ಕುವೆಂಪು ಆದರ್ಶ, ಚಿಂತನೆಗಳು ಇಂದು ಹೆಚ್ಚು ಪ್ರಸ್ತುತ: ಕರವೇ ಜಿಲ್ಲಾಧ್ಯಕ್ಷ ಕಬ್ಬಾಳೇಗೌಡ

| Published : Dec 30 2024, 01:02 AM IST

ಕುವೆಂಪು ಆದರ್ಶ, ಚಿಂತನೆಗಳು ಇಂದು ಹೆಚ್ಚು ಪ್ರಸ್ತುತ: ಕರವೇ ಜಿಲ್ಲಾಧ್ಯಕ್ಷ ಕಬ್ಬಾಳೇಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಕುವೆಂಪು ಅವರ ವಿಶ್ವಮಾನವ ಸಂದೇಶ ಹೆಚ್ಚು ಪ್ರಸ್ತುತವಾಗಿದೆ. ಕನ್ನಡ ಸಾಹಿತ್ಯ- ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ವಿಜೃಂಭಿಸುವಂತೆ ಮಾಡಲು ಕುವೆಂಪು ಅವರ ಕೊಡುಗೆ ಅಪಾರವಾದುದು.

ಕನ್ನಡಪ್ರಭ ವಾರ್ತೆ ಕನಕಪುರ

ಕುವೆಂಪು ಅವರ ಆದರ್ಶಗಳು, ಚಿಂತನೆಗಳು ಹೆಚ್ಚು ಪ್ರಸ್ತುತವಾಗಿವೆ. ಕುವೆಂಪು ಕನ್ನಡದ ಅಸ್ಮಿತೆಯಾಗಿದ್ದು, ಅವರ ಲೇಖನಿಯಿಂದ ಮೂಡಿಬಂದ ಎಲ್ಲಾ ಸಾಹಿತ್ಯ ಪ್ರಕಾರಗಳಲ್ಲಿ ಸಾಮಾಜಿಕ ಬದಲಾವಣೆಗೆ ಅಗತ್ಯವಿರುವ ವಿಷಯ ವೈಶಿಷ್ಟ್ಯಗಳು, ಮೌಲ್ಯಗಳನ್ನು ಕಾಣಬಹುದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕಬ್ಬಾಳೇಗೌಡ ತಿಳಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಗರದ ಎಂ.ಜಿ. ರಸ್ತೆಯಲ್ಲಿರುವ ಕಚೇರಿಯಲ್ಲಿ ರಾಷ್ಟ್ರಕವಿ ಕುವೆಂಪು ಅವರ 120ನೇ ಜನ್ಮದಿನಾಚರಣೆಯಲ್ಲಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಕುವೆಂಪು ಅವರ ವಿಶ್ವಮಾನವ ಸಂದೇಶ ಹೆಚ್ಚು ಪ್ರಸ್ತುತವಾಗಿದೆ. ಕನ್ನಡ ಸಾಹಿತ್ಯ- ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ವಿಜೃಂಭಿಸುವಂತೆ ಮಾಡಲು ಕುವೆಂಪು ಅವರ ಕೊಡುಗೆ ಅಪಾರವಾದುದು ಎಂದರು.ನಗರದ ರೂರಲ್ ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ. ದೇವರಾಜು ಮಾತನಾಡಿ, ರಾಷ್ಟ್ರಕವಿ ಕುವೆಂಪು ಅವರು ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯ ಸೇರಿದಂತೆ ಹಲವಾರು ಸಾಹಿತ್ಯ ಪ್ರಕಾರಗಳನ್ನು ರಚನೆ ಮಾಡಿ ಶ್ರೀ ಸಾಮಾನ್ಯನಿಗೂ ಮಾನವೀಯ ಮೌಲ್ಯಗಳನ್ನು ತಿಳಿಸಿ ಕೊಡುವ ಮೂಲಕ ತಮ್ಮ ಸಾಹಿತ್ಯ ಪ್ರಕಾರಗಳಲ್ಲಿ ಸಮಾನತೆಯನ್ನು ಸಾರಿದ ಮಹಾನ್ ಚೇತನವಾಗಿ ವಿಶ್ವಮಾನವರಾಗಿದ್ದು, ಇಂದಿನ ಯುವ ಪೀಳಿಗೆ ಇವರ ಸಾಹಿತ್ಯವನ್ನು ಓದುವ ಆಸಕ್ತಿಯನ್ನು ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು.

ಕರವೇ ಜಿಲ್ಲಾ ಉಪಾಧ್ಯಕ್ಷ ಪುಟ್ಟಸ್ವಾಮಿ, ತಾಲೂಕು ಅಧ್ಯಕ್ಷ ಜಯರಾಮೇಗೌಡ, ಪದಾಧಿಕಾರಿಗಳಾದ ಶಿವಶಂಕರ್, ಜಗದೀಶ್, ಶಿವರಾಜ್, ಶಂಕರ್ ಗೌಡ, ಪರಮೇಶ್, ತಿಮ್ಮರಾಜು, ಬಾಲರಾಜ್, ಮಹೇಶ್ ಬಾಬು, ಜಯರಾಂ, ಮೋಹನ್, ಧನಶೇಖರ್, ರಾಮಚಂದ್ರ, ಕೇಶವಮೂರ್ತಿ, ಹಿಂದೂ ಜಾಗರಣ ವೇದಿಕೆಯ ಸಂಚಾಲಕ ವೆಂಕಟೇಶ್, ವಕೀಲ ಮಹೇಶ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.