ಕ್ಷುಲ್ಲಕ ರಾಜಕಾರಣ ಬಿಟ್ಟು ಅಭಿವೃದ್ಧಿ ಕಡೆ ಗಮನಹರಿಸಿ

| Published : Oct 18 2024, 01:22 AM IST

ಸಾರಾಂಶ

ದೊಡ್ಡಬಳ್ಳಾಪುರ: ಶಾಸಕರು ಕ್ಷುಲ್ಲಕ ರಾಜಕಾರಣ ಬಿಟ್ಟು ಅಭಿವೃದ್ಧಿ ಕಡೆ ಗಮನ ಹರಿಸಲಿ. ಕಳೆದ ಒಂದೂವರೆ ವರ್ಷದಲ್ಲಿ ಕ್ಷೇತ್ರದ ಅಭಿವೃದ್ಧಿ ನೆಲಕಚ್ಚಿದೆ ಎಂದು ನಗರಸಭೆ ಸದಸ್ಯ ಎಚ್.ಎಸ್.ಶಿವಶಂಕರ್‌ ಆರೋಪಿಸಿದರು.

ದೊಡ್ಡಬಳ್ಳಾಪುರ: ಶಾಸಕರು ಕ್ಷುಲ್ಲಕ ರಾಜಕಾರಣ ಬಿಟ್ಟು ಅಭಿವೃದ್ಧಿ ಕಡೆ ಗಮನ ಹರಿಸಲಿ. ಕಳೆದ ಒಂದೂವರೆ ವರ್ಷದಲ್ಲಿ ಕ್ಷೇತ್ರದ ಅಭಿವೃದ್ಧಿ ನೆಲಕಚ್ಚಿದೆ ಎಂದು ನಗರಸಭೆ ಸದಸ್ಯ ಎಚ್.ಎಸ್.ಶಿವಶಂಕರ್‌ ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಸಭೆ ಸದಸ್ಯನಾಗಿ, ಬಿಜೆಪಿ ನಗರ ಘಟಕದ ಅಧ್ಯಕ್ಷನಾಗಿ ಪಕ್ಷ ಸಂಘಟಿಸಿದ್ದೇನೆ. ನಾವು ಕಟ್ಟಿದ ಪಕ್ಷದಲ್ಲಿ ಶಾಸಕ ಧೀರಜ್ ಮುನಿರಾಜ್ ಬಂದು ಸೇರಿ, ಪಕ್ಷ ಹಾಗೂ ನಗರಸಭೆ ಸದಸ್ಯರಲ್ಲಿ ವಿಷ ಬೀಜ ಬಿತ್ತುತ್ತಿದ್ದಾರೆ. ಶಾಸಕರು ಆಯ್ಕೆಯಾಗಿ ಒಂದೂವರೆ ವರ್ಷ ಕಳೆದರೂ ನಗರಸಭೆ ವ್ಯಾಪ್ತಿಯ ರಸ್ತೆ ಗುಂಡಿ ಮುಚ್ಚಿಸಲು ಸಾಧ್ಯವಾಗಿಲ್ಲ ಎಂದು ಟೀಕಿಸಿದರು.

ನಗರಸಭೆ ವ್ಯಾಪ್ತಿಯಲ್ಲಿ ಕಾಮಗಾರಿ ಕ್ರಿಯಾ ಯೋಜನೆ ಸಿದ್ಧಪಡಿಸುವಾಗ ಸ್ಥಳೀಯ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಶಾಸಕ ಧೀರಜ್ ಸರ್ವಾಧಿಕಾರಿಯಂತೆ ವರ್ತಿಸುತ್ತಾರೆ. ಬಿಜೆಪಿ, ಜೆಡಿಎಸ್ ಸದಸ್ಯರ ವಾರ್ಡ್‌ಗಳಿಗೆ ಮಾತ್ರ ಅನುದಾನ ನೀಡಿದ್ದಾರೆ ಎಂದು ಆರೋಪಿಸಿದರು.

ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಮಾತನಾಡಿ, ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಟಿ.ವೆಂಕಟರಮಣಯ್ಯ ಅವರ ಅವಧಿಯಲ್ಲಿ ನಡೆದಿರುವ ಕೆಲಸಗಳನ್ನು ಹೇಳಿಕೊಂಡು ಕ್ಷೇತ್ರದಲ್ಲಿ ಅಭಿವೃದ್ಧಿಯಾಗಿದೆ ಎಂದು ಪ್ರಚಾರ ಪಡೆಯುತ್ತಿದ್ದಾರೆ. ಒಂದೂವರೆ ವರ್ಷದ ಶಾಸಕ ಧೀರಜ್ ಸಾಧನೆ ಶೂನ್ಯ ಎಂದು ದೂರಿದರು.

100 ಹಾಸಿಗೆ ಸಾಮರ್ಥ್ಯದ ಇಎಸ್‌ಐ ಆಸ್ಪತ್ರೆ ಕಟ್ಟಡ ಕಾಮಗಾರಿ ಮುಕ್ತಾಯವಾಗಿ ಒಂದುವರೆ ವರ್ಷ ಕಳೆದರೂ ಉದ್ಘಾಟನೆ ಮಾಡಿಸಿಲ್ಲ. ಜಿಲ್ಲಾಸ್ಪತ್ರೆ ಮಂಜೂರಾತಿ ಕಾಂಗ್ರೆಸ್‌ ಶಾಸಕರ ಕಾಳಜಿಯಿಂದ ಆಗಿದೆಯೇ ಹೊರತು ಇವರಿಂದ ಅಲ್ಲ ಎಂದು ಅವರು ಆರೋಪಿಸಿದರು.

ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬೈರೇಗೌಡ, ನಗರ ಬ್ಲಾಕ್ ಅಧ್ಯಕ್ಷ ಕೆ.ಪಿ.ಜಗನ್ನಾಥ್, ಕಸಬಾ ಬ್ಲಾಕ್ ಅಧ್ಯಕ್ಷ ಅಪ್ಪಿವೆಂಕಟೇಶ್, ಅಲ್ಪಸಂ ಖ್ಯಾತರ ಅಧ್ಯಕ್ಷ ಬಷೀರ್, ನಗರಸಭಾ ಸದಸ್ಯರಾದ ಆನಂದ್, ಅಲ್ತಾಫ್, ನಾಗವೇಣಿ, ನಾಗರಾಜು, ಶಿವಣ್ಣ, ನಾಗವೇಣಿ, ಎಚ್.ಬಿ.ಅಖಿಲೇಶ್, ವಾಣಿ, ಮಂಜುನಾಥ್, ಸುಬ್ರಮಣಿ, ಶ್ರೀನಿವಾಸ್, ಫಯಾಜ್ ಮತ್ತಿತರರು ಉಪಸ್ಥಿತರಿದ್ದರು.

ಫೋಟೋ-

17ಕೆಡಿಬಿಪಿ5- ದೊಡ್ಡಬಳ್ಳಾಪುರ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್‌ ಪಕ್ಷದಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಮಾತನಾಡಿದರು.