. ಪ್ರಯಾಣ ದರ ನಿಗದಿಪಡಿಸಲಾಗಿದೆ.
ಮಡಿಕೇರಿ ಪ್ಯಾಕೇಜ್ ಪ್ರವಾಸ:ಮಂಗಳೂರಿನಿಂದ ಬೆಳಗ್ಗೆ 7 ಗಂಟೆಗೆ ಹೊರಟು ಮಡಿಕೇರಿ- ರಾಜಾಸೀಟ್- ಅಬ್ಬಿಫಾಲ್ಸ್- ನಿಸರ್ಗಧಾಮ- ಗೋಲ್ಡನ್ ಟೆಂಪಲ್ ಪ್ರವಾಸ ಕೈಗೊಂಡು ರಾತ್ರಿ 9 ಗಂಟೆಗೆ ಮಂಗಳೂರು ಬಸ್ ನಿಲ್ದಾಣಕ್ಕೆ ಹಿಂತಿರುಗಲಾಗುತ್ತದೆ (ಊಟ, ಉಪಹಾರ ಹೊರತುಪಡಿಸಿ). ವಯಸ್ಕರಿಗೆ 500 ರು. ಮಕ್ಕಳಿಗೆ (6 ವರ್ಷದಿಂದ 12 ವರ್ಷದವರಿಗೆ) 400 ರು. ನಿಗದಿಪಡಿಸಲಾಗಿದೆ.
ಮಂಗಳೂರು- ಕೊಲ್ಲೂರು ಪ್ಯಾಕೇಜ್ ಪ್ರವಾಸ:ಮಂಗಳೂರು ಬಸ್ ನಿಲ್ದಾಣದಿಂದ ಬೆಳಗ್ಗೆ 8 ಗಂಟೆಗೆ ಹೊರಟು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ- ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ (ಮಧ್ಯಾಹ್ನದ ಊಟ)- ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ- ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಪ್ರವಾಸ ಕೈಗೊಂಡು ರಾತ್ರಿ 7 ಗಂಟೆಗೆ ಮಂಗಳೂರು ಬಸ್ ನಿಲ್ದಾಣಕ್ಕೆ ಹಿಂತಿರುಗಲಾಗುತ್ತದೆ. (ಊಟ, ಉಪಹಾರ ಹೊರತುಪಡಿಸಿ) ವಯಸ್ಕರಿಗೆ 500 ರು., ಮಕ್ಕಳಿಗೆ (6- 12 ವರ್ಷದವರಿಗೆ) 400 ರು. ದರ ನಿಗದಿಪಡಿಸಲಾಗಿದೆ.
ಮಂಗಳೂರು- ಮುರುಡೇಶ್ವರ ಟೂರ್ ಪ್ಯಾಕೇಜ್:ಮಂಗಳೂರು ಬಸ್ ನಿಲ್ದಾಣದಿಂದ ಬೆಳಗ್ಗೆ 7 ಗಂಟೆಗೆ ಹೊರಟು ಮುರುಡೇಶ್ವರ ದೇವಸ್ಥಾನ- ಚಂಡಿಕಾ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕುಂಭಾಶಿ- ಆನೆಗುಡ್ಡೆ ಗಣಪತಿ ದೇವಸ್ಥಾನ- ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಪ್ರವಾಸ ಕೈಗೊಂಡು ರಾತ್ರಿ 7 ಗಂಟೆಗೆ ಮಂಗಳೂರು ಬಸ್ ನಿಲ್ದಾಣಕ್ಕೆ ಹಿಂತಿರುಗಲಾಗುತ್ತದೆ (ಊಟ, ಉಪಹಾರ ಹೊರತುಪಡಿಸಿ). ವಯಸ್ಕರಿಗೆ 550 ರು. ಮಕ್ಕಳಿಗೆ (6- 12 ವರ್ಷದವರಿಗೆ) 450 ರು. ದರ ನಿಗದಿಪಡಿಸಲಾಗಿದೆ.
ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ www.ksrtc.in ನಲ್ಲಿ ಮುಂಗಡ ಆಸನ ಕಾಯ್ದಿರಿಸಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ.ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 7760990702, 7760990711, ಮಂಗಳೂರು-1ನೇ ಘಟಕ ವ್ಯವಸ್ಥಾಪಕರು, ದೂರವಾಣಿ ಸಂಖ್ಯೆ 7760990713, ಮಂಗಳೂರು-3ನೇ ಘಟಕ ವ್ಯವಸ್ಥಾಪಕರು ದೂರವಾಣಿ ಸಂಖ್ಯೆ- 7760990723, ಮಂಗಳೂರು ಮುಂಗಡ ಬುಕ್ಕಿಂಗ್ ಕೌಂಟರ್ ದೂರವಾಣಿ ಸಂಖ್ಯೆ 9663211553, ಮಂಗಳೂರು ಬಸ್ ನಿಲ್ದಾಣ ದೂರವಾಣಿ ಸಂಖ್ಯೆ: 7760990720 ಸಂಪರ್ಕಿಸುವಂತೆ ಕೆಎಸ್ಆರ್ಟಿಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.