ದೀಪಾವಳಿ ಹಿನ್ನೆಲೆ ಗುಣಿಕೇರಿಯಲ್ಲಿ ಲಕ್ಕೆ ಪೂಜೆ

| Published : Oct 22 2025, 01:03 AM IST

ಸಾರಾಂಶ

ದೀಪಾವಳಿ ಹಬ್ಬದ ಪ್ರಯುಕ್ತ ನಾವು ಪ್ರತಿ ವರ್ಷವೂ ಲಕ್ಕೆ ಪೂಜೆ ಹಾಗೂ ಭೂಮಿಪೂಜೆ ನೆರವೇರಿಸುತ್ತೇವೆ. ಅದರೊಂದಿಗೆ ದನದ ಕೊಟ್ಟಿಗೆ ಹಾಗೂ ತಿಪ್ಪೆ ಗುಂಡಿಗಳಿಗೆ ಪೂಜೆ ಸಲ್ಲಿಸುವುದು ನಮ್ಮ ಸಂಪ್ರದಾಯವಾಗಿದೆ ಎಂದು ಹೇಳಿದರು. ಈ ರೀತಿಯ ಆಚರಣೆಗಳು ನಮ್ಮ ಪುರಾತನ ಸಂಸ್ಕೃತಿಯ ಪ್ರತೀಕಗಳು. ಇವು ಕೆಲವು ಗ್ರಾಮೀಣ ಭಾಗಗಳಲ್ಲಿ ಮಾತ್ರ ಇಂದಿಗೂ ಉಳಿದಿವೆ. ನಗರ ಪ್ರದೇಶಗಳಲ್ಲಿ ಇಂತಹ ಸಂಪ್ರದಾಯಗಳು ನಿಧಾನವಾಗಿ ಕಣ್ಮರೆಯಾಗುತ್ತಿವೆ. ಆದರೂ ನಾವು ಗುಣಿಕೇರಿ ಬೀದಿಯವರು ಈ ಸಂಪ್ರದಾಯವನ್ನು ಜೀವಂತವಾಗಿ ಉಳಿಸಿಕೊಂಡು ಪ್ರತಿ ವರ್ಷವೂ ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿದ್ದೇವೆ ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಬೇಲೂರುಪಟ್ಟಣದ ಗುಣಿಕೇರಿ ಬೀದಿಯ ನಿವಾಸಿಗಳು ಈ ಬಾರಿ ದೀಪಾವಳಿ ಹಬ್ಬವನ್ನು ಸಾಂಪ್ರದಾಯಿಕ ರೀತಿಯಲ್ಲಿ ಭಕ್ತಿ, ಸಂಭ್ರಮದಿಂದ ಆಚರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿ ಹರೀಶ್ ಮಾತನಾಡಿ, ದೀಪಾವಳಿ ಹಬ್ಬದ ಪ್ರಯುಕ್ತ ನಾವು ಪ್ರತಿ ವರ್ಷವೂ ಲಕ್ಕೆ ಪೂಜೆ ಹಾಗೂ ಭೂಮಿಪೂಜೆ ನೆರವೇರಿಸುತ್ತೇವೆ. ಅದರೊಂದಿಗೆ ದನದ ಕೊಟ್ಟಿಗೆ ಹಾಗೂ ತಿಪ್ಪೆ ಗುಂಡಿಗಳಿಗೆ ಪೂಜೆ ಸಲ್ಲಿಸುವುದು ನಮ್ಮ ಸಂಪ್ರದಾಯವಾಗಿದೆ ಎಂದು ಹೇಳಿದರು. ಈ ರೀತಿಯ ಆಚರಣೆಗಳು ನಮ್ಮ ಪುರಾತನ ಸಂಸ್ಕೃತಿಯ ಪ್ರತೀಕಗಳು. ಇವು ಕೆಲವು ಗ್ರಾಮೀಣ ಭಾಗಗಳಲ್ಲಿ ಮಾತ್ರ ಇಂದಿಗೂ ಉಳಿದಿವೆ. ನಗರ ಪ್ರದೇಶಗಳಲ್ಲಿ ಇಂತಹ ಸಂಪ್ರದಾಯಗಳು ನಿಧಾನವಾಗಿ ಕಣ್ಮರೆಯಾಗುತ್ತಿವೆ. ಆದರೂ ನಾವು ಗುಣಿಕೇರಿ ಬೀದಿಯವರು ಈ ಸಂಪ್ರದಾಯವನ್ನು ಜೀವಂತವಾಗಿ ಉಳಿಸಿಕೊಂಡು ಪ್ರತಿ ವರ್ಷವೂ ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿದ್ದೇವೆ ಎಂದು ತಿಳಿಸಿದರು. ಗುಣಿಕೇರಿ ಬೀದಿಯ ಪ್ರತಿ ಮನೆಮುಂದೆ ರಂಗೋಲಿ ಬಿಡಿಸಿ, ತೈಲದೀಪ ಬೆಳಗಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದರು. ಎಲ್ಲೆಡೆ ಲಕ್ಯೋ ಲಕ್ಯೋ ಎಂಬ ಹರ್ಷೋದ್ಗಾರ ಮತ್ತು ಭಕ್ತಿಯ ವಾತಾವರಣ ಸೃಷ್ಟಿಯಾಗಿತ್ತು.

ಈ ಸಂದರ್ಭದಲ್ಲಿ ಗಿರೀಶ್ ಲೊಕೇಶ್, ಪದ್ಮ, ರಾಕೇಶ್, ರಾಜಣ್ಣ ,ವಸಂತ್, ಕುಮಾರ್ , ಸಿದ್ದೇಶ್, ಹಾಜರಿದ್ದರು. .