ಕಾನ್ಬೈಲ್ ಶ್ರೀ ರಾಮ ಮಂದಿರ ಹಾಗೂ ಆವರಣದಲ್ಲಿ ಬೆಳೆದು ನಿಂತಿದ್ದ ಕಾಡು ಗಿಡಗಂಟಿಗಳನ್ನು ಕಡಿದು ಸ್ವಚ್ಛಗೊಳಿಸುವ ಮೂಲಕ ಶ್ರಮದಾನ ನಡೆಯಿತು.
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್ಬೈಲ್ ಕಾರ್ಯಕ್ಷೇತ್ರದ ವಿವಿಧ ಸ್ವಸಹಾಯ ಸಂಘಗಳ ವತಿಯಿಂದ ಕಾನ್ಬೈಲ್ ಶ್ರೀ ರಾಮ ಮಂದಿರ ಹಾಗೂ ಆವರಣದಲ್ಲಿ ಬೆಳೆದು ನಿಂತಿದ್ದ ಕಾಡು ಗಿಡಗಂಟಿಗಳನ್ನು ಕಡಿದು ಸ್ವಚ್ಛಗೊಳಿಸುವ ಮೂಲಕ ಶ್ರಮದಾನ ನಡೆಯಿತು.ಇತ್ತೀಚೆಗೆ ಕಾನ್ಬೈಲ್ ಶ್ರೀ ರಾಮ ಮಂದಿರ ಹಾಗೂ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್ಬೈಲು ಒಕ್ಕೂಟದ ಉಪಾಧ್ಯಕ್ಷೆ ಗೀತಾ, ಕಾರ್ಯದರ್ಶಿ ಪುಷ್ಪಲತಾ, ಮಾಜಿ ಅಧ್ಯಕ್ಷ ಖತ್ತೀಜ ಹಾಗೂ ಸೇವಾ ಪ್ರತಿನಿಧಿ ಯಶೋಧ ಬಸವರಾಜ್ ಶ್ರಮದಾನ ಕಾರ್ಯಕ್ಕೆ ಚಾಲನೆ ನೀಡಿದರು.
ನಂತರ ಕಾನಬೈಲ್ ಒಕ್ಕೂಟ ವ್ಯಾಪ್ತಿಯ ಸ್ವಸಹಾಯ ಸಂಘಗಳಾದ ಜನನಿ, ಮೂಕಾಂಬಿಕಾ ಸಂಘದ ಸದಸ್ಯರು ಶ್ರಮದಾನದಲ್ಲಿ ಪಾಲ್ಗೊಂಡು ಶಾಲಾ ಆವರಣದಲ್ಲಿ ಬೆಳೆದು ನಿಂತಿದ್ದ ಕಾಡು ಗಿಡಗಂಟಿಗಳನ್ನು ಕಡಿದು ಸ್ವಚ್ಛಗೊಳಿಸಿದರು.