ಉಡುಪಿ: ಶ್ರೀ ರಮಾನಂದ ಗುರೂಜಿಯವರ ಆಡಳಿತದಲ್ಲಿ ಕಾರ್ಯಾಚರಿಸುತ್ತಿರುವ ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಉಸ್ತುವಾರಿ, ಪ್ರಜ್ಞಾ ಆಂಗ್ಲ ಮಾಧ್ಯಮ ಶಾಲೆಯ ಸಂಯೋಜಕಿ ಕುಸುಮಾ ನಾಗರಾಜ್ ಅವರಿಗೆ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ವತಿಯಿಂದ ಆಯೋಜಿಲ್ಪಟ್ಟ ಭೀಷ್ಮೋತ್ಸವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಸಾಪ ಪುರಸ್ಕಾರ ನೀಡಿ ಗೌರವಿಸಲಾಯಿತು.

ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ನಿರಂತರ ತನ್ನನ್ನು ತೊಡಗಿಸಿಕೊಂಡು ಯಾವುದೇ ಸಮಾರಂಭವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿರುವುದು ಕುಸುಮಾ ನಾಗರಾಜ್ ಅವರ ಹೆಗ್ಗಳಿಕೆಯಾಗಿದೆ.

ಸಮೇಳನಾಧ್ಯಕ್ಷ ಡಾ. ಭಾಸ್ಕರಾನಂದ ಕುಮಾರ್, ನಳಿನಿ ಭಾಸ್ಕರಾನಂದ, ಉಡುಪಿ ವಿಶ್ವನಾಥ ಶೆಣೈ ಗಾಂಧಿ ಆಸ್ಪತ್ರೆ ಆಡಳಿತ ನಿರ್ದೇಶಕ ಎಂ ಹರಿಶ್ಚಂದ್ರ, ಕಸಾಪ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಹೆಚ್ ಪಿ., ಗೌರವ ಕಾರ್ಯದರ್ಶಿಗಳಾದ ಜನಾರ್ದನ್ ಕೊಡವೂರ್, ರಂಜನಿ ವಸಂತ್ , ಡಾ. ಗಣನಾಥ ಎಕ್ಕಾರ್, ಡಾ. ಸುಬ್ರಮಣ್ಯ ಭಟ್, ಸತೀಶ್ ಕೊಡವೂರು , ಪೂರ್ಣಿಮಾ ಜನಾರ್ದನ್ , ಆರ್ ವಸಂತ್, ರಾಜೇಶ್ ಭಟ್ ಪಣಿಯಾಡಿ, ರಾಘವೇಂದ್ರ ಪ್ರಭು ಕರ್ವಾಲ್, ಪದ್ಮಾಸಿನಿ, ಸಿದ್ಧಬಸಯ್ಯ ಸ್ವಾಮಿ ಚಿಕ್ಕ ಮಠ ಉಪಸ್ಥಿತರಿದ್ದರು.