ಪುನರೂರು ಶ್ರೀ ವಿಶ್ವನಾಥ ದೇವಳ ನೂತನ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ

| Published : Jun 14 2025, 12:23 AM IST

ಪುನರೂರು ಶ್ರೀ ವಿಶ್ವನಾಥ ದೇವಳ ನೂತನ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ
Share this Article
  • FB
  • TW
  • Linkdin
  • Email

ಸಾರಾಂಶ

ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಅಂಗವಾಗಿ ಶುಕ್ರವಾರ ಬೆಳಗ್ಗೆ ದೇವಳದ ಶ್ರೀ ದೇವರ ನೂತನ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ ಸಮಾರಂಭವು ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ದಿವ್ಯ ಹಸ್ತದಲ್ಲಿ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಕಳತ್ತೂರು ಕರುಣಾಕರ ತಂತ್ರಿ ನೇತೃತ್ವದಲ್ಲಿ ನಡೆಯಿತು.

ಕನ್ನಡಪ್ರಭವಾರ್ತೆ ಮೂಲ್ಕಿ

ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಅಂಗವಾಗಿ ಶುಕ್ರವಾರ ಬೆಳಗ್ಗೆ ದೇವಳದ ಶ್ರೀ ದೇವರ ನೂತನ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ ಸಮಾರಂಭವು ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ದಿವ್ಯ ಹಸ್ತದಲ್ಲಿ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಕಳತ್ತೂರು ಕರುಣಾಕರ ತಂತ್ರಿ ನೇತೃತ್ವದಲ್ಲಿ ನಡೆಯಿತು.

ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಬೆಳಗ್ಗೆ ವಿಶೇಷ ಪ್ರಾರ್ಥನೆ, ಪಂಚಗವ್ಯ ಪುಣ್ಯಾಹ, ವಾಸ್ತು ಪೂಜೆ, ಭೂವರಾಹ ಹೋಮ, ಶಿಲಾಪೂಜೆ, ಬಳಿಕ ಶಿಲಾನ್ಯಾಸ ನಡೆಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿ ಉತ್ತರದ ಕಾಶಿಯಿಂದ ನೆಲೆಯಾಗಿ ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿಯಾದ ಪುನರೂರು ಶ್ರೀ ವಿಶ್ವನಾಥ ದೇವರ ಶಿಲಾನ್ಯಾಸದ ಶುಭ ಮುಹೂರ್ತದಲ್ಲಿ ಗಂಗಾಮಾತೆ ಹರಿದು ಬಂದಿದ್ದು ಶುಭವಾಗಲಿದೆ, ಧಾರ್ಮಿಕ ಕ್ಷೇತ್ರಗಳ ಜೀರ್ಣೋದ್ಧಾರದಿಂದ ಗ್ರಾಮದ ಅಭಿವೃದ್ಧಿ ಕೂಡ ಸಾಧ್ಯ ಎಂದರು.

ಈ ಸಂದರ್ಭ ಕಟೀಲು ಕ್ಷೇತ್ರದ ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ , ಕ್ಷೇತ್ರದ ಅರ್ಚಕ ಶಶಾಂಕ್ ಮುಚ್ಚಿಂತಾಯ, ವೇದಮೂರ್ತಿ ವಾದಿರಾಜ ಉಪಾಧ್ಯಾಯ ಕೊಲಕಾಡಿ, ವಾಸ್ತು ತಜ್ಞ ಗುಂಡಿಬೈಲು ಸುಬ್ರಹ್ಮಣ್ಯ ಭಟ್, ಕೃಷ್ಣಮೂರ್ತಿ ಆಚಾರ್ಯ, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉದ್ಯಮಿ ಪೃಥ್ವೀ ರಾಜ ಆಚಾರ್ಯ ಕಿನ್ನಿಗೋಳಿ, ಪಟೇಲ್ ರಾಮಮೂರ್ತಿ ರಾವ್, ಕ್ಷೇತ್ರದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವ ರಾವ್, ಜಗನ್ನಾಥ ರಾವ್ ಪಡುಬಿದ್ರೆ, ಕಸ್ತೂರಿ ಪಂಜ, ಗುರುರಾಜ್ ಎಸ್ ಪೂಜಾರಿ ತೋಕೂರು, ಜೀರ್ಣೋದ್ದಾರ ಸಮಿತಿಯ ಭುವನಾಭಿರಾಮ ಉಡುಪ, ಸುಧಾಕರ್ ರಾವ್, ದೇವಪ್ರಸಾದ್ ಪುನರೂರು, ಪಟೇಲ್ ವಿಶ್ವನಾಥ ರಾವ್, ಗೋಪಿನಾಥ ರಾವ್, ಪುರಂದರ ಶೆಟ್ಟಿಗಾರ್, ನವೀನ್ ಶೆಟ್ಟಿ ಪುನರೂರುಗುತ್ತು, ರವಿ ಶೆಟ್ಟಿ, ಧನಂಜಯ ಶೆಟ್ಟಿಗಾರ್, ಪಕ್ಷಿಕೆರೆ, ಸುರೇಶ್ ರಾವ್ ನೀರಳಿಕೆ, ರಮೇಶ್ ರಾವ್ ಮೂಡುಮನೆ ,ಚಂದ್ರಶೇಖರ ರಾವ್ ಎಸ್ಕೋಡಿ ಮತ್ತಿತರರು ಉಪಸ್ಥಿತರಿದ್ದರು

ಕ್ಷೇತ್ರದಲ್ಲಿ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು.