ತಾತನಹಳ್ಳಿಯ ಗ್ರಾಮದೇವತೆ ಶ್ರೀ ಲಕ್ಷ್ಮೀದೇವಿ ದೇವಾಲಯಲ್ಲಿ ಶನಿವಾರ ಮುಂಜಾನೆ ಬ್ರಾಹ್ಮಿ ಮಹೂರ್ತದಲ್ಲಿ ಶ್ರೀದೇವಿಯ ಮೂಲ ಮೂರ್ತಿಗೆ ಪಂಚಾಮೃತ ಅಭಿಷೇಕ, ಅಲಂಕಾರ, ನೈವೇದ್ಯ, ಸಹಸ್ರ ನಾಮಾರ್ಚನೆ ನೆರವೇರಿಸಲಾಯಿತು. ಉತ್ಸವ ಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಿ, ಮಂಗಳಾರತಿ ನೆರವೇರಸಿ, ದೇವಾಲಯದ ಪ್ರಾಂಗಣದಲ್ಲಿ ಉತ್ಸವ ನಡೆಸಲಾಯಿತು. ಸಿಡಿ ರಥವನ್ನು ವಿಶೇಷವಾಗಿ ಅಲಂಕರಿಸಿ, ಸಂಪ್ರದಾಯದ ಆಚರಣೆಯಂತೆ ಎಡೆ ಸಮರ್ಪಿಸಿ, ಪೂಜಿಸಲಾಯಿತು.
ಕನ್ನಡಪ್ರಭ ವಾರ್ತೆ ಹೊಳೆನರಸೀಪುರ ತಾಲೂಕಿನ ತಾತನಹಳ್ಳಿಯಲ್ಲಿ ಗ್ರಾಮದೇವತೆ ಶ್ರೀ ಲಕ್ಷ್ಮೀ ದೇವಿ ಹಾಗೂ ಶ್ರೀ ತಾತೇಶ್ವರಸ್ವಾಮಿ ಸಿಡಿ ಜಾತ್ರಾ ಮಹೋತ್ಸವ ಸಂಪ್ರದಾಯದ ಆಚರಣೆಯಂತೆ ಶನಿವಾರ ವೈಭವದಿಂದ ನಡೆಯಿತು.ತಾತನಹಳ್ಳಿಯ ಗ್ರಾಮದೇವತೆ ಶ್ರೀ ಲಕ್ಷ್ಮೀದೇವಿ ದೇವಾಲಯಲ್ಲಿ ಶನಿವಾರ ಮುಂಜಾನೆ ಬ್ರಾಹ್ಮಿ ಮಹೂರ್ತದಲ್ಲಿ ಶ್ರೀದೇವಿಯ ಮೂಲ ಮೂರ್ತಿಗೆ ಪಂಚಾಮೃತ ಅಭಿಷೇಕ, ಅಲಂಕಾರ, ನೈವೇದ್ಯ, ಸಹಸ್ರ ನಾಮಾರ್ಚನೆ ನೆರವೇರಿಸಲಾಯಿತು. ಉತ್ಸವ ಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಿ, ಮಂಗಳಾರತಿ ನೆರವೇರಸಿ, ದೇವಾಲಯದ ಪ್ರಾಂಗಣದಲ್ಲಿ ಉತ್ಸವ ನಡೆಸಲಾಯಿತು. ಸಿಡಿ ರಥವನ್ನು ವಿಶೇಷವಾಗಿ ಅಲಂಕರಿಸಿ, ಸಂಪ್ರದಾಯದ ಆಚರಣೆಯಂತೆ ಎಡೆ ಸಮರ್ಪಿಸಿ, ಪೂಜಿಸಲಾಯಿತು. ಶ್ರೀದೇವಿಯ ಅಡ್ಡೆ ಹೊತ್ತವರು ಹಾಗೂ ಭಕ್ತರು ಸಿಡಿ ರಥಕ್ಕೆ ಪ್ರದಕ್ಷಿಣೆ ಹಾಕಿದ ನಂತರ ಮಹಾಮಂಗಳಾರತಿ ನೆರವೇರಿಸಿ, ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಿಡಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ಗ್ರಾಮದ ಮುಖಂಡರು ಹಾಗೂ ಯುವಕರು ಹಿರಿಯರ ಸಲಹೆ ಹಾಗೂ ಮಾರ್ಗದರ್ಶನದಲ್ಲಿ ಪೂಜಾ ಕೈಂಕರ್ಯವನ್ನು ನೆರವೇರಿಸುವ ನಿಟ್ಟಿನಲ್ಲಿ ಅಗತ್ಯ ವ್ಯವಸ್ಥೆ ಮಾಡುವ ಜತೆಗೆ ಪರ ಊರುಗಳಿಂದ ಬರುವ ಭಕ್ತರಿಗಾಗಿ ಸಮುದಾಯ ಭವನದಲ್ಲಿ ಪ್ರಸಾದ ವ್ಯವಸ್ಥೆ ಮಾಡಿದ್ದರು. ಪೂರ್ವಿಕರ ಆಚರಣೆಯಂತೆ ದೇವಾಂಗ ಜನಾಂಗದ ಮಳಲಿಶೆಟ್ಟರ ಕುಟುಂಬಸ್ಥರು ನೂರಾರು ಭಕ್ತರಿಗೆ ಪಾನಕ ವಿತರಿಸಿ, ಶ್ರೀ ದೇವಿಯ ಸೇವೆಗೈದರು.